ದೇಶಕ್ಕೆ ಪೊಲೀಸ್ ಕೊಡುಗೆ ಅಪಾರ- ಸಿಇಒ ವರ್ಣಿತ್ ನೇಗಿ

 
Police contribution to the country is immense - CEO Varnith Negi


ಕೊಪ್ಪಳ ಅಕ್ಟೋಬರ್ 21 (ಕರ್ನಾಟಕ ವಾರ್ತೆ): ದೇಶದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವುದು ಮತ್ತು ಜನರಿಗೆ ಅಗತ್ಯ ರಕ್ಷಣೆ ನೀಡುವಲ್ಲಿ ಪೊಲೀಸ್ ಕೊಡುಗೆ ಅಪಾರವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಹೇಳಿದರು. 

 ಅವರು ಮಂಗಳವಾರ ಕೊಪ್ಪಳ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

 ಸೈನಿಕರು ದೇಶದ ಗಡಿಯಲ್ಲಿ ಸೇವೆ ಸಲ್ಲಿಸಿ ದೇಶವನ್ನು ರಕ್ಷಣೆ ಮಾಡಿದರೆ, ಪೊಲೀಸರು ಜನರ ಮಧ್ಯದಲ್ಲಿದ್ದುಕೊಂಡೇ ಎಲ್ಲರಿಗೂ ರಕ್ಷಣೆ ನೀಡುತ್ತಾರೆ. ಪ್ರವಾಹ, ವಿಪತ್ತು ಸೇರಿದಂತೆ ಹಲವಾರು ಆಪತ್ತು ಸಂದರ್ಭಗಳಲ್ಲಿ ಜನರನ್ನು ರಕ್ಷಿಸಲು ತಮ್ಮ ಜೀವನದ ಹಂಗನ್ನು ತೊರೆದು ಕಾರ್ಯನಿರ್ವಹಿಸುವ ಪೊಲೀಸರ ಸೇವೆ ಬಹಳ ಮಹತ್ವದ್ದಾಗಿದೆ. ಪೊಲೀಸ್ ಕರ್ತವ್ಯ ನಿಷ್ಠೆಗೆ ಅವರ ಕುಟುಂಬ ಸದಸ್ಯರ ಸಹಕಾರ ಕೂಡ ಸಾಕಷ್ಟಿದೆ. ಹುತಾತ್ಮ ಪೊಲೀಸರ ಸ್ಮರಣೆಯನ್ನು ಕೇವಲ ಒಂದು ದಿನಕ್ಕೆ ಸೀಮಿತಗೊಳಿಸಬಾರದು. ನಮ್ಮ ದೇಶದಲ್ಲಿ ಇತ್ತೀಚೆಗೆ ಹುತಾತ್ಮರಾದ ಪೊಲೀಸ್‌ರ ಕುಟುಂಬಗಳಿಗೆ ನಾವೆಲ್ಲರೂ ಆತ್ಮಸ್ಥೈರ್ಯ ತುಂಬಬೇಕಾಗಿದೆ ಎಂದು ಹೇಳಿದರು. 

 ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್. ಅರಸಿದ್ಧಿ ಅವರು ಮಾತನಾಡಿ, ರಾಷ್ಟ್ರದಾದ್ಯಂತ ಇಂದು ಪೊಲೀಸ್ ಹುತಾತ್ಮರ ದಿನ ಆಚರಿಸುತ್ತಿದ್ದು, ಈ ಮೂಲಕ ಹುತಾತ್ಮ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಗೌರವ ಸಲ್ಲಿಸಲಾಗುತ್ತದೆ. 1957ರ ಅಕ್ಟೋಬರ್ 21ರಂದು ಸಿ.ಆರ್.ಪಿ.ಎಫ್.ನ ಒಂದು ಪೋಲಿಸ್ ಪಡೆಯು ಡಿಎಸ್ಪಿ ಕರಣ್‌ಸಿಂಗ್ ಅವರ ನೇತೃತ್ವದಲ್ಲಿ ಭಾರತ-ಚೀನಾ ಗಡಿಭಾಗದಲ್ಲಿ ಗಸ್ತು ಮಾಡುವಾಗ ಚೀನಾ ದೇಶದ ಸೈನಿಕರು ಭಾರತದಲ್ಲಿ ಅತಿಕ್ರಮಣ ಮಾಡಿದ್ದರು. ಆಗ ಭಾರತೀಯ ಪೋಲಿಸರಲ್ಲಿ ಕೇವಲ ಕೆಲವು ರೈಪಲ್‌ಗಳಿದ್ದವು. ಚೀನಾದ ಸೈನಿಕರ ಹತ್ತಿರ ಆಧುನಿಕ ಶಸ್ತ್ರಗಳಿದ್ದವು. ಆದರೂ ಸಹ ಭಾರತದ ಪೋಲಿಸರು ಅತೀ ಧೈರ್ಯ ಮತ್ತು ಸಹಾಸದಿಂದ ತಮ್ಮ ಕೊನೆಯ ಉಸಿರಿನವರೆಗೂ ವೈರಿಗಳ ಜೊತೆ ಯುದ್ಧ ಮಾಡಿದರು. ಆ ಸಮಯದಲ್ಲಿ ಹತ್ತು ಪೊಲೀಸ್ ಅಧಿಕಾರಿಗಳು ಹುತಾತ್ಮರಾದರು. ಉಳಿದವರನ್ನು ಚೀನಾದವರು ಬಂಧಿಸಿದರು. ಈ ಎಲ್ಲಾ ವೀರರು ದೇಶಕ್ಕಾಗಿ ತಮ್ಮ ಪ್ರಾಣವನ್ನೆ ಬಲಿಧಾನಕೊಟ್ಟ ಆ ದಿನದ ಮತ್ತು ಹುತಾತ್ಮರ ನೆನಪಿಗಾಗಿ ಸ್ಮಾರಕವನ್ನು ಕಟ್ಟಿಸಲಾಗಿದೆ. ದೇಶ ರಕ್ಷಣೆಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಪೋಲಿಸರ ಸ್ಮರಣೆಗಾಗಿ ಈ ದಿನವನ್ನು ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಆಚರಿಸುತ್ತಾ ಬರಲಾಗುತ್ತಿದೆ ಎಂದರು.

 ಕರ್ತವ್ಯ ಪಾಲನೆಯಲ್ಲಿ ಪೊಲೀಸ್ ಪಡೆಗಳು ತಮ್ಮ ಜೀವನವನ್ನು ಮುಡಿಪಾಗಿಟ್ಟು ಹೋರಾಡಿ ಹುತಾತ್ಮರಾದವರನ್ನು ಇಂದು ನಾವು ಸ್ಮರಿಸಬೇಕಾಗಿದೆ ಎಂದು ಹೇಳಿದ ಅವರು, ಕಳೆದ ಒಂದು ವರ್ಷದಲ್ಲಿ ನಮ್ಮ ದೇಶದಲ್ಲಿ ಹುತಾತ್ಮರಾದ ಎಲ್ಲಾ ಪೊಲೀಸರನ್ನು ಇದೇ ವೇಳೆಯಲ್ಲಿ ಸ್ಮರಿಸಿದರು.

*ಪೊಲೀಸ್ ಹುತಾತ್ಮರಿಗೆ ಗೌರವ ಸಮರ್ಪಣೆ:* ಕಾರ್ಯಕ್ರಮದ ಆರಂಭದಲ್ಲಿ ಪೊಲೀಸ್ ಸ್ಮಾರಕಕ್ಕೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಇತರೆ ಅಧಿಕಾರಿಗಳು ಹಾಗೂ ಹಲವು ಗಣ್ಯರು ಪುಷ್ಪನಮನ ಸಲ್ಲಿಸಿದರು. ಹುತಾತ್ಮರಾದ ಪೋಲಿಸರಿಗೆ ಗೌರವ ಸಮರ್ಪಣೆಗಾಗಿ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಲಾಯಿತು ಮತ್ತು ಮೌನಾಚಾರಣೆ ಆಚರಿಸಲಾಯಿತು. ಕೊಪ್ಪಳ ಜಿಲ್ಲೆಯಲ್ಲಿ ಕರ್ತವ್ಯದ ವೇಳೆ ಇತ್ತೀಚೆಗೆ ನಿಧನರಾದ ಪೊಲೀಸ್ ಕುಟುಂಬದ ಸದಸ್ಯರಿಗೆ ಸನ್ಮಾನಿಸಿ ಗೌರವಿಸಲಾಯಿತು. 

 ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಹೇಮಂತ ಕುಮಾರ್ ಸೇರಿದಂತೆ ಡಿ.ವೈ.ಎಸ್.ಪಿ.ಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಹಲವು ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

13 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

13 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

13 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

13 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

13 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

14 hours ago