ಜಿಲ್ಲೆಯಲ್ಲಿ ಶೇಂಗಾ ಖರೀದಿ ಕೇಂದ್ರ ಆರಂಭ: ನೋಂದಣಿಗೆ ರೈತರಲ್ಲಿ ಮನವಿ

Peanut purchasing center opens in district: Farmers urged to register

ಕೊಪ್ಪಳ ಸೆಪ್ಟೆಂಬರ್ 30 (ಕರ್ನಾಟಕ ವಾರ್ತೆ): 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ. ಗುಣಮಟ್ಟದ ಶೇಂಗಾವನ್ನು ಪ್ರತಿ ಕ್ವಿಂಟಾಲ್‌ಗೆ ರೂ.7263/- ರಂತೆ ಗರಿಷ್ಠ 61,148 ಮೆಟ್ರಿಕ್ ಟನ್ ಎಫ್.ಎ.ಕ್ಯೂ. ಗುಣಮಟ್ಟದ ಶೇಂಗಾವನ್ನು ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ಕೊಪ್ಪಳ ಜಿಲ್ಲೆಯ ರೈತರಿಂದ ಖರೀದಿಸುವ ಕುರಿತು ಸೆಪ್ಟೆಂಬರ್ 30 ರಂದು ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಯ ಸಭೆಯಲ್ಲಿ ಶೇಂಗಾ ಖರೀದಿ ನೋಂದಣಿ ಕೇಂದ್ರಗಳನ್ನು ಪ್ರಾರಂಭಿಸಲು ತೀರ್ಮಾನಿಸಲಾಗಿದೆ.
ಖರೀದಿ ಕೇಂದ್ರಗಳಾದ ಕೆಒಎಫ್ ಅಡಿಯಲ್ಲಿ ಅಳವಂಡಿಯ ಒಜಿಸಿಎಸ್ ಅಳವಂಡಿ, ಯಲಬುರ್ಗಾದ ಒಜಿಸಿಎಸ್ ಬೇವೂರು ಹಾಗೂ ನಾಗನಕಲ್‌ನ ಒಜಿಸಿಎಸ್ ನಾಗನಕಲ್‌ನ ನೋಂದಣಿ ಕೇಂದ್ರದಲ್ಲಿ ರೈತರು ನೋಂದಣಿ ಮಾಡಿಕೊಳ್ಳಬಹುದು.
ಖರೀದಿ ಕೇಂದ್ರಗಳ ವ್ಯವಸ್ಥಿತ ನಿರ್ವಹಣೆಗೆ ಕೊಪ್ಪಳ ತಾಲ್ಲೂಕಿನ ಅಳವಂಡಿ ಖರೀದಿ ಕೇಂದ್ರದ ನೋಡಲ್ ಅಧಿಕಾರಿಗಳಾಗಿ ಕೊಪ್ಪಳ ಎಪಿಎಂಸಿ ಕಾರ್ಯದರ್ಶಿ ಸಿದ್ದಯ್ಯಸ್ವಾಮಿ, ಮೊ.ಸಂ: 9902224089, ಯಲಬುರ್ಗಾ ತಾಲ್ಲೂಕಿನ ಬೇವೂರು ಖರೀದಿ ಕೇಂದ್ರಗಳ ನೋಡಲ್ ಅಧಿಕಾರಿಗಳಾಗಿ ಯಲಬುರ್ಗಾ ಎಪಿಎಂಸಿಯ ಕಾರ್ಯದರ್ಶಿ ಗುರುಪ್ರಸಾದ ಗುಡಿ, ಮೊ.ಸಂ: 9972054874, ಕಾರಟಗಿ ತಾಲ್ಲೂಕಿನ ನಾಗನಕಲ್ ಖರೀದಿ ಕೇಂದ್ರದ ನೋಡಲ್ ಅಧಿಕಾರಿಗಳಾಗಿ ಕಾರಟಗಿ ಎಪಿಎಂಸಿಯ ಸಹಾಯಕ ಕಾರ್ಯದರ್ಶಿ ಹರೀಶ ಪತ್ತಾರ, ಮೊ.ಸಂ: 9060893320 ಇವರನ್ನು ನಿಯೋಜಿಸಲಾಗಿದೆ.
ಪ್ರತಿ ಎಕರೆಗೆ 3 ಕ್ವಿಂಟಾಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಾಲ್‌ನAತೆ ಶೇಂಗಾ ಉತ್ಪನ್ನವನ್ನು ಖರೀದಿಸಲಾಗುತ್ತದೆ. ಎಫ್.ಎ.ಕ್ಯೂ. ಗುಣಮಟ್ಟದ ಶೇಂಗಾವನ್ನು ಮಾತ್ರ ಖರೀದಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ ರಾಯಚೂರು, ವಿಭಾಗೀಯ ಕಛೇರಿ, ಕೊಪ್ಪಳ ಮೊ.ಸಂ: 9591812142 ಇವರನ್ನು ಸಂಪರ್ಕಿಸಬಹುದು ಎಂದು ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

14 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

14 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

14 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

14 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

14 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

14 hours ago