ಮತದಾರರ ವಿಶೇಷ ಮಿಂಚಿನ ನೋಂದಣಿ ಅಭಿಯಾನ

Special lightning voter registration campaign

ಕೊಪ್ಪಳ ಅಕ್ಟೋಬರ್ 16 (ಕರ್ನಾಟಕ ವಾರ್ತೆ): ಭಾರತ ಚುನಾವಣಾ ಆಯೋಗದ ಮತದಾರರ ಪಟ್ಟಿ ಸಿದ್ದಪಡಿಸುವ ವೇಳಾಪಟ್ಟಿಯನ್ವಯ ಅಕ್ಟೋಬರ್ 1 ರಿಂದ ನವೆಂಬರ್ 6 ರವರೆಗೆ ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಅರ್ಹ ಮತದಾರರ ನೋಂದಣಿಗಾಗಿ ಅವಕಾಶ ಕಲ್ಪಿಸಲಾಗಿದೆ.
ಅದರನ್ವಯ ದಿನಾಂಕ:14-10-2025 ರವರೆಗೆ ನಿರೀಕ್ಷಿತ ಮಟ್ಟದಲ್ಲಿ ನೋಂದಣಿಗಾಗಿ ನಮೂನೆ-19 ರ ಅರ್ಜಿಗಳು ಸ್ವೀಕೃತಿಯಾಗದ ಕಾರಣ ನೋಂದಣಿ ಪ್ರಕ್ರಿಯೆಯ ಕಾರ್ಯವೇಗವನ್ನು ತೀವ್ರಗತಿಯಲ್ಲಿ ಚುರುಕುಗೊಳಿಸುವುದು ಅತ್ಯವಶ್ಯವಾಗಿದ್ದು, ಅರ್ಹ ಅಭ್ಯರ್ಥಿಗಳನ್ನು ಗುರುತಿಸಿ, ಅವರ ಹೆಸರನ್ನು ನೋಂದಾಯಿಸಿ, ಯಾವೊಬ್ಬ ಅರ್ಹ ಮತದಾರರು ನೋಂದಣಿ ಪ್ರಕ್ರಿಯೆಯಿಂದ ಹೊರಗಿರದೇ ಅಂಥವರನ್ನು ನೋಂದಾಯಿಸಿ ಸುಭದ್ರ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಕ್ರಿಯಾತ್ಮಕ ಕಾರ್ಯನಿರ್ವಹಿಸುವುದು ಅತ್ಯಾವಶ್ಯಕವಾಗಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 27, 30 ಹಾಗೂ ನವೆಂಬರ್ 3 ರಂದು ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರ ವ್ಯಾಪ್ತಿಗೊಳಪಡುವ ಸಂಪೂರ್ಣ ಕ್ಷೇತ್ರದಲ್ಲಿ ಮತದಾರರ ವಿಶೇಷ ಮಿಂಚಿನ ನೋಂದಣಿ ಅಭಿಯಾನವನ್ನು ಆಯೋಜಿಸಲು ಉದ್ದೇಶಿಸಲಾಗಿದೆ.
ವಿಶೇಷ ಮಿಂಚಿನ ನೋಂದಣಿ ಅಭಿಯಾನ ದಿನಾಂಕಗಳAದು ಆಯುಕ್ತರು, ಮಹಾನಗರ ಪಾಲಿಕೆ, ತಹಶೀಲ್ದಾರರು ಹಾಗೂ ಸಹಾಯಕ ಮತದಾನ ನೋಂದಣಾಧಿಕಾರಿಗಳು ತಮ್ಮ ಕ್ಷೇತ್ರ ವ್ಯಾಪ್ತಿಗೊಳಪಡುವ ಎಲ್ಲ ತಾಲ್ಲೂಕು ಮಟ್ಟದ ಅಧಿಕಾರಿಗಳ ಸೇವೆಯನ್ನು ಪಡೆದು ಅವರೊಂದಿಗೆ ಉಪ ತಹಶೀಲ್ದಾರರು, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತಾಧಿಕಾರಿಗಳು, ಗ್ರಾಮ ಸಹಾಯಕರು ಹಾಗೂ ಇತರ ಅಧಿಕಾರಿಗಳ ತಂಡವನ್ನು ರಚಿಸಿ(ಅವಶ್ಯಕತೆಗನುಗುಣವಾಗಿ) ಅರ್ಹ ಶಿಕ್ಷಣ ಸಂಸ್ಥೆಗಳನ್ನು ಗುರುತಿಸಿ ಅಲ್ಲಿ ನೋಂದಣಿಗಾಗಿ ಅರ್ಹರಿರುವ ಮತದಾರರನ್ನು ಕಚೇರಿ ಮುಖ್ಯಸ್ಥರ ಮುಖಾಂತರ ಸಂಪರ್ಕಿಸಿ ಬೆಳಿಗ್ಗೆ 10 ಗಂಟೆಯಿAದ ಸಂಜೆ 5.30 ಗಂಟೆಯವರೆಗೆ ಬೀಡುಬಿಟ್ಟು ನಿಯಮಾನುಸಾರ ನಮೂನೆ-19 ರ ಅರ್ಜಿಯನ್ನು ಪೂರಕ ದಾಖಲೆಗಳೊಂದಿಗೆ ಸ್ವೀಕರಿಸಬೇಕು.
ಜಿಲ್ಲಾಧಿಕಾರಿಗಳು ಆದೇಶವೊಂದನ್ನು ಹೊರಡಿಸಿ ಪ್ರತಿ ತಾಲ್ಲೂಕಿಗೆ ಒಬ್ಬ ಜಿಲ್ಲಾ ಮಟ್ಟದ ಅಧಿಕಾರಿಯನ್ನು ವಿಶೇಷ ಮಿಂಚಿನ ನೋಂದಣಿ ಅಭಿಯಾನದ ಮೇಲುಸ್ತುವಾರಿಯ ನೋಡಲ್ ಅಧಿಕಾರಿಯೆಂದು ನೇಮಿಸಿ, ತಾವು ಸಂಪೂರ್ಣ ಜಿಲ್ಲಾ ವ್ಯಾಪ್ತಿಗೆ ಹಾಗೂ ಸಹಾಯಕ ಆಯುಕ್ತರು ತಮ್ಮ ತಮ್ಮ ಉಪ ವಿಭಾಗ ವ್ಯಾಪ್ತಿಗೆ ಈ ಅಭಿಯಾನದ ಮೇಲುಸ್ತುವಾರಿ ವಹಿಸಬೇಕು. ಮಿಂಚಿನ ನೋಂದಣಿ ಪ್ರಕ್ರಿಯೆಯು ಯಶಸ್ವಿಯಾಗಿ ಪೂರ್ಣಗೊಳಿಸಲು ಎಲ್ಲರೂ ಶ್ರಮವಹಿಸಿ ಕ್ರಿಯಾತ್ಮಕವಾಗಿ, ಆಶಾದಾಯಕ ನಿರಾಳ ಸದುದ್ದೇಶದೊಂದಿಗೆ ಕಾರ್ಯನಿರ್ವಹಿಸಲು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಚುನಾವಣಾಧಿಕಾರಿ ಮತ್ತು ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

12 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

12 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

12 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

12 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

12 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

12 hours ago