ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕಾ ರಂಗಕ್ಕೆ ಬಹಳ ಪ್ರಾಮುಖ್ಯತೆಇದೆ ಕಾರಣಕ್ಕೆ  ಪತ್ರಕರ್ತರು ಸಾಮಾಜಿಕ ಜವಾಬ್ದಾರಿ ಹೊಂದಿರಬೇಕಾಗಿರುತ್ತದೆ : ಮಾಧ್ಯಮ ಅಕಾಡೆಮಿ ಸದಸ್ಯರಾದ ಕೆ. ನಿಂಗಜ್ಜ

 

Journalists must be socially responsible because the press is very important in a democratic system: K. Ningajja, member of the Madhyam Academy

ಗಂಗಾವತಿ:  ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕಾ ರಂಗಕ್ಕೆ ಬಹಳ ಪ್ರಾಮುಖ್ಯತೆಇದೆ ಕಾರಣಕ್ಕೆ  ಪತ್ರಕರ್ತರು ಸಾಮಾಜಿಕ ಜವಾಬ್ದಾರಿ ಹೊಂದಿರಬೇಕಾಗಿರುತ್ತದೆ ಎಂದು  ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾದ ಕೆ. ನಿಂಗಜ್ಜ ಹೇಳಿದರು.

ಜಾಹೀರಾತು

ಅವರು    ಸೋಮವಾರ ಸೆ,22 ರಂದು  ನಗರದ ಐ.ಎಂ.ಎ ಹಾಲ್‌ ನಲ್ಲಿ  ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಕೊಪ್ಪಳ ಜಿಲ್ಲಾ ಘಟಕದಿಂದ ಗಂಗಾವತಿ ತಾಲೂಕ ಘಟಕ ಉದ್ಘಾಟನೆ. ಪದಾಧಿಕಾರಿಗಳ ಪದಗ್ರಹಣ ಹಾಗೂ ವಿಶ್ವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ 

ಪತ್ರಕರ್ತರು ಸಾಮಾಜಿಕ ಜವಾಬ್ದಾರಿ ಕೊಂದಿರಬೇಕು ಆ ಮೂಲಕ ಸಮ ಸಮಾಜದ ಕನಸನ್ನು ನಸು ಮಾಡುವ ನಿಟ್ಟಿನಲ್ಲಿ ಪ್ರಜಾಪ್ರಭುತ್ವ ಸಂವಿಧಾನವನ್ನು ಳಗೊಂಡಂತೆ ನಿತ್ಯವೂ ಸುದ್ದಿ ಮಾಡುವಂತೆ

ಪತಿಕಾ ಮಾಧ್ಯಮದ ಇತಿಹಾಸ ಕುರಿತು ತಿಳಿಸುತ್ತಾ, ಮಾಧ್ಯಮ ಆಕಾಡೆಮಿಯಿಂದ ಹಮ್ಮಿಕೊಳ್ಳಲಾಗುತ್ತಿರುವ ಕಾರ್ಯಕ್ರಮಗಳ ಕುರಿತಾಗಿ ಮಾಹಿತಿ ನೀಡಿ, ಪತಕರ್ತರು ಅಮಾಜಿಕ ಜವಾಬ್ದಾರಿ ಹೊಂದಿರಬೇಕು. ಪಜಾಪಭುತ್ವ ‘ವಸ್ಥೆಯಲ್ಲಿ ಪತಿಕಾ ರಂಗಕ್ಕೆ ಬಹಳ ಪ್ರಾಮುಖ್ಯತೆ ಇದ್ದು, ವರ ಪಾಮುಖ್ಯತೆಯನ್ನು ಪತಕರ್ತರು ಉಳಿಸಿಕೊಂಡು ಯೋಗಬೇಕು. ಈಗಿನ ಆಧುನಿಕ ಜಗತ್ತಿನಲ್ಲಿ ಎಷ್ಟೇ ಮಾಜಿಕ ಜಾಲತಾಣ ಅಭಿವೃದ್ಧಿ ಹೊಂದಿದ್ದರೂ, ಮುದಣಾ ಮಾಧ್ಯಮಕ್ಕೆ ಅದರದೇ ಆದ ಮಹತ್ವ ಹಾಗೂ ಅಮುಖ್ಯತೆ ಇದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ರಾಜ್ಯಾಧ್ಯಕ್ಷರಾದ ಜಿ.ಎಂ ರಾಜಶೇಖರ ವಹಿಸಿ ಪ್ರಾಸ್ತಾವಿಕ ಮಾತನಾಡಿ, ಈ ಸಂಘಕ್ಕೆ 70-80 ವರ್ಷಗಳ ಇತಿಹಾಸವಿದ್ದು, 1936 ರಲ್ಲಿ ಕೇವಲ ತಾಲೂಕು ಸಂಘಟನೆಯಾಗಿ, ಸ್ವಾತಂತ್ರ್ಯಾನಂತರದಲ್ಲಿ ಆಗಿನ ಮುಖ್ಯಮಂತ್ರಿಗಳಾದ ನಿಜಲಿಂಗಪ್ಪ ಅವರಿಂದ ಜಿಲ್ಲಾ ಸಂಘವಾಗಿ ಮಾರ್ಪಟ್ಟು ಈಗ ರಾಜ್ಯಮಟ್ಟದ ಸಂಘವಾಗಿ ಬೆಳೆದಿದೆ.

ಇತ್ತೀಚೆಗೆ ಈ ಸಂಘವು ಉದ್ಘಾಟನೆಗೊಂಡು ರಾಜ್ಯದಲ್ಲಿ ಮೈಸೂರು, ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕ ಹಾಗೂ ಬೆಂಗಳೂರು ಎಂದು ನಾಲ್ಕು ಭಾಗಗಳನ್ನಾಗಿ ಮಾಡಿಕೊಂಡು ಸಂಘಟನೆಯನ್ನು ಬೆಳೆಸುವ ಮೂಲಕ ಪತ್ರಕರ್ತರ ಸಮಸ್ಯೆಗಳು, ಅವರ ಮೇಲಾಗುತ್ತಿರುವ ಕಿರುಕುಳಗಳು, ಅವರ ಆರ್ಥಿಕ ಪರಿಸ್ಥಿತಿ ಹಾಗೂ ಸರ್ಕಾರದಿಂದ ಅವರಿಗೆ ಸಿಗಬೇಕಾದ ಭದ್ರತೆಯ ಕುರಿತಾಗಿ ಸರ್ಕಾರದ ಮಟ್ಟದಲ್ಲಿ ಗಮನಕ್ಕೆ ತರಲು ಸಂಘವು ಸಿದ್ಧವಾಗಿದೆ ಎಂದು ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಪರಣ್ಣ ಮುನವಳ್ಳಿಯವರು. ನಗರಸಭೆಯ ಅಧ್ಯಕ್ಷ ಹೀರಾಬಾಯಿ ಸಿಂಗ್, ಬಿಜೆಪಿ ಮುಖಂಡರಾದ ವಿರುಪಾಕ್ಷಪ್ಪ ಸಿಂಗನಾಳ, ಮಾಜಿ ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ ವಕೀಲರು, ಜಿ. ಶೀಧರ ಕೇಸರಹಟ್ಟಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಎಸ್.ಬಿ ಖಾದಿ, ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಬಿ. ನಟೇಶ್, ಆಟಲ್ ಹಾರ್ಟ್ಸ್ ಶಾಲೆಯ ಕಾರ್ಯದರ್ಶಿ ಜಗನ್ನಾಥ ಆಲಂಪಲ್ಲ, ಹಿರಿಯ ಕಾರ್ಮಿಕ ಮುಖಂಡ ಜಿ. ಭಾರದ್ವಾಜ್, ಕಾಂಗ್ರೆಸ್ ಮುಖಂಡ ಎಸ್.ಬಿ ಖಾದಿ, ಕನ್ನಡಪರ ಸಂಘಟನೆ ಮುಖಂಡ ಸೈಯ್ಯದ್ ಜಿಲಾನಿ ಪಾಷಾ ಖಾದಿ, ದಲಿತಪರ ಸಂಘಟನೆಗಳ ಮುಖಂಡರಾದ ಹುಲುಗಪ್ಪ ಮಾಗಿ, ಹಂಪೇಶ ಹರಿ ಗೋಲು, ಶಂಕರ್, ಹುಸೇನಪ್ಪ ಹಂಚಿನಾಳ, ಮಂಜುನಾಥ ಕಳ್ಳಮನಿ ಸೇರಿದಂತೆ ಇನ್ನಿತರರು ಪತಕರ್ತರು ಎದುರಿಸು ತ್ತಿರುವ ಸವಾಲುಗಳ ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ಸಂಘದ ಕೊಪ್ಪಳ ಜಿಲ್ಲಾಧ್ಯಕ್ಷರಾದ ರಮೇಶ ಕೋಟಿಯವರಿಗೆ ರಾಜ್ಯಾಧ್ಯಕ್ಷರು ನೇಮಕಾತಿ ಪತ್ರ ವಿತರಣೆ ಮಾಡಿದರು. ಆದೇರೀತಿ ಗಂಗಾವತಿ ತಾಲೂಕು ಅಧ್ಯಕ್ಷ ಸಿ.ಡಿ ರಾಮಕೃಷ್ಣ ಹಾಗೂ ಪ್ರಧಾನ ಕಾರ್ಯದರ್ಶಿ ಚನ್ನಬಸವ ಮಾನವಿ

ಈ ಸಂರ್ಧದಲ್ಲಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ವಸಂತಕುಮಾರ, ರಾಜ್ಯ ಪದಾಧಿಕಾರಿ ಪ್ರಶಾಂತ್ ರವರು ಹಾಗೂ ರಾಜ್ಯ ಸಮಿತಿ ಸದಸ್ಯ ಹೆಚ್. ಮಲ್ಲಿಕಾರ್ಜುನ ಹೊಸಕೇರಾ, ಗಂಗಾವತಿ ಲಯನ್ಸ್ ಕ್ಲಬ್ ಅಧ್ಯಕ್ಷ ಡಾ. ಶಿವಕುವರಾರ ಮಾಲಿಪಾಟೀಲ್ ಉಪಸ್ಥಿತರಿದ್ದರು.

ಕಾರ್ಯಕ್ರಮ ಕ್ಕೆ ಕೊಪ್ಪಳ, ತಾವರಗೇರಾ ಇಲಕಲ್ಲ,ಬಳ್ಳಾರಿ,ಹೊಸಪೆಟೆ,ರಾಯಚೂರು,ಆಗಮಿಸಿದ್ದರು.

ರಾಜ್ಯ ಘಟಕದಿಂದ ವಸತಿ ಯಿಂದ ಮಾಧ್ಯಮಶ್ರೀ ಪ್ರಶಸ್ತಿ ಪುರಸ್ಕೃತ ಹೆಚ್.  ಮಲ್ಲಿಕಾರ್ಜುನ ಹೊಸಕೇರಾ ಇವರಿಗೆ  ಕೊಪ್ಪಳ ಜಿಲ್ಲಾಧ್ಯಕ್ಷ ವೇದಿಕೆ ಮೇಲಿದ್ದ ಗಣ್ಯ ರಿಂದ ವಿಶೇಷ   ಸನ್ಮಾನಿಸಿ ಗೌರವಿಸಲಾಯಿತು

ಕೊಪ್ಪಳ ಜಿಲ್ಲಾಧ್ಯಕ್ಷ ರಮೇಶ ಕೋಟಿ ಅವರಿಗೆ ಹಾಗೂ  ಗಂಗಾವತಿ ತಾಲೂಕು ಅದ್ಯಕ್ಷ ರಾಮಕೃಷ್ಣ ಸಿ ಡಿ,ಮತ್ತು ಪ್ರದಾನ ಕಾರ್ಯದರ್ಶಿ ಚೆನ್ನಬಸ ಮಾನವಿ  ಇವರುಗಳಿಗೆ ನೇಮಕಾತಿ ಪತ್ರ ವಿತರಿಸಿ.  ಎಲ್ಲಾ ಪದಾಧಿಕಾರಿಗಳಿಗೆ  ಸನ್ಮಾನಿಸಲಾಯಿತು.

ಶಿಕ್ಷಕ ಶಿವಾನಂದ ತಿಮ್ಮಾಮರ ನಿರೂಪಿಸಿದ ಈ ಕಾರ್ಯಕ್ರಮದಲ್ಲಿ ರಮೇಶ ಕೋಟಿ ಸ್ವಾಗತಿಸಿದರೆ, ಜಿ. ಶ್ರೀನಿವಾಸ ವಂದನಾರ್ಪಣೆ ಸಲ್ಲಿಸಿದರು.

.

Mallikarjun

Recent Posts

ಹನೂರು ವಿಧಾನಸಭಾ ಕ್ಷೇತ್ರದಲ್ಲಿ ನೀರಿನ ಸಮಸ್ಯೆಗಳಗೆ ಸ್ಪಂದಿಸಿದ ಡಾಕ್ಟರ್ ದತ್ತೇಶ್ ಕುಮಾರ್

Dr. Dattatesh Kumar responded to the water problems in Hanur assembly constituency. ಹನೂರು ವಿಧಾನಸಭಾ ಕ್ಷೇತ್ರದಲ್ಲಿ…

8 minutes ago

ಆನೆಗೊಂದಿ ಗ್ರಾಮಗಳನ್ನು ಕೋರ್ ಜೋನ್‌ನಿಂದ ಹೊರಗಿಡುವಂತೆ ಒತ್ತಾಯ

Demand to keep Anegondi villages out of the core zone ಆನೆಗೊಂದಿ ಗ್ರಾಮಗಳನ್ನು ಕೋರ್ ಜೋನ್‌ನಿಂದ ಹೊರಗಿಡುವಂತೆ…

12 minutes ago

ಮಕ್ಕಳೇಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಜೀವನದಲ್ಲಿ ಮಹತ್ವದ ಘಟ್ಟ.

SSLC is an important milestone in a student's life. ಮಕ್ಕಳೇಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಜೀವನದಲ್ಲಿ ಮಹತ್ವದ ಘಟ್ಟ. ಮೂಡಲಗಿ:…

8 hours ago