Bengaluru: All preparations for Tirumala annual Brahmotsava: Brahmotsava from September 24 to October
ಬೆಳಗಾವಿಯಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅನುಮೋದನೆ: ಟಿಟಿಡಿ ಸದಸ್ಯ ಎಸ್ ನರೇಶ್ಕುಮಾರ್



-ಬೆಳಗಾವಿಯಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅನುಮೋದನೆ
– ಉತ್ತರ ಕರ್ನಾಟಕ, ಗೋವಾ ಹಾಗೂ ಮಹರಾಷ್ಟ್ರ ರಾಜ್ಯದ ಭಕ್ತಾದಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶ
*ಬೆಂಗಳೂರು, ಸೆಪ್ಟೆಂಬರ್ 20*: ಉತ್ತರ ಕರ್ನಾಟಕ, ಗೋವಾ ಹಾಗೂ ಮಹರಾಷ್ಟ್ರ ರಾಜ್ಯದ ಭಕ್ತಾದಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ, ಬೆಳಗಾವಿಯಲ್ಲಿ ತಿರುಪತಿ – ತಿರುಮಲ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅನುಮೋದನೆ ನೀಡಿದೆ *ಎಂದು ಟಿಟಿಡಿ ಸದಸ್ಯರಾದ ಎಸ್ ನರೇಶ್ ಕುಮಾರ್ ತಿಳಿಸಿದ್ದಾರೆ.*
ಇಂದು ನಗರದ ಮಲ್ಲೇಶ್ವರಂನ ವೈಯಾಲಿಕಾವಲ್ನಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
*ಬೆಳಗಾವಿಯಲ್ಲಿ ಟಿಟಿಡಿ ದೇವಸ್ಥಾನ:*
ಉತ್ತರ ಕರ್ನಾಟಕ, ಗೋವಾ ಹಾಗೂ ಮಹರಾಷ್ಟ್ರ ರಾಜ್ಯದ ಭಕ್ತಾದಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಬೆಳಗಾವಿಯಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅನುಮೋದನೆ ನೀಡಿದೆ. 16/09/2025 ರಂದು ನಡೆದ ಟಿಟಿಡಿ ಆಡಳಿತ ಮಂಡಳಿ ಸಭೆಯಲ್ಲಿ ಈ ಬಗ್ಗೆ ವಿಸ್ತ್ರುತವಾಗಿ ಚರ್ಚಿಸಲಾಯಿತು. ಬೆಂಗಳೂರು ಹಾಗೂ ದೇಶದ ಇತರೆ ಭಾಗಗಳಲ್ಲಿ ಇರುವಂತೆ ಬೆಳಗಾವಿಯಲ್ಲೂ ದೇವಸ್ಥಾನ ನಿರ್ಮಿಸುವುದರಿಂದ ಆಭಾಗದ ಭಕ್ತಾದಿಗಳಿಗೆ ಅನುಕೂಲವಾಗಲಿದೆ. ಪ್ರತಿ ಬಾರಿಯೂ ತಿರುಪತಿ-ತಿರುಮಲಕ್ಕೆ ಭೇಟಿ ನೀಡುವ ಬದಲಾಗಿ, ಸ್ಥಳೀಯವಾಗಿಯೇ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಭಾಗ್ಯ ಲಭಿಸಲಿದೆ. ಮುಂದಿನ ದಿನಗಳಲ್ಲಿ ಟಿಟಿಡಿ ಅಧ್ಯಕ್ಷರಾದ ಬಿ ಆರ್ ನಾಯ್ಡು ಅವರು ಬೆಳಗಾವಿಗೆ ಭೇಟಿ ನೀಡಿ ಮುಂದಿನ ಕಾರ್ಯಗಳನ್ನು ಪರಿಶೀಲಿಸಲಿದ್ದಾರೆ ಎಂದರು.
*ಸಾಲಕಟ್ಲ ಬ್ರಹ್ಮೋತ್ಸವ:*
ತಿರುಮಲದ ಪಾವಿತ್ರ್ಯತೆಯನ್ನು ಕಾಪಾಡುವುದು ಮತ್ತು ಸಾಮಾನ್ಯ ಭಕ್ತರಿಗೆ ಸುಲಭ ದರ್ಶನ ಒದಗಿಸುವುದು ಆಂಧ್ರಪ್ರದೇಶದ ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಎನ್. ಚಂದ್ರಬಾಬು ನಾಯ್ಡು ಅವರ ಮುಖ್ಯ ಆದ್ಯತೆಯಾಗಿದೆ. ಬ್ರಹ್ಮೋತ್ಸವದ ಸಮಯದಲ್ಲಿ ಈ ನಿಟ್ಟಿನಲ್ಲಿ ನಾವು ವಿಶೇಷ ಗಮನ ಹರಿಸುತ್ತಿದ್ದೇವೆ. ಈ ವರ್ಷದ ವಾರ್ಷಿಕ ಸಾಲಕಟ್ಲ ಬ್ರಹ್ಮೋತ್ಸವವು ಸೆಪ್ಟೆಂಬರ್ 24 ರಿಂದ ಅಕ್ಟೋಬರ್ 2, 2025 ರವರೆಗೆ ನಡೆಯಲಿದೆ ಎಂದರು.
*ಪ್ರಮುಖ ಸಿದ್ದತೆಗಳು:*
ಪ್ರಮುಖ ಧಾರ್ಮಿಕ ವಿಧಿಗಳು: ಬ್ರಹ್ಮೋತ್ಸವವು ಸೆಪ್ಟೆಂಬರ್ 23 ರಂದು ಅಂಕುರಾರ್ಪಣಂ (ಬೀಜ ಬಿತ್ತುವುದು) ಎಂಬ ಪವಿತ್ರ ಕಾರ್ಯಕ್ರಮದೊಂದಿಗೆ ಆರಂಭವಾಗಲಿದೆ. ಇದು ಹಬ್ಬವು ಯಾವುದೇ ಅಡೆತಡೆಗಳಿಲ್ಲದೆ ಯಶಸ್ವಿಯಾಗಿ ನಡೆಯುವಂತೆ ಮಾಡುವ ಧಾರ್ಮಿಕ ವಿಧಿಯಾಗಿದೆ. ಸೆಪ್ಟೆಂಬರ್ 24 ರಂದು ನಡೆಯುವ ಧ್ವಜಾರೋಹಣಂ (ಧ್ವಜಾರೋಹಣ) ಪ್ರಮುಖ ಆಕರ್ಷಣೆಯಾಗಿದ್ದು, ಗರುಡ ಧ್ವಜವನ್ನು ದೇಗುಲದ ಧ್ವಜಸ್ತಂಭದ ಮೇಲೆ ಹಾರಿಸುವುದರ ಮೂಲಕ ದೇವತೆಗಳನ್ನು ಮತ್ತು ಋಷಿಮುನಿಗಳನ್ನು ಹಬ್ಬಕ್ಕೆ ಆಹ್ವಾನಿಸಲಾಗುತ್ತದೆ.
*ಪ್ರಮುಖ ದಿನಗಳು ಮತ್ತು ವಾಹನ ಸೇವೆಗಳು:*
-ಸೆಪ್ಟೆಂಬರ್ 24 (ಬುಧವಾರ): ಧ್ವಜಾರೋಹಣಂ, ರಾತ್ರಿ ಪೆದ್ದ ಶೇಷ ವಾಹನಂ.
-ಸೆಪ್ಟೆಂಬರ್ 28 (ಭಾನುವಾರ): ಇದು ಅತಿ ಪ್ರಮುಖ ದಿನವಾಗಿದ್ದು, ಅದ್ದೂರಿಯಾಗಿ ನಡೆಯುವ ಗರುಡ ಸೇವೆ ಭಕ್ತರ ಪ್ರಮುಖ ಆಕರ್ಷಣೆಯಾಗಿದೆ. ಈ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು ದೇವರ ದರ್ಶನಕ್ಕೆ ಆಗಮಿಸಲಿದ್ದಾರೆ
-ಅಕ್ಟೋಬರ್ 1 (ಬುಧವಾರ): ಬೆಳಗ್ಗೆ ರಥೋತ್ಸವಂ.
-ಅಕ್ಟೋಬರ್ 2 (ಗುರುವಾರ): ಕೊನೆಯ ದಿನ, ಚಕ್ರ ಸ್ನಾನಂ ಮತ್ತು ಧ್ವಜಾವರೋಹಣಂ (ಧ್ವಜವನ್ನು ಕೆಳಗಿಳಿಸುವುದು) ವಿಧಿಗಳೊಂದಿಗೆ ಬ್ರಹ್ಮೋತ್ಸವವು ಮುಕ್ತಾಯವಾಗುತ್ತದೆ.
*ವ್ಯವಸ್ಥೆಗಳು:* ಸಾಲಕಟ್ಲ ಬ್ರಹ್ಮೋತ್ಸವವನ್ನು ಸುಗಮವಾಗಿ ನಡೆಸಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಟಿಟಿಡಿಯ ಎಲ್ಲಾ ಇಲಾಖೆಗಳು ಸೂಕ್ಷ್ಮ ಮಟ್ಟದ ಯೋಜನೆಗಳನ್ನು ಸಿದ್ಧಪಡಿಸಿವೆ. ಭಕ್ತರಿಗೆ ಯಾವುದೇ ಅನಾನುಕೂಲತೆ ಆಗದಂತೆ ನೋಡಿಕೊಳ್ಳಲು ಈ ಕ್ರಮಗಳನ್ನು ಕೈಗೊಳ್ಳಲಾಗಿದೆ.
*ಮುಖ್ಯಮಂತ್ರಿಗಳ ಭೇಟಿ*: ಆಂಧ್ರಪ್ರದೇಶದ ಮುಖ್ಯಮಂತ್ರಿಗಳು ಸೆಪ್ಟೆಂಬರ್ 24 ರಂದು ಧ್ವಜಾರೋಹಣದ ದಿನದಂದು ಪಟ್ಟುವಸ್ತ್ರಗಳನ್ನು ಅರ್ಪಿಸುವರು ಮತ್ತು ಸೆಪ್ಟೆಂಬರ್ 25 ರಂದು ಪಿಎಸಿ 5 ಉದ್ಘಾಟಿಸುವರು.
*ಕಲ್ಯಾಣ ಕಟ್ಟೆ* ಗೆ ಹೆಚ್ಚುವರಿ ಯಾಗಿ 1500 ಜನರನ್ನು ನೇಮಿಸಲಾಗಿದೆ.
*ವಸತಿ ಸೌಕರ್ಯ*: ಬ್ರಹ್ಮೋತ್ಸವದ ಒಂಬತ್ತು ದಿನಗಳಲ್ಲಿ ಶಿಫಾರಸು ಪತ್ರಗಳ ಮೂಲಕ ಕೊಠಡಿಗಳನ್ನು ರದ್ದುಪಡಿಸಲಾಗಿದೆ. ಈ ಅವಧಿಯಲ್ಲಿ 3,500 ಕೊಠಡಿಗಳನ್ನು ಆಫ್ಲೈನ್ನಲ್ಲಿ ಹಂಚಿಕೆ ಮಾಡಲಾಗುವುದು, ಸಾಮಾನ್ಯ ಭಕ್ತರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು.
*ದರ್ಶನ ವ್ಯವಸ್ಥೆ*: ವಾಹನ ಸೇವೆಗಳನ್ನು ವೀಕ್ಷಿಸಲು ಭಕ್ತರಿಗಾಗಿ 36 ಎಲ್ಇಡಿ ಪರದೆಗಳನ್ನು ಅಳವಡಿಸಲಾಗುವುದು. ಗರುಡ ಸೇವೆಯ ದಿನವನ್ನು ಹೊರತುಪಡಿಸಿ ಪ್ರತಿದಿನ 1.16 ಲಕ್ಷ ವಿಶೇಷ ದರ್ಶನ ಟಿಕೆಟ್ಗಳು ಮತ್ತು 25,000 ಎಸ್.ಎಸ್.ಡಿ. ಟೋಕನ್ಗಳನ್ನು ವಿತರಿಸಲಾಗುವುದು. ವಿಐಪಿ ಬ್ರೇಕ್ ದರ್ಶನವನ್ನು ಸ್ವತಃ ಹಾಜರಾಗುವ ವಿಐಪಿಗಳಿಗೆ ಮಾತ್ರ ಸೀಮಿತಗೊಳಿಸಲಾಗಿದೆ. ಉಳಿದ ಎಲ್ಲಾ ಸವಲತ್ತು ದರ್ಶನಗಳನ್ನು ರದ್ದುಗೊಳಿಸಲಾಗಿದೆ.
*ಲಡ್ಡುಗಳ ದಾಸ್ತಾನು:* ಪ್ರತಿದಿನ 8 ಲಕ್ಷ ಲಡ್ಡುಗಳನ್ನು ಸಿದ್ಧವಾಗಿ ಇರಿಸಿಕೊಳ್ಳಲಾಗುವುದು.
*ಸಹಾಯ ಕೇಂದ್ರಗಳು*: ಭಕ್ತರಿಗೆ ಮಾಹಿತಿ ನೀಡಲು 20 ಸಹಾಯ ಕೇಂದ್ರಗಳನ್ನು (ಹತ್ತು ಹೆಚ್ಚುವರಿ) ತೆರೆಯಲಾಗಿದೆ.
*ಅನ್ನಪ್ರಸಾದಂ:* ಗರುಡ ಸೇವೆ ದಿನದಂದು ಗ್ಯಾಲರಿಗಳಲ್ಲಿರುವ ಭಕ್ತರಿಗೆ 14 ಬಗೆಯ ತಿಂಡಿ-ತಿನಿಸುಗಳನ್ನು ವಿತರಿಸಲಾಗುವುದು. ಅನ್ನಪ್ರಸಾದಂ ಕಾಂಪ್ಲೆಕ್ಸ್ನಲ್ಲಿ ಪ್ರತಿದಿನ ಬೆಳಿಗ್ಗೆ 8 ರಿಂದ ರಾತ್ರಿ 11 ರವರೆಗೆ ಅನ್ನಪ್ರಸಾದ ಸೇವೆ ಇರುತ್ತದೆ.
*ಪಾರ್ಕಿಂಗ್ ಸೌಲಭ್ಯ*: ತಿರುಮಲದಲ್ಲಿ ಸುಮಾರು 4,000 ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಇದೆ. ತಿರುಪತಿಯಲ್ಲಿ ದ್ವಿಚಕ್ರ ಮತ್ತು ನಾಲ್ಕು ಚಕ್ರ ವಾಹನಗಳಿಗಾಗಿ ಒಟ್ಟು 5,250 ಮತ್ತು 2,700 ಪಾರ್ಕಿಂಗ್ ಸ್ಥಳಗಳು ಲಭ್ಯವಿವೆ.
*ಆರ್.ಟಿ.ಸಿ. ಬಸ್ ಸೇವೆ:* ತಿರುಪತಿಯ ವಿವಿಧ ಪಾರ್ಕಿಂಗ್ ಸ್ಥಳಗಳಿಂದ ತಿರುಮಲಕ್ಕೆ ಭಕ್ತರನ್ನು ಕರೆದೊಯ್ಯಲು ಆರ್.ಟಿ.ಸಿ. ಬಸ್ಸುಗಳು ಲಭ್ಯವಿರುತ್ತವೆ. ಇತರ ದಿನಗಳಲ್ಲಿ 1,900 ಟ್ರಿಪ್ಗಳು ಮತ್ತು ಗರುಡ ಸೇವೆ ದಿನದಂದು 3,200 ಟ್ರಿಪ್ಗಳು ಇರುತ್ತವೆ.
*ಭದ್ರತಾ ವ್ಯವಸ್ಥೆ*: 2,000 ಟಿಟಿಡಿ ಭದ್ರತಾ ಸಿಬ್ಬಂದಿ, 4,700 ಪೊಲೀಸ್ ಸಿಬ್ಬಂದಿ, 3,500 ಶ್ರೀವಾರಿ ಸೇವಕರು ಮತ್ತು 450 ಟಿಟಿಡಿ ಹಿರಿಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. 3,000 ಸಿಸಿಟಿವಿ ಕ್ಯಾಮೆರಾಗಳನ್ನು ಕಮಾಂಡ್ ಕಂಟ್ರೋಲ್ ರೂಮ್ಗೆ ಸಂಪರ್ಕಿಸಲಾಗಿದೆ.
*ಇತರ ಸಿಬ್ಬಂದಿ*: ಬ್ರಹ್ಮೋತ್ಸವಕ್ಕಾಗಿ 2,300 ನೈರ್ಮಲ್ಯ ಸಿಬ್ಬಂದಿ ಜೊತೆಗೆ ಹೆಚ್ಚುವರಿಯಾಗಿ 960 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. 1,150 ಕೇಶಮುಂಡನ ಸಿಬ್ಬಂದಿಗಳು ಸೇವೆ ಸಲ್ಲಿಸಲಿದ್ದಾರೆ.
*ಆರೋಗ್ಯ ಸೇವೆ*: 50 ವೈದ್ಯರು ಮತ್ತು 60 ಅರೆವೈದ್ಯಕೀಯ ಸಿಬ್ಬಂದಿ ಹಾಗೂ ಡಜನ್ಗಿಂತಲೂ ಹೆಚ್ಚು ಆಂಬ್ಯುಲೆನ್ಸ್ ಸೇವೆಗಳು ಲಭ್ಯವಿರುತ್ತವೆ.
*ಸಾಂಸ್ಕೃತಿಕ ಕಾರ್ಯಕ್ರಮಗಳು*: ಬ್ರಹ್ಮೋತ್ಸವದ ಸಮಯದಲ್ಲಿ ಮೊದಲ ಬಾರಿಗೆ 28 ರಾಜ್ಯಗಳಿಂದ 298 ಸಾಂಸ್ಕೃತಿಕ ತಂಡಗಳು ಪ್ರದರ್ಶನ ನೀಡಲಿವೆ. ಗರುಡ ಸೇವೆ ದಿನದಂದು 20 ರಾಜ್ಯಗಳಿಂದ 37 ತಂಡಗಳು ತಮ್ಮ ಕಲಾ ಪ್ರಕಾರಗಳನ್ನು ಪ್ರಸ್ತುತಪಡಿಸಲಿವೆ.
*ಬೆಂಗಳೂರು ಟಿಟಿಡಿ ದೇವಸ್ಥಾನದ ಸುಪರಿಂಟೆಂಡೆಂಟ್ ಜಯಂತಿ* ಮಾತನಾಡಿ ಈ 10 ದಿನಗಳ ಕಾಲ ವೈಯಾಲಿಕಾವಲ್ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಆಯೋಜಿಸಲಾಗಿದೆ. ಭಕ್ತಾದಿಗಳು ಈ ವಿಶೇಷ ಪೂಜೆಯಲ್ಲಿ ಭಾಗವಹಿಸಿ, ಸ್ವಾಮಿಯ ವಿಶೇಷ ಅಲಂಕಾರ ಕಣ್ಣು ತುಂಬಿಕೊಳ್ಲಬಹುದಾಗಿದೆ ಎಂದರು.