ಕೆಲವು ಖಾವಿಧಾರಿಗಳು ಸಮಾಜದ ದಾರಿತಪ್ಪಿಸುತ್ತಿದ್ದಾರೆ-ವಿಜಯಾನಂದ್ ಎಸ್.ಕಾಶಪ್ಪನವರ್

ವರ್ಗ, ವರ್ಣರಹಿತ ಸಮಾಜ ನಿರ್ಮಾಣ ಮಾಡಿದವರು ವಿಶ್ವಗುರು ಅಣ್ಣ ಬಸವಣ್ಣ, ಕೆಲವು ಖಾವಿಧಾರಿಗಳು ಸಮಾಜದ ದಾರಿ ತಪ್ಪಿಸುತ್ತಿದ್ದಾರೆ-ವಿಜಯಾನಂದ್ ಎಸ್.ಕಾಶಪ್ಪನವರ್

Some poets are misleading the society - Vijayanand S. Kashappanavar

ಬೆಂಗಳೂರು: ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಕರ್ನಾಟಕ ವೀರಶೈವ -ಲಿಂಗಾಯಿತ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರು, ಶಾಸಕರಾದ ವಿಜಯಾನಂದ ಎಸ್.ಕಾಶಪ್ಪನವರ್ ರವರ ಜೊತೆಯಲ್ಲಿ ಮಾಧ್ಯಮ ಸಂವಾದ. ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಬೆಳ್ಳಿತಟ್ಟೆ, ಕಾರ್ಯದರ್ಶಿ ಮಂಜುನಾಥ್, ಖಜಾಂಚಿ ಶರಣಬಸಪ್ಪ, ಹಿರಿಯ ಪತ್ರಕರ್ತರಾದ ಯಾಸಿರ್, ವೀರಶೈವ-ಲಿಂಗಾಯಿತ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಹಡಗಲಿ ಅರುಣ್ ಕುಮಾರ್ ರವರು ಉಪಸ್ಥಿತರಿದ್ದರು.

*ವಿಜಯಾನಂದ್ ಎಸ್.ಕಾಶಪ್ಪನವರ್ ರವರು* ಮಾತನಾಡಿ ರಾಜಕೀಯ ಹಿನ್ನಲೆ ಇರುವ ಕುಟುಂಬ ನಮ್ಮದು. ನಮ್ಮ ತಂದೆಯವರು ಕೃಷಿ ಸಹಕಾರ ಪತ್ತಿನ ಸಹಕಾರ ಸಂಘ ಮತ್ತು 1979ರಲ್ಲಿ ತಾಲೂಕ ಬೋರ್ಡ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು.
ಜನರ ಮತ್ತು ರೈತರ ನಡುವೆ ಗುರುತಿಸಿಕೊಂಡು ವೇಗವಾಗಿ ರಾಜಕೀಯದಲ್ಲಿ ಬೆಳವಣಿಗೆ ಪ್ರಾರಂಭವಾಯಿತು.

ಮೂರು ಬಾರಿ ಶಾಸಕರಾಗಿ ನನ್ನ ತಂದೆಯವರು , ಮುಖ್ಯಮಂತ್ರಿ ಎಸ್.ಎಂ.ಕೃಷ್ಣರವರ ಸಚಿವ ಸಂಪುಟದಲ್ಲಿ ಮಂತ್ರಿಯಾಗಿ ಸೇವೆ ಸಲ್ಲಿಸಿದರು.

ನಾನು ಎಂ.ಎಸ್.ರಾಮಯ್ಯದಲ್ಲಿ ವೈದ್ಯಕೀಯ ವ್ಯಾಸಂಗ ಮುಗಿಸಿದೆ.1992ರಲ್ಲಿ ಮಾಜಿ ಮುಖ್ಯಮಂತ್ರಿ ಬಂಗಾರಪ್ಪರವರ ರಾಜಕೀಯ ಒಡನಾಟ ಸಿಕ್ಕಿತು.

ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಯುವ ಕಾಂಗ್ರೆಸ್ ಉಪಾಧ್ಯಕ್ಷ ಸ್ಥಾನದಲ್ಲಿ ಸೇವೆ ಸಲ್ಲಿಸಿದ್ದೇನೆ.2003ರಲ್ಲಿ ರಸ್ತೆ ಅಪಘಾತದಲ್ಲಿ ನಮ್ಮ ತಂದೆಯವರು ಮೃತಪಟ್ಟರು, ತದನಂತರ ಉಪ ಚುನಾವಣೆಯಲ್ಲಿ ನಮ್ಮ ತಾಯಿಯವರು ಶಾಸಕರಾಗಿ ಆಯ್ಕೆಯಾಗುತ್ತಾರೆ.

ರಾಜಕೀಯ ಜೀವನದಲ್ಲಿ ಹೇಗೆ ಇರಬೇಕು ಎಂಬ ಮಾರ್ಗದರ್ಶನವನ್ನು ಅಂದಿನ ಮುಖ್ಯಮಂತ್ರಿ ಧರ್ಮಸಿಂಗ್ ರವರು ನೀಡಿದರು.ರಾಜಕೀಯದಲ್ಲಿ ಸೋಲು-ಗೆಲುವು ಕಂಡಿದ್ದೇನೆ. ರೈತ ಮತ್ತು ನೇಕಾರ ಎರಡು ಕಣ್ಣುಗಳು ಇದ್ದಂತೆ.

ಹುನಗುಂದ ಮತಕ್ಷೇತ್ರಕ್ಕೆ ಹನಿ ನೀರಾವರಿ, ವಿವಿಧ ಅಭಿವೃದ್ದಿ ಕ್ಷೇತ್ರದ ಅಭಿವೃದ್ದಿ ಸಾವಿರಾರು ಕೋಟಿ ಅನುದಾನ ನೀಡಲಾಗಿದೆ. ಕೊಡಲ ಸಂಗಮ ಬಸವಣ್ಣನವರ ಕ್ಷೇತ್ರ ಅಭಿವೃದ್ದಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು ನೂರಾರು ಕೋಟಿ ಅನುದಾನ ನೀಡಿದ್ದಾರೆ.

ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರ ನೇತೃತ್ವದಲ್ಲಿ 5 ಗ್ಯಾರೆಂಟಿ ಯೋಜನೆಗಳನ್ನು ಪ್ರತಿ ಹಳ್ಳಿಗಳಿಗೆ ತಲುಪಿಸಲಾಗಿದೆ.
ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮ ನಿಯಮಿತ ಯಡಿಯೂರಪ್ಪರವರು ಮುಖ್ಯಮಂತ್ರಿರವರು ಪ್ರಾರಂಭವಾಗಿ 100ಕೋಟಿ ಅನುದಾನ ನೀಡಿದರು.

ಗುರುಗಳ ದೇವರಲ್ಲ ಅವರು ನಮ್ಮಂತೆ ಮನುಷ್ಯರು ಕೆಲವು ಖಾವಿಧಾರಿಗಳು ಜನರನ್ನು ದಾರಿತಪ್ಪಿಸುತ್ತಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯರವರ ಬಳಿ ಮನವಿ ಮಾಡಿ 300ಕೋಟಿ ನೀಡಿದ್ದಾರೆ ಸಮರ್ಪಕವಾಗಿ ಯೋಜನೆಗಳಿಗೆ ಸಮರ್ಪಕವಾಗಿ ಬಳಕೆ ಮಾಡಲಾಗಿದೆ. ಬಸವ ಬೆಳಕು ವಿದ್ಯಾರ್ಥಿಗಳಿಗೆ ಸಾಲಸೌಲಭ್ಯ ಯೋಜನೆ ವಿದೇಶದಲ್ಲಿ ವಿದ್ಯಾಭ್ಯಾಸ ಮಾಡುವವರಿಗೆ ವಿದೇಶ ವಿದ್ಯಾವಿಕಾಸ, ರೈತರಿಗೆ ಜಮೀನಿಗೆ ನೀರಾವರಿ ಸೌಲಭ್ಯಕ್ಕೆ ಆರ್ಥಿಕ ನೆರವು ನೀಡಲು ಜೀವಜಲ ಯೋಜನೆ ಮತ್ತು ಕಾಯಕ ಕಿರಣ, ವಿಭೂತಿ ನಿರ್ಮಾಣ ಘಟಕ ,ಭೋಜನಾಲಯ, ಸ್ವಾವಲಂಭ ಸಾರಥಿ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಾತಂತ್ರ್ಯ ಅಮೃತ್ ಮಹೋತ್ಸವ ಮುನ್ನಡೆ, ಸ್ವ ಸಹಾಯ ಸಂಘಗಳಿಗ (ಸಾಲ ಮತ್ತು ಸಹಾಯಧನ) ಆಹಾರವಾಹಿನಿ ಯೋಜನೆಗಳು ಅನುಷ್ಠಾನಕ್ಕೆ ತರಲಾಗಿದೆ. ಭ್ರಷ್ಟಚಾರಕ್ಕೆ ಕಡಿವಾಣ ಹಾಕಲಾಗಿದೆ ಶಾಸಕರ ಶಿಫಾರಸ್ಸಿನ ಮೇಲೆ ಅರ್ಹ ಫಲಾನುಭವಿಗಳಿನ್ನು ಗುರುತಿಸಲಾಗುತ್ತದೆ. ಈ ಎಲ್ಲ ಯೋಜನೆಗಳು ವೀರಶೈವ ಲಿಂಗಾಯಿತ ಸಮುದಾಯದ ಅಭಿವೃದ್ಧಿಗೆ ಸಹಕಾರಿಯಾಗಿದೆ. ಎಂದು ಹೇಳಿದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

16 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

16 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

16 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

16 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

16 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

16 hours ago