Breaking News

ದಿ ಬೆಂಗಳೂರು ಸಿಟಿ ಕೋ – ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನೇಮಕಾತಿ: ಮರುಪರೀಕ್ಷೆ: ಸೂಕ್ತ ತನಿಖೆಗೆ ರಾಷ್ಟ್ರೀಯ ಅಂಬೇಡ್ಕರ್ ಸೇನೆ ಆಗ್ರಹ

ದಿ ಬೆಂಗಳೂರು ಸಿಟಿ ಕೋ – ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನೇಮಕಾತಿ: ಮರುಪರೀಕ್ಷೆ: ಸೂಕ್ತ ತನಿಖೆಗೆ ರಾಷ್ಟ್ರೀಯ ಅಂಬೇಡ್ಕರ್ ಸೇನೆ ಆಗ್ರಹ

ಜಾಹೀರಾತು
The Bangalore City Co-operative Bank Limited Recruitment: Re-examination: Rashtriya Ambedkar Sena demands proper investigation

Screenshot 2025 11 25 21 42 28 93 6012fa4d4ddec268fc5c7112cbb265e75813483484967929015

ಬೆಂಗಳೂರು: ನ.25: ನಗರದ ಚಾಮರಾಜಪೇಟೆಯಲ್ಲಿನ ದಿ ಬೆಂಗಳೂರು ಸಿಟಿ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್‌ ನೇಮಕಾತಿ ಪ್ರಕ್ರಿಯೆಗಳಲ್ಲಿ ಭ್ರಷ್ಟಾಚಾರ ನಡೆದಿದೆಂದು ವಿರೋಧಿಸಿ ಇಂದು ಬೆಳಗ್ಗೆ (ಮಂಗಳವಾರ) ರಾಷ್ಟ್ರೀಯ ಅಂಬೇಡ್ಕರ್ ಸೇನೆ ವತಿಯಿಂದ ಪ್ರತಿಭಟನೆ ನಡೆಯಿತು.

ದಿ ಬೆಂಗಳೂರು ಸಿಟಿ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಸಿಬ್ಬಂದಿ ನೇಮಕಾತಿಯಲ್ಲಿ ಅಧ್ಯಕ್ಷರು ಮತ್ತು ನಿರ್ದೇಶಕರ ಆಡಳಿತ ಮಂಡಳಿ ಆಯ್ಕೆ ಮಾಡಲು ಹೊರಟಿರುವ ಅಭ್ಯರ್ಥಿಗಳ ನೇಮಕಾತಿ ಪಟ್ಟಿಯನ್ನು ಕೂಡಲೇ ತಡೆಹಿಡಿದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ ಮರು ಪರೀಕ್ಷೆ ನಡೆಸಿ ಈ ಹಿಂದೆ ನೇಮಕಗೊಂಡ 2014, 2017ರ ನೇಮಕಾತಿಯ ಬಗ್ಗೆ ಸೂಕ್ತ ಇಲಾಖಾ ತನಿಖೆ ನಡೆಸುವಂತೆ ಒತ್ತಾಯಿಸಿ, ರಾಷ್ಟ್ರೀಯ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷರಾದ ಡಾ. ಅರ್ಜುನ್ ಗೋಪಾಲ್ ಅವರ ನೇತೃತ್ವದಲ್ಲಿ ಸಹಕಾರ ಸಂಘಗಳ ನಿಬಂಧಕರಾದ ಆರ್.ಸಿ.ಎಸ್.ಕುಮಾರ್ ರವರಿಗೆ ಮನವಿ ನೀಡಿದರು.

ಇದೇ ಸಂದರ್ಭದಲ್ಲಿ ಟೈಗರ್ ಎಂ ಅರುಣ್, ಎಸ್. ಕೆಂಚಯ್ಯ, ರಾಜ್ಯ ಯುವ ಘಟಕದ ಅಧ್ಯಕ್ಷರಾದ ವಿಷ್ಣು ನಾರಾಯಣ್, ಕೆಂಚಯ್ಯ ಸೇರಿದಂತೆ ಮತ್ತಿತರರು ಇದ್ದರು.

About Mallikarjun

Check Also

ಕೊಪ್ಪಳ, ಯಲಬುರ್ಗಾ, ಕುಕನೂರು: ಗ್ರಾಮ ಉತ್ಕರ್ಷ ಅಭಿಯಾನ ಜಾರಿಗಾಗಿ ಆಯ್ದ ಗ್ರಾಮಗಳ ಮೀನುಗಾರರಿಂದ ಅರ್ಜಿ ಆಹ್ವಾನ

ಕೊಪ್ಪಳ, ಯಲಬುರ್ಗಾ, ಕುಕನೂರು: ಗ್ರಾಮ ಉತ್ಕರ್ಷ ಅಭಿಯಾನ ಜಾರಿಗಾಗಿ ಆಯ್ದ ಗ್ರಾಮಗಳ ಮೀನುಗಾರರಿಂದ ಅರ್ಜಿ ಆಹ್ವಾನ Koppal, Yelaburga, Kukanur: …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.