ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ AIMSS ಖಂಡಿಸುತ್ತದೆ

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ AIMSS ಖಂಡಿಸುತ್ತದೆ

AIMSS condemns the incident of gang rape of a woman

ಕೊಪ್ಪಳ: ಕೊಡಬೇಕಿದ್ದ ಬಾಕಿ ಹಣ ಪಡೆದುಕೊಳ್ಳಲು ಹೊಸಪೇಟೆಯಿಂದ ಬಂದಿದ್ದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆಯನ್ನು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(AIMSS) ಕೊಪ್ಪಳ ಜಿಲ್ಲಾ ಸಂಘಟನಾ ಸಮಿತಿಯು ಅತ್ಯುಗ್ರವಾಗಿ ಖಂಡಿಸುತ್ತದೆ.

ಮಹಿಳೆಗೆ ಆರು ತಿಂಗಳ ಹಿಂದೆ ಪರಿಚಿತನಾಗಿದ್ದ ಆರೋಪಿ ಸಾಲ ಹಿಂದಿರುಗಿಸುವ ನೆಪದಲ್ಲಿ ಮಹಿಳೆಯನ್ನು ಕರೆಸಿಕೊಂಡು ಕುಷ್ಟಗಿ-ಯಲಬುರ್ಗಾ ರಸ್ತೆಯ ಮದ್ಲೂರ ಸಮೀಪದಲ್ಲಿರುವ ಹೊಲದ ಪಾಳು ಬಿದ್ದ ಮನೆಗೆ ಕರೆದುಕೊಂಡು ಹೋಗಿದ್ದಾನೆ. ಆತನ ಮೂವರು ಸ್ನೇಹಿತರು ಸೇರಿ ನಾಲ್ಕು ಜನ ಜ್ಯೂಸ್ ಎಂದು ನಂಬಿಸಿ ತನಗೆ ಮದ್ಯ ಕುಡಿಸಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಆದರೆ ಇದು ಇಷ್ಟಕ್ಕೆ ಸೀಮಿತಗೊಳ್ಳದೆ ಶೀಘ್ರಗತಿಯಲ್ಲಿ ತನಿಖೆಯನ್ನು ನಡೆಸಿ ಆರೋಪಿಗಳಿಗೆ ಉಗ್ರ ಶಿಕ್ಷೆಯನ್ನು ವಿಧಿಸಬೇಕು, ಸಂತ್ರಸ್ತ ಮಹಿಳೆಗೆ ನ್ಯಾಯ ಒದಗಿಸಬೇಕೆಂದು ಎ ಐ ಎಂ ಎಸ್ ಎಸ್ ಆಗ್ರಹಿಸುತ್ತದೆ.

ಮಹಿಳೆಯರ ಮೇಲೆ ದಿನನಿತ್ಯ ನಡೆಯುತ್ತಿರುವ ಅತ್ಯಾಚಾರ, ದೌರ್ಜನ್ಯಗಳ ವಿರುದ್ಧ ಯಾವುದೇ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲು ಸರ್ಕಾರಗಳು ಇಚ್ಛಾಶಕ್ತಿ ಹೊಂದಿಲ್ಲದೆ ಇರುವುದು ಘಟನೆಗಳು ಹೆಚ್ಚಾಗಲು ಕಾರಣವಾಗಿದೆ. ಸಮಾಜದಲ್ಲಿ ಮೌಲ್ಯಗಳ ಕುಸಿತದಿಂದಾಗುತ್ತಿರುವ ಸಾಂಸ್ಕೃತಿಕ ಅವನತಿಯ ಗುರುತುಗಳೇ ಇಂತಹ ಪ್ರಕರಣಗಳು. ಜೊತೆಗೆ ಇಂದಿನ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿರುವ ಅಶ್ಲೀಲ ಸಿನಿಮಾ-ಸಾಹಿತ್ಯ, ಪೋರ್ನ್ ವೆಬ್ಸೈಟ್ ಗಳು, ಮದ್ಯ ಮಾದಕ ವಸ್ತುಗಳು ವಿದ್ಯಾರ್ಥಿ-ಯುವಕರನ್ನು ವಿಕೃತ ಕೃತ್ಯಗಳಲ್ಲಿ ತೊಡಗುವಂತೆ ಪ್ರೇರೆಪಿಸುತ್ತಿವೆ. ಸಮಾಜದ ನೈತಿಕ ಬೆನ್ನೆಲುಬು ಮುರಿಯುವ ಇಂತಹ ಹುನ್ನಾರದ ಹಿಂದಿರುವ ಸರ್ಕಾರಗಳು ಮತ್ತು ವ್ಯವಸ್ಥೆಯ ವಿರುದ್ಧ ಪ್ರಜ್ಞಾವಂತ ಜನತೆ ಒಗ್ಗಟ್ಟಾಗಿ ಹೋರಾಟ ಕಟ್ಟುವುದು ಘಳಿಗೆಯ ಅವಶ್ಯಕತೆಯಾಗಿದೆ. ಈ ನಿಟ್ಟಿನಲ್ಲಿ ಜನತೆ ಮುಂದೆ ಬರಬೇಕು ಎಂದು ಎ ಐ ಎಂ ಎಸ್ ಎಸ್ ಕರೆ ನೀಡುತ್ತದೆ.

ಸುದ್ದಿ ಇವರಿಂದ
ಶಾರದಾ ಗಡ್ಡಿ
ಜಿಲ್ಲಾ ಕಾರ್ಯದರ್ಶಿ ಡಾ. ಸಿಂಪಿಲಿಂಗಣ್ಣ ರಸ್ತೆ, ಚಿಮ್ಮಲಿಗಿ ಆಸ್ಪತ್ರೆ ಹತ್ತಿರ, ಕೊಪ್ಪಳ – 583231
ಮೊ.8050850739 / 8792221730

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

17 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

17 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

17 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

17 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

17 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

17 hours ago