ಜಿಲ್ಲಾ ಕಾಂಗ್ರೆಸ್‌ಗೆ ಕಾರ್ಯದರ್ಶಿಯಾಗಿ ವಿಶಾಲಾಕ್ಷಿ ನೇಮಕ

Vishalakshi appointed as secretary of District Congress
 

ಕೊಪ್ಪಳ: ತಾಲೂಕಿನ ಕಿನ್ನಾಳ ಗ್ರಾಮದ ವಿಶಾಲಾಕ್ಷಿ ವಿರೇಶ ತಾವರಗೇರಿ ಅವರನ್ನು ಜಿಲ್ಲಾ ಕಾಂಗ್ರೆಸ್‌ಗೆ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಡಿಸಿಸಿ ಅಧ್ಯಕ್ಷರು, ಮಾಜಿ ಸಚಿವರಾದ ಅಮರೇಗೌಡ ಬಯ್ಯಾಪೂರ ಅವರು ಆದೇಶ ನೀಡಿದರು.
ಪಕ್ಷದಲ್ಲಿ ನಿಷ್ಠೆಯಿಂದ ಕೆಲಸ ಮಾಡುವವರನ್ನು ಗುರುತಿಸಿ ಹುದ್ದೆಗಳನ್ನು ನೀಡುತ್ತಿದ್ದು, ಗಂಗಾವತಿ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಕಿನ್ನಾಳ ಗ್ರಾಮದ ವಿಶಾಲಾಕ್ಷಿ ಅವರೂ ಸಹ ಸಕ್ರಿಯ ಕಾರ್ಯಕರ್ತರಾಗಿದ್ದು, ಮೋಚಿ ಸಮುದಾಯಕ್ಕೂ ಒಂದು ಅಧ್ಯತೆ ನೀಡಿ ಅವರ ನೇಮಕ ಮಾಡಿರುವದಾಗಿ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪುರ ಹೇಳಿದರು.
ಈ ಸಂದರ್ಭದಲ್ಲಿ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅವರು, ನೂತನ ಕಾರ್ಯದರ್ಶಿಗಳಿಗೆ ಶುಭ ಕೋರಿ ಪಕ್ಷ ಸಂಘಟಿಸುವಂತೆ ಕರೆ ನೀಡಿದರು. ಕಾಂಗ್ರೆಸ್ ನಾಯಕಿ ಜ್ಯೋತಿ ಎಂ. ಗೊಂಡಬಾಳ ಅವರು ಮಾತನಾಡಿ, ಮಹಿಳೆರಿಗೆ ಡಿಸಿಸಿಯಲ್ಲಿ ಮೊದಲ ಬಾರಿಗೆ ಹೆಚ್ಚಿನ ಅವಕಾಶ ನೀಡಿದ್ದು ಸಂತಸ ತಂದಿದೆ, ಮುಂದಿನ ದಿನಗಳಲ್ಲಿ ಜಿಲ್ಲೆಯ ಮಹಿಳಾ ಶಕ್ತಿಯನ್ನು ಒಗ್ಗೂಡಿಸುವದಾಗಿ ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಎಸ್. ಬಿ. ನಾಗರಳ್ಳಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕರ ಉಪಾಧ್ಯಕ್ಷ ಮಂಜುನಾಥ ಜಿ. ಗೊಂಡಬಾಳ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣಾ ಇಟ್ಟಂಗಿ, ಮುಖಂಡರುಗಳಾದ ಸುರೇಶ ದಾಸರಡ್ಡಿ, ಅಕ್ಬರ್ ಪಾಶಾ ಪಲ್ಟನ್, ಸುಮಂಗಲಾ ನಾಯಕ, ಸೌಭಾಗ್ಯ ಗೊರವರ, ಅನಿತಾ ಅಳ್ಳಮ್ಮನವರ, ನವೋದಯ ವಿರುಪಾಕ್ಷಪ್ಪ ಇತರರು ಇದ್ದರು.

ಜಾಹೀರಾತು
Mallikarjun

Share
Published by
Mallikarjun

Recent Posts

ಇಂದರಗಿಯಲ್ಲಿ ಅದ್ದೂರಿಯಾಗಿ ಜರುಗಿದ ಶಾಲಾ ವಾರ್ಷಿಕೋತ್ಸವ

School anniversary celebrated with grandeur in Indaragi ಇಂದರಗಿಯಲ್ಲಿ ಅದ್ದೂರಿಯಾಗಿ ಜರುಗಿದ ಶಾಲಾ ವಾರ್ಷಿಕೋತ್ಸವ ಗಂಗಾವತಿ:ಮಾ.14:ಶಾಲಾ ವಾರ್ಷಿಕೋತ್ಸವವು ಕೇವಲ…

16 hours ago

ಭೋವಿ ಸಮುದಾಯದ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ಪುಷ್ಪಾಂಜಲಿ ಗುನ್ನಾಳ ಆಯ್ಕೆ

Pushpanjali Gunna elected as district president of Bhovi community women's unit ಭೋವಿ ಸಮುದಾಯದ ಮಹಿಳಾ ಘಟಕದ…

16 hours ago

ವಾಣಿಜ್ಯ ಉದ್ದೇಶಕ್ಕೆ ಗೃಹ ಬಳಕೆ ಅನಿಲ ಬಳಸಿದರೆ ಕಾನೂನು ಕ್ರಮ

Legal action if domestic gas is used for commercial purposes ವಾಣಿಜ್ಯ ಉದ್ದೇಶಕ್ಕೆ ಗೃಹ ಬಳಕೆ ಅನಿಲ…

2 days ago

ಪ್ಲಾಸ್ಟಿಕ್ ಮುಕ್ತ ಜೀವನಶೈಲಿ ನಮ್ಮದಾಗಲಿ: ನಾಗರಾಜ್ ಎಸ್ ಗುತ್ತೇದಾರ್

Let's have a plastic-free lifestyle: Nagaraj S. Guttedar ಪ್ಲಾಸ್ಟಿಕ್ ಮುಕ್ತ ಜೀವನಶೈಲಿ ನಮ್ಮದಾಗಲಿ: ನಾಗರಾಜ್ ಎಸ್ ಗುತ್ತೇದಾರ್…

2 days ago