ಪೇ ಬ್ಯಾಕ್ ಟು ಮೋಚಿ ಸೋಸಾಯಿಟಿ ಎಜುಕೇಷನಲ್ ಟ್ರಸ್ಟ್ನಿಂದ
ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ೨ನೇ ಹಂತದ ಪ್ರೋತ್ಸಾಹಧನ ವಿತರಣೆ
Pay Back to Mochi Society Educational Trust distributes 2nd phase of incentive to talented students of the society ಕೊಪ್ಪಳ: ಪೇ ಬ್ಯಾಕ್ ಟು ಮೋಚಿ ಸೋಸಾಯಿಟಿ ಎಜುಕೇಷನಲ್ ಟ್ರಸ್ಟ್ನಿಂದ ಸಮಾಜ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರೋತ್ಸಹಿಸುವ ಉದ್ದೇಶದಿಂದ ನ.೨೩ ರಂದು ಕೊಪ್ಪಳದ ಸರ್ಕಾರಿ ನೌಕರರ ಭವನದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ೨ನೇ ಹಂತದ ಪ್ರೋತ್ಸಾಹಧನ ವಿತರಣೆ ಸಮಾರಂಭ ಹಮ್ಮಿಕೊಂಡಿದೆ ಎಂದು ಟ್ರಸ್ಟ್ ಅಧ್ಯಕ್ಷ ರಮೇಶ ಕೋಳೂರ ಅವರು ಹೇಳಿದರು.
ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ಈ ಕಾರ್ಯಕ್ರಮ ಸರ್ಕಾರಿ ನೌಕರರ ಭವನದಲ್ಲಿ ಹಮ್ಮಿಕೊಂಡಿದ್ದು ಕಾರ್ಯಕ್ರಮವನ್ನು ಲಡಾಯಿ ಪ್ರಕಾಶನದ ಸಂಪಾದಕ ಬಸವರಾಜ ಸೂಳಿಬಾವಿ ಅವರು ಉದ್ಘಾಟಿಸುವರು.
ಗಣ್ಯರಾದ ಬಿ.ಎಸ್.ಮದಕಟ್ಟಿ ಅವರು ಗೌರವ ಅಧ್ಯಕ್ಷತೆ ವಹಿಸಲಿದ್ದು, ನಾನು ಅಧ್ಯಕ್ಷತೆ ವಹಿಸುವೆ. ಮುಖ್ಯ ಅತಿಥಿಗಳಾದ ಸಿದ್ದಪ್ಪ, ದಾನಪ್ಪ ಕವಲೂರು, ಡಾ.ಸೋಮಕ್ಕ, ನಾಗಮ್ಮ ಹಾಲಿನವರ, ಜ್ಯೋತಿ ಬ್ಯಾಹಟ್ಟಿ ಅವರು ಉಪಸ್ಥಿತರಿರಲಿದ್ದಾರೆ. ಜನಪ್ರತಿನಿಧಿಗಳು ನಮ್ಮ ಸಮಾಜದ ಜನರ ಧ್ವನಿಯಾಗಲು ಮನವಿ ಮಾಡಿದರು.
ಸಮಾಜದ ಮುಖಂಡ ದಾನಪ್ಪ ಕವಲೂರು ಮಾತನಾಡಿ, ನಮ್ಮ ಮಕ್ಕಳ ಭವಿಷ್ಯವನ್ನು ರೂಪಿಸುವುದು .ಸಮಾಜದ ಜವಬ್ದಾರಿಯಾಗಿದೆ. ಹಾಗಾಗಿ ಪ್ರತಿಭಾವಂತರಿಗೆ ಶಾಲಾ-ಕಾಲೇಜುಗಳಲ್ಲಿ ಶುಲ್ಕ ಪಾವತಿಸಲು ಆಗದೇ ಇರುವಂತ ಹಾಗೂ ಅನಾಥ, ತಂದೆ-ತಾಯಿ ಇಲ್ಲದ ಮಕ್ಕಳನ್ನು ಗುರುತಿಸಿ ಸಮಾಜದ ಟ್ರಸ್ಟ್ ವತಿಯಿಂದ ಅವರಿಗೆ ಮಾಸಿಕ ಪ್ರೋತ್ಸಾಹ ಧನ ರೂಪದಲ್ಲಿ ಆರ್ಥಿಕ ನೆರವು ನೀಡಲಿದ್ದೇವೆ. ಇದೊಂದು ಸಮಾಜ ಸೇವೆಯಾಗಿದ್ದು ಎಲ್ಲರೂ ಸಹಕಾರ ಕೊಡಬೇಕು ಎಂದರು.
ಈ ಸುದ್ದಿಗೋಷ್ಠಿಯಲ್ಲಿ ಮೋಚಿ ಸಮಾಜದ ಕೊಪ್ಪಳ ಜಿಲ್ಲಾಧ್ಯಕ್ಷ ಮಂಜುನಾಥ ಬಂಡಿ, ಯಲ್ಲಪ್ಪ ಕೋಳೂರು, ಹನುಮಂತ ಸಾಲಿ, ಫಕೀರಪ್ಪ ಹಾದಿಮನಿ, ಮಂಜುನಾಥ ಕೋಳೂರು, ತಿಪ್ಪಣ್ಣ ಹಾದಿಮನಿ ಅವರು ಉಪಸ್ಥಿತರಿದ್ದರು.
ಬಾಕ್ಸ್ ಐಟಂ: ‘ಮೋಚಿ ಸಮುದಾಯವು ತುಂಬಾ ಹಿಂದುಳಿದಿದೆ. ನಮ್ಮ ಸಮಾಜದ ವಿದ್ಯಾರ್ಥಿಗಳಿಗೆ ಪ್ರೋತ್ಸಹಿವು ಅಗತ್ಯ ತುಂಬಾನೇ ಇದೆ. ಮಕ್ಕಳ ಉನ್ನತ ಶಿಕ್ಷಣಕ್ಕಾಗಿ ನಾವು ಆಸರೆಯಾಗಬೇಕು ಎಂಬ ಉದ್ದೇಶದಿಂದ ಈ ಟ್ರಸ್ಟ್ ಸ್ಥಾಪನೆ ಮಾಡಿದ್ದು, ಈ ಟ್ರಸ್ಟ್ಗೆ ಸಮಾಜದ ಗಣ್ಯರು, ನೌಕರರು, ನಿವೃತ್ತರಿಂದ ಆರ್ಥಿಕ ನೆರವು ಪಡೆದು, ಆ ಹಣದಲ್ಲಿ ಸಮಾಜದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಪ್ರತಿ ತಿಂಗಳು ೨೧೦೦ ರೂ. ಪ್ರೋತ್ಸಾಹಧನ ಕೊಡುವ ಯೋಜನೆ ರೂಪಿಸಿದ್ದೇವೆ ಎಂದರು. ಈಗಾಗಲೇ ೧೧ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕ ಪಾವತಿಗೆ ಪ್ರತಿ ತಿಂಗಳು ಪ್ರೋತ್ಸಾಹ ಧನ ನೀಡುತ್ತಿದ್ದು, ನ.೨೩ ರಂದು ಕೊಪ್ಪಳದಲ್ಲಿ ೨ನೇ ಹಂತದ ಪ್ರೋತ್ಸಾಹಧನ ವಿತರಣಾ ಸಮಾರಂಭವನ್ನು ಹಮ್ಮಿಕೊಂಡಿದ್ದೇವೆ’.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…