ಅಲ್ಪಸಂಖ್ಯಾತ ಇಲಾಖೆ ಮದರಸಾಗೆ 5 ಲಕ್ಷ ರೂ ಅನುದಾನ ನೀಡಿರುವ ಕುರಿತು ಕಾನೂನಿನ ಎಲ್ಲಾ ಅಂಶಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಿ: ಹೈಕೋರ್ಟ್ ಆದೇಶ

High Court orders: Examine all legal aspects and take action regarding the Minority Department's grant of Rs 5 lakh to the Madrasa

ಬೆಂಗಳೂರು; ಥಣಿಸಂದ್ರದ ಸಾಮರ ಇಂಟರ್ ನ್ಯಾಷನಲ್ ಇಸ್ಲಾಮಿಕ್ ಸ್ಕೂಲ್ ಮಾನ್ಯತೆಯನ್ನು ಶಾಲಾ ಶಿಕ್ಷಣ ಇಲಾಖೆ ರದ್ದುಪಡಿಸಿದ್ದು, ಶಾಲೆ ನಡೆಸುತ್ತಿರುವ ಮದರಸಾಗೆ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ನೀಡಿರುವ ಐದು ಲಕ್ಷ ರೂಪಾಯಿ ಅನುದಾನ ವಾಪಸ್ ಪಡೆಯುವುದು ಸೇರಿದಂತೆ ಎಲ್ಲಾ ಅಂಶಗಳನ್ನು ಕಾನೂನಿನನ್ವಯ ಪರಿಶೀಲಿಸುವಂತೆ ರಾಜ್ಯ ಹೈಕೋರ್ಟ್ ಆದೇಶಿಸಿದೆ.

ಮುಖ್ಯನ್ಯಾಯಮೂರ್ತಿ ವಿಭು ಭಕ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿ ನೇತೃತ್ವದ ವಿಭಾಗೀಯಪೀಠ ಈ ಕುರಿತಾದ ಅರ್ಜಿ ವಿಚಾರಣೆ ನಡೆಸಿ ಸಾಮರ ಇಂಟರ್ ನ್ಯಾಷನಲ್ ಇಸ್ಲಾಮಿಕ್ ಶಾಲೆ ನಡೆಸುತ್ತಿರುವ ಮದರಸಾಗೆ ನೀಡಿರುವ ಹಣದ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ತೆಗೆದುಕೊಳ್ಳುವಂತೆ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯವರಿಗೆ ಆದೇಶಿಸಿದೆ.

ವಿಚಾರಣೆ ನಡೆಸಿದ ವಿಭಾಗೀಯ ಪೀಠ, ಈ ಪ್ರಕರಣದಲ್ಲಿ ಅರ್ಜಿದಾರರ ಆರೋಪಗಳ ಸತ್ಯಾಸತ್ಯತೆ ಕುರಿತು ನ್ಯಾಯಾಲಯ ಯಾವುದೇ ಅಭಿಪ್ರಾಯ ನೀಡುವುದಿಲ್ಲ. 5 ಲಕ್ಷ ರೂ ವಾಪಸು ಪಡೆಯುವ ವಿಷಯ ಸೇರಿದಂತೆ ಎಲ್ಲಾ ಅಂಶಗಳನ್ನು ಕಾನೂನಿನ ಪ್ರಕಾರ ಪರಿಶೀಲಿಸಬೇಕು, ಅನಗತ್ಯವಾಗಿ ವಿಳಂಬವಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಪೀಠ ಹೇಳಿದೆ.

ಮದರಸಾಗೆ ಅಲ್ಪ ಸಂಖ್ಯಾತ ಇಲಾಖೆ ನೀಡಿರುವ 5 ಲಕ್ಷ ರೂ ಮೊತ್ತವನ್ನು ವಾಪಸ್ ಪಡೆಯಬೇಕು. ಥಣಿಸಂದ್ರದ ಸಾಮರ ಇಂಟರ್ ನ್ಯಾಷನಲ್ ಇಸ್ಲಾಮಿಕ್ ಸ್ಕೂಲ್ ನಕಲಿ ದಾಖಲೆಗಳನ್ನು ಸೃಷ್ಟಿಸಿರುವ ಹಿನ್ನೆಲೆಯಲ್ಲಿ ಶಾಲೆಯ ಮಾನ್ಯತೆಯನ್ನು ಶಾಲಾ ಶಿಕ್ಷಣ ಇಲಾಖೆ ರದ್ದುಪಡಿಸಿದೆ.

ಈ ಸಂಸ್ಥೆ ಪಬ್ಲಿಕ್ ಟ್ರಸ್ಟ್ ಆಗಿ ನೋಂದಣಿಯಾಗಿಲ್ಲ. ಈ ವರ್ಷದ ಮೇ 14 ರಂದು ಮೂವರು ಸದಸ್ಯರ ಸಮಿತಿ ರಚಿಸಿದ್ದು, ಬಳಿಕ ವರದಿ ಪಡೆದು ಮೇ 30 ರಂದು ಶಾಲಾ ಶಿಕ್ಷಣ ಆಯುಕ್ತರು ಕರ್ನಾಟಕ ಶಿಕ್ಷಣ ಕಾಯ್ದೆ, 1983 ರ 39(ಎಫ್) ಉಲ್ಲಂಘನೆಯ ಆಧಾರದ ಮೇಲೆ, ಸಂಘದ ಮಾನ್ಯತೆಯನ್ನು ರದ್ದುಪಡಿಸಿತ್ತು. ಆದರೆ ಸಂಸ್ಥೆಗೆ ನೀಡಲಾದ 5 ಲಕ್ಷ ರೂ ವಾಪಸು ಪಡೆದಿಲ್ಲ. ಅಧಿಕಾರಿಗಳು ಆ ಹಣವನ್ನು ವಾಪಸು ಪಡೆಯಲು ಕ್ರಮ ಕೈಗೊಳ್ಳಬೇಕು ಎಂದು ಅರ್ಜಿದಾರ ಬೆಂಗಳೂರಿನ ನಾಯಂಡಹಳ್ಳಿ ನಿವಾಸಿ ಅಬ್ದುಲ್ ಹಮೀದ್ ಪಾಷ
ಕೋರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

5 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

6 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

6 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

6 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

6 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

6 hours ago