ಲಿಪಿಕ ನೌಕರರಿಗೆ ಸಾಮಾನ್ಯ ಬುನಾದಿತರಬೇತಿ:ತರಬೇತಾರ್ಥಿಗಳಿಗೆ ಬೀಳ್ಕೊಡಿಗೆ ಸಮಾರಂಭ

General Basic Training for Clerical Employees: Farewell Ceremony for Trainees
 
ತರಬೇತಿ ಸದುಪಯೋಗ ಪಡೆದುಕೊಳ್ಳಿ: ಕೃಷ್ಣಮೂರ್ತಿ ದೇಸಾಯಿ
ಕೊಪ್ಪಳ ಸೆಪ್ಟೆಂಬರ್ 30 (ಕರ್ನಾಟಕ ವಾರ್ತೆ): ಜಿಲ್ಲಾ ತರಬೇತಿ ಸಂಸ್ಥೆ ಕೊಪ್ಪಳ ವತಿಯಿಂದ ಲಿಪಿಕ ನೌಕರರಿಗೆ ನೀಡಿದ ಸಾಮಾನ್ಯ ಬುನಾದಿ ತರಬೇತಿಯ ಸದುಪಯೋಗವನ್ನು ತಾವೆಲ್ಲರೂ ಪಡೆದುಕೊಳ್ಳಬೇಕೆಂದು ಜಿಲ್ಲಾ ತರಬೇತಿ ಸಂಸ್ಥೆ ಕೊಪ್ಪಳ ಪ್ರಾಚಾರ್ಯರಾದ ಕೃಷ್ಣಮೂರ್ತಿ ದೇಸಾಯಿ ಹೇಳಿದರು.
ಅವರು ಮಂಗಳವಾರ ಸರ್ಕಾರಿ ನೌಕರರ ಭವನ ಕೊಪ್ಪಳದಲ್ಲಿ ಆಡಳಿತ ತರಬೇತಿ ಸಂಸ್ಥೆ ಮೈಸೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಕೊಪ್ಪಳ ಹಾಗೂ ಜಿಲ್ಲಾ ತರಬೇತಿ ಸಂಸ್ಥೆ, ಕೊಪ್ಪಳರವರ ಸಂಯುಕ್ತಾಶ್ರಯದಲ್ಲಿ 2025-26 ನೇ ಸಾಲಿನ ಲಿಪಿಕ ನೌಕರರ ಸಾಮಾನ್ಯ ಬುನಾದಿ ತರಬೇತಿ ಪಡೆದ ತರಬೇತಾರ್ಥಿಗಳಿಗೆ ಹಮ್ಮಿಕೊಂಡಿದ್ದ ಬೀಳ್ಕೊಡಿಗೆ ಸಮಾರಂಭ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತರಬೇತಿ ಅವಧಿಯಲ್ಲಿ ನೀಡಿದ ಮಾಹಿತಿಯನ್ನು ತಮ್ಮ ಕಛೇರಿ ಕೆಲಸ ಕಾರ್ಯಗಳಲ್ಲಿ ಸರಿಯಾಗಿ ಉಪಯೋಗಿಸಿಕೊಳ್ಳಬೇಕು. ಹಲವಾರು ನುರಿತ ತರಬೇತಿದಾರರನ್ನು ಕರೆಸಿ ತಮಗೆ 42 ದಿನಗಳ ಕಾಲ ತರಬೇತಿ ನೀಡಲಾಗಿದೆ. ಸರಕಾರಿ ನೌಕರರಿಗೆ ಕಚೇರಿ ಕೆಲಸ ಕಾರ್ಯಗಳು ಸುಲಲಿತವಾಗಿ ನಡೆಯಬೇಕಾದರೆ ಇಂತಹ ತರಬೇತಿಗಳ ಅವಶ್ಯಕತೆ ಬಹಳ ಇದೆ. ತರಬೇತಿ ಅವಧಿಯಲ್ಲಿ ತಮಗೆ ವಿವಿಧ ಕಛೇರಿಗಳಿಗೆ ಭೇಟಿ, ಪ್ರವಾಸ, ಕಚೇರಿ ಕೆಲಸ ಕಾರ್ಯಗಳ ಕುರಿತು ಸಂಪೂರ್ಣ ಮಾಹಿತಿ ನೀಡಲಾಗಿದೆ. ಇದರ ಸದುಪಯೋಗ ಎಲ್ಲರೂ ಪಡೆದುಕೊಳ್ಳಬೇಕು ತರಬೇತಿ ಮುಗಿಸಿ ಹೊರ ಹೋಗುತ್ತಿರುವ ತಮಗೆಲ್ಲರಿಗೂ ಶುಭಾಶಯಗಳು ಎಂದು ಹೇಳಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಸುರೇಶ ಜಿ. ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿ, ವೃತ್ತಿ ಜೀವನದಲ್ಲಿ ತರಬೇತಿ ಅವಶ್ಯಕತೆ ಬಹಳ ಇದೆ. ತರಬೇತಿ ಪಡೆದ ತಾವೆಲ್ಲರೂ ಧನ್ಯರು. ಮೈಸೂರು ಆಡಳಿತ ತರಬೇತಿ ಸಂಸ್ಥೆಯು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಇಂತಹ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದರಿಂದ ಸರಕಾರಿ ನೌಕರರಿಗೆ ತುಂಬಾ ಅನುಕೂಲವಾಗಲಿದೆ. ತರಬೇತಿ ಅವಧಿಯಲ್ಲಿ ತಾವೆಲ್ಲರೂ ಹೊಸದನ್ನು ಕಲಿಯುವುದರ ಜೊತೆಗೆ ಬಹಳಷ್ಟು ಮಾಹಿತಿಯನ್ನು ಪಡೆದಂತಾಗಿದೆ ಎಂದು ಹೇಳಿದರು.
ಸಾಮಾನ್ಯ ಬುನಾದಿ ತರಬೇತಿ ಪಡೆದ ಪ್ರಶಿಕ್ಷಣಾರ್ಥಿಗಳಿಗೆ ಇದೇ ಸಂದರ್ಭದಲ್ಲಿ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. ನಂತರ ಪ್ರಶಿಕ್ಷಣಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಮೈಲಾರ ರಾವ್ ಕುಲಕರ್ಣಿ, ಲಾಯಕ್ ಅಲಿ, ಜಿಲ್ಲಾ ತರಬೇತಿ ಸಂಸ್ಥೆ ಕೊಪ್ಪಳದ ಶ್ರೀಧರ್, ನರ್ಮದಾ, ಗಾಯಿತ್ರಿ, ಸೇರಿದಂತೆ ಇತರೆ ಹಲವಾರು ಜನರು ಮತ್ತು ಸಾಮಾನ್ಯ ಬುನಾದಿ ತರಬೇತಿ ಪಡೆದ ಪ್ರಶಿಕ್ಷಾರ್ಥಿಗಳು ಉಪಸ್ಥಿತರಿದ್ದರು.
Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

16 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

16 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

17 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

17 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

17 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

17 hours ago