Breaking News

ಡಾ. ಶರಣಬಸಪ್ಪ ಕೋಲ್ಕಾರ ಗೆ ಸಂಶೋಧನ ಶ್ರೀ ಪ್ರಶಸ್ತಿ ಪ್ರಧಾನ:

The short URL of the present article is: https://kalyanasiri.in/29we

ಡಾ. ಶರಣಬಸಪ್ಪ ಕೋಲ್ಕಾರ ಗೆ ಸಂಶೋಧನ ಶ್ರೀ ಪ್ರಶಸ್ತಿ ಪ್ರಧಾನ:

Dr. Sharanabasappa Kolkara to be conferred with Samshodhana Shri Award


whatsapp image 2025 11 15 at 9.38.28 am

ಗಂಗಾವತಿ:ಡಾ. ಶರಣಬಸಪ್ಪ ಕೋಲ್ಕಾರ ಗೆ  ಸಂಶೋಧನ ಶ್ರೀ ಪ್ರಶಸ್ತಿ ಪ್ರಧಾನ: ಕರ್ನಾಟಕ ಇತಿಹಾಸ ಅಕಾಡೆಮಿಯ 39ನೇ ವಾರ್ಷಿಕ ರಾಷ್ಟ್ರೀಯ ಸಮ್ಮೇಳನ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ ಗದುಗಿನ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಈಚೆಗೆ ಜರಗಿತು. ಈ ಸಮಾರಂಭದಲ್ಲಿ ಗಂಗಾವತಿಯ ಹಿರಿಯ ಇತಿಹಾಸ ಸಂಶೋಧಕರು ಮತ್ತು ಕಲ್ಮಠ ಚನ್ನಬಸವಸ್ವಾಮಿ ಮಹಿಳಾ ಕಾಲೇಜಿನ ಪ್ರಾಚಾರ್ಯ  ಡಾ.ಶರಣಬಸಪ್ಪ ಕೋಲ್ಕಾರ್ ಅವರಿಗೆ 2025ರ ಸಾಲಿನ ಸಂಶೋಧನಾ ಶ್ರೀ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು. ಪ್ರಶಸ್ತಿಯು ಸನ್ಮಾನ ಪತ್ರ ಮತ್ತು 25000 ನಗದು ಹಣವನ್ನು ಹೊಂದಿದೆ.

ಜಾಹೀರಾತು

ಈ ಸಂದರ್ಭದಲ್ಲಿ ಸಚಿವರಾದ ಹೆಚ್. ಕೆ .ಪಾಟೀಲ್ ಹಿರಿಯ ಇತಿಹಾಸ ತಜ್ಞರಾದ ಡಾ. ಲಕ್ಷ್ಮಣ್ ತೆಲಗಾವಿ ,ಮಹಾತ್ಮ ಗಾಂಧಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಪತಿ ಡಾ. ಸುರೇಶ್ ವಿ ನಾಡಗೌಡರ್, ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಶರಣು ಗೋಗೇರಿ, ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ. ರಾಜಾರಾಮ್ ಹೆಗಡೆ ,ಇತಿಹಾಸ ಅಕಾಡೆಮಿಯ ಅಧ್ಯಕ್ಷರಾದ ಡಾ .ದೇವರ ಕೊಂಡಾರೆಡ್ಡಿ, ಪ್ರಧಾನ ಕಾರ್ಯದರ್ಶಿಗಳಾದ ಕೆ ಎಲ್ ರಾಜಶೇಖರ್ ಉಪಸ್ಥಿತರಿದ್ದರು. ಪ್ರಶಸ್ತಿ ಪುರಸ್ಕೃತ ಕೋಲ್ಕಾರ್ ಅವರಿಗೆ ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಕೊಟ್ಟೂರು ಮಹಾಸ್ವಾಮಿಗಳು, ಉಪಾಧ್ಯಕ್ಷರಾದ ಕೆ ಚನ್ನಬಸಯ್ಯ ಸ್ವಾಮಿ, ಕಾರ್ಯದರ್ಶಿ ಶರಣೇಗೌಡ ಜಿ ಮಾಲಿಪಾಟೀಲ್ ,ಹಿರಿಯ ನಿರ್ದೇಶಕರಾದ ಮಾಜಿ ಸಂಸದ ಎಸ್. ಶಿವರಾಮಗೌಡ ,  ಮಾಜಿ ಶಾಸಕ ಪರಣ್ಣ ಮುನವಳ್ಳಿ, ಎಚ್ ಎಂ ಮಂಜುನಾಥ್, ಸುರೇಶ ಸಿಂಗನಾಳ, ಕಳಕನಗೌಡ ಪಾಟೀಲ್, ರಾಚಯ್ಯ ಸ್ವಾಮಿ ಹುಚ್ಚೇಶ್ವರ ಮಠ ಹಾಗೂ ಕಾಲೇಜಿನ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ

The short URL of the present article is: https://kalyanasiri.in/29we

About Mallikarjun

Check Also

screenshot 2025 11 19 18 50 08 70 6012fa4d4ddec268fc5c7112cbb265e7.jpg

ಸುಳ್ವಾಡಿ ದುರಂತಕ್ಕೆ ಕಾರಣರಾದ ಇಮ್ಮಡಿ ಮಹಾದೇವಸ್ವಾಮಿಗೆ ಜಾಮೀನು ಸಂತ್ರಸ್ತರ ಆಕ್ರೋಶ . Victims' anger over bail granted to …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.