If the Tipaturu taluk panchayat election is held, it is our power.
Former Zilla Panchayat Member - Aswath Narayan
ತಿಪಟೂರು: ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯ ಅಶ್ವಥ್ ನಾರಾಯಣ್ ಮತ್ತೆ ತಿಪಟೂರು ತಾಲ್ಲೋಕಿಗೆ ಎಂಟ್ರಿಯಾಗಿದ್ದು ಈ ಭಾರಿ ಜಿಲ್ಲಾ ಪಂಚಾಯ್ತಿ ಚುನಾವಣೆ ನಡೆದರೆ ತಿಪಟೂರು ತಾಲ್ಲೋಕಿನ 5 ಜಿಲ್ಲಾ ಪಂಚಾಯ್ತಿ ಕ್ಷೇತ್ರ ಹಾಗೂ 17 ತಾಲ್ಲೋಕು ಪಂಚಾಯ್ತಿ ಕ್ಷೇತ್ರಗಳಿಗೆ ನನ್ನ ಬೆಂಬಲಿಗರು ಪಕ್ಷೇತರರಾಗಿ ಸ್ಪರ್ಧೆ ಮಾಡುತ್ತಿದ್ದು.ತಾಲ್ಲೋಕು ಪಂಚಾಯತ್ ಗದ್ದುಗೆಯನ್ನ ನಮ್ಮ ಬೆಂಬಲಿಗರೆ ಹಿಡಿಯುತ್ತಾರೆ ಎಂದು ಮಾಜಿ ಜಿಲ್ಲಾಪಂಚಾಯ್ತಿ ಸದಸ್ಯ ಜಿ.ನಾರಾಯಣ್ ತಿಳಿಸಿದರು.
ಆಯುಧ ಪೂಜೆ ಹಾಗೂ ವಿಜಯದಶಮಿ ಅಂಗವಾಗಿ ಹತ್ಯಾಳು ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆಸಲ್ಲಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಾನು ಒಂದು ವರ್ಷದಿಂದ ವೈಯಕ್ತಿಕ ಸಮಸ್ಯೆಯ ಕಾರಣದಿಂದ ತಾಲ್ಲೋಕಿಗೆ ಬರಲು ಸಾಧ್ಯವಾಗಿಲ್ಲ,ತಾಲ್ಲೋಕಿನ ಜನರ ಅಭಿಮಾನ ಪ್ರೀತಿಯ ಋಣತೀರಿಸಲು ಸಾಧ್ಯವಾಗಿಲ್ಲ,ತಾಲ್ಲೋಕಿನ ಜನರ ಸೇವೆ ಮಾಡುವ ಉದೇಶದಿಂದ ಜಿಲ್ಲಾಪಂಚಾಯ್ತಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದು,ತಿಪಟೂರು ತಾಲ್ಲೋಕಿನ 5ಜಿಲ್ಲಾಪಂಚಾಯ್ತಿ ಕ್ಷೇತ್ರಗಳು ಹಾಗೂ 17ತಾಲ್ಲೋಕು ಪಂಚಾಯ್ತಿ ಕ್ಷೇತ್ರಗಳಿಗೆ ಪಕ್ಷೇತರವಾಗಿ ಅಭ್ಯಾರ್ಥಿಗಳು ಸ್ಪರ್ಧಿಸುತ್ತಿದ್ದು,ತಾಲ್ಲೋಕು ಪಂಚಾಯ್ತಿಯಲ್ಲಿ ಕನಿಷ್ಠ 12 ರಿಂದ 13 ಜನ ತಾಲ್ಲೋಕು ಪಂಚಾಯ್ತಿ ಸದಸ್ಯರು ಹಾಗೂ 3ಜನ ಜಿಲ್ಲಾಪಂಚಾಯ್ತಿ ಸದಸ್ಯರು ಗೆಲ್ಲುವ ನಿರೀಕ್ಷೆ ಇದ್ದು,ತಾಲ್ಲೋಕು ಪಂಚಾಯ್ತಿ ಅಧಿಕಾರದ ಗದ್ದುಗೆ ಪಕ್ಷೇತರವಾಗಿ ಹಿಡಿಯುವ ವಿಶ್ವಾಸ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ರೈತಸಂಘದ ಅಧ್ಯಕ್ಷ ಬಸ್ತಿಹಳ್ಳಿ ರಾಜಣ್ಣ ತಾಲ್ಲೋಕಿನಲ್ಲಿ ಬಿಜೆಪಿ ಕಾಂಗ್ರೇಸ್ ನಾಯಕರ ಹೊಂದಾಣಿಕೆ ರಾಜಕಾರಣದಿಂದಾಗಿ ತಾಲ್ಲೋಕಿನ ಅಭಿವೃದ್ದಿ ಕುಂಟಿತವಾಗಿದೆ.ಅಧಿಕಾರ ಕೆಲವೇ ಕೆಲವು ಜನರ ಸ್ವತ್ತಲ್ಲ,.ನಾರಾಯಣ್ ಜನಾನುರಾಗಿಯಾಗಿದ್ದು.ತಾಲ್ಲೋಕಿನ ಜನರ ಸೇವೆ ಮಾಡಿ ಜನಮನ್ನಣೆಗಳಿದರೆ,ನಾವೆಲ್ಲರೂ ಒಗ್ಗಟಿನಿಂದ ಬೆಂಬಲ ನೀಡುತ್ತೇವೆ.ಎಂದು ತಿಳಿಸಿದರು.
ಪತ್ರಿಕಾ ಘೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ ರೇಣುಕ ಪ್ರಸಾದ್. ಕಾರ್ಯದರ್ಶಿ ಮಹೇಶ್ ಕುಮಾರ್ ಮುಂತ್ತಾದವರು ಉಪಸ್ಥಿತರಿದರು.
Cancel my account and give me all the money in my account. ನನ್ನ ಅಕೌಂಟನ್ನು ಕ್ಯಾನ್ಸಲ್…
ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…
Devotee's iPhone fell into his pocket! Alas, it ended after falling into his pocket. ಹುಂಡಿಗೆ…
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…