Lions Club celebrates Teachers' Day and Best Teacher Award Ceremony-2025 ಗಂಗಾವತಿ: ಲಯನ್ಸ್ ಕ್ಲಬ್ ಗಂಗಾವತಿ, ಲಯನ್ಸ್ ಚಾರಿಟೇಬಲ್ ಟ್ರಸ್ಟ್, ಲಯನ್ಸ್ ಶಿಕ್ಷಣ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಸೆಪ್ಟೆಂಬರ್-೨೨ ಸೋಮವಾರ ಐ.ಎಂ.ಎ ಹಾಲ್ನಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಲಯನ್ಸ್ ಕ್ಲಬ್ ಸದಸ್ಯರು ಹಾಗೂ ಖ್ಯಾತ ವೈದ್ಯರಾದ ಡಾ,ಜಿ ಚಂದ್ರಪ್ಪ ಸರ್ ಇವರು ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಹಿರಿಯ ಲಯನ್ಸ್ ಸದಸ್ಯರಾದ ಡಾ, ವಿ.ವಿ ಚಿನಿವಾಲರ್ ಇವರು ವಹಿಸಿದ್ದರು.
ಶಿಕ್ಷಕರಾದ ಉಲ್ಲಾಸರೆಡ್ಡಿ ಸ್ವಾಗತಿಸಿದರೆ, ಲಯನ್ಸ್ ಕ್ಲಬ್ ಅಧ್ಯಕ್ಷರಾದ ಡಾ,ಶಿವಕುಮಾರ ಮಾಲಿಪಾಟೀಲ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ನಂತರ ಮುಖ್ಯ ಅತಿಥಿಗಳು ಶಿಕ್ಷಕರ ಮಹತ್ವ, ಜವಾಬ್ದಾರಿ &ಅರ್ಪಣ ಮನೋಭಾವ ಕುರಿತು ಮಾತನಾಡಿದರು.
ಪ್ರಸ್ತುತ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ವಿವಿಧ ಶಾಲೆಗಳ ಏಳು ಶಿಕ್ಷಕರಾದ ಮಧುಕುಮಾರ ಕುಲಕರ್ಣಿ, ಯಮನೂರಪ್ಪ, ಮೆಹಬೂಬ ಕಿಲ್ಲೇದಾರ್, ಶ್ರೀಮತಿ ವಿಜಯಾ ದೊಡ್ಡ ಬಿದರಿ, ಶ್ರೀಮತಿ ಶರಣಮ್ಮ, ಶ್ರೀಮತಿ ಕಾಳಮ್ಮ, ಪರಶುರಾಮ್ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿದ ಶಿಕ್ಷಕರು ಹರ್ಷ ವ್ಯಕ್ತಪಡಿಸಿ, ಲಯನ್ಸ್ ಕ್ಲಬ್ಗೆ ಧನ್ಯವಾದಗಳನ್ನು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಡಾ, ಜಿ. ಚಂದ್ರಪ್ಪ ಸರ್ ಪ್ರತಿಯೊಬ್ಬರ ಜೀವನದಲ್ಲಿ ಗುರುಗಳು ಮಹತ್ವರ ಕೊಡುಗೆ ನೀಡಿರುತ್ತಾರೆ, ಅವರ ಋಣವನ್ನು ತೀರಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ತಾಲ್ಲೂಕಾ ದೈಹಿಕ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಸರಸ್ವತಿ, ಲಯನ್ಸ್ ಕ್ಲಬ್ ಹಿರಿಯ ಸದಸ್ಯರಾದ ಡಾ, ಜಂಬುನಾಥಗೌಡ, ಡಾ,ಸೋಮಪ್ಪ, ಲ. ಸೋಮನಾಥ ಪಟ್ಟಣಶೆಟ್ಟಿ,
ಲ. ಸಿದ್ದಣ್ಣ ಜಕ್ಕಲಿ, ಪ್ರಭು ರೆಡ್ಡಿ, ಲಯನ್ಸ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿಗಳಾದ ಚಂದ್ರಗೌಡ ಪೊ.ಪಾಟೀಲ್, ಕ್ಲಬ್ ಖಜಾಂಚಿಗಳಾದ ಲ. ಶಿವಕುಮಾರ ಗಾಳಿ ಉಪಸ್ಥಿತರಿದ್ದರು.
School anniversary celebrated with grandeur in Indaragi ಇಂದರಗಿಯಲ್ಲಿ ಅದ್ದೂರಿಯಾಗಿ ಜರುಗಿದ ಶಾಲಾ ವಾರ್ಷಿಕೋತ್ಸವ ಗಂಗಾವತಿ:ಮಾ.14:ಶಾಲಾ ವಾರ್ಷಿಕೋತ್ಸವವು ಕೇವಲ…
Pushpanjali Gunna elected as district president of Bhovi community women's unit ಭೋವಿ ಸಮುದಾಯದ ಮಹಿಳಾ ಘಟಕದ…
Hudali puja for bridge and CC road work at a cost of four and a…
Legal action if domestic gas is used for commercial purposes ವಾಣಿಜ್ಯ ಉದ್ದೇಶಕ್ಕೆ ಗೃಹ ಬಳಕೆ ಅನಿಲ…
Municipal Council budget pre-meeting on March 16thPublic invited to participate by civic commissioner ಮಾ.16ರಂದು ನಗರಸಭೆ…
Let's have a plastic-free lifestyle: Nagaraj S. Guttedar ಪ್ಲಾಸ್ಟಿಕ್ ಮುಕ್ತ ಜೀವನಶೈಲಿ ನಮ್ಮದಾಗಲಿ: ನಾಗರಾಜ್ ಎಸ್ ಗುತ್ತೇದಾರ್…