*ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ*

ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಗೊಳಿಸಿಗ್ಯಾರಂಟಿ ಯೋಜನೆ ತಾಲೂಕು ಅನುಷ್ಠಾನ ಸಮಿತಿ ಅಧ್ಯಕ್ಷರಾದ ಡಾ.ವೆಂಕಟೇಶ ಬಾಬು ಸೂಚನೆ

ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ

Guarantee Scheme Progress Review Meeting

ಗಂಗಾವತಿ : ಪಂಚಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕು ಎಂದು ಗ್ಯಾರಂಟಿ ಯೋಜನೆ ತಾಲೂಕು ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷರಾದ ಡಾ.ವೆಂಕಟೇಶ ಬಾಬು ಅವರು ಹೇಳಿದರು.

ನಗರದ ತಾಲೂಕು ಪಂಚಾಯತ್ ಮಂಥನ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.

ಅನ್ನಭಾಗ್ಯ ಯೋಜನೆಯ ಎಲ್ಲ ಅರ್ಹ ಫಲಾನುಭವಿಗಳಿಗೆ ಕಡ್ಡಾಯವಾಗಿ ಪ್ರತಿ ತಿಂಗಳು ಪಡಿತರ ವಿತರಣೆಯಾಗಬೇಕು.‌ ತಿಂಗಳ ಕೊನೆ ದಿನದವರೆಗೆ ನ್ಯಾಯಬೆಲೆ ಅಂಗಡಿಯವರು ಪಡಿತರ ವಿತರಣೆ ಮಾಡಬೇಕು ಎಂದು ಆಹಾರ ನಿರೀಕ್ಷಕರಿಗೆ ಸೂಚನೆ ನೀಡಿದರು.

ತಾಲೂಕಿನಲ್ಲಿ ಶಾಲಾ -ಕಾಲೇಜು ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ಬಸ್ಸಿನ ಸೌಲಭ್ಯ ಕಲ್ಪಿಸಬೇಕು. ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಶಕ್ತಿ, ಯುವನಿಧಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಯಿಂದ ಯಾವುದೇ ಫಲಾನುಭವಿಗಳು ವಂಚಿತರಾಗದಂತೆ ಅಧಿಕಾರಿಗಳು ಕ್ರಮವಹಿಸಬೇಕು. ಮರಣ ಹೊಂದಿದ ಫಲಾನುಭವಿಗಳನ್ನು ಯೋಜನೆಯಿಂದ ತೆಗೆದುಹಾಕಬೇಕು ಎಂದು ಸೂಚಿಸಿದರು.

ತಾಪಂ ಇಓ ರಾಮರೆಡ್ಡಿ ಪಾಟೀಲ್ ಅವರು ಮಾತನಾಡಿ, ಅನುಷ್ಠಾನ ಇಲಾಖೆ ಅಧಿಕಾರಿಗಳು ಶೆ.100 ರಷ್ಟು ಪ್ರಗತಿ ಸಾಧಿಸಬೇಕು. ಯೋಜನೆಯಿಂದ ಹೊರಗಿರುವ ಅರ್ಹ ಕುಟುಂಬಗಳನ್ನು ಗುರುತಿಸಿ ಅವರಿಗೆ ಸರಕಾರದ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದರು.

ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಇಲಾಖೆ ಅಧಿಕಾರಿಗಳು ಸಭೆಗೆ ಪ್ರಗತಿ ವರದಿ ಒಪ್ಪಿಸಿದರು.

ಸಿಡಿಪಿಓ ಜಯಶ್ರೀ, ಕೆಇಬಿ ಎಇಇ ಮಂಜುನಾಥ, ಕೆಎಸ್ ಆರ್ ಟಿಸಿ ತಾಲೂಕು ವ್ಯವಸ್ಥಾಪಕರಾದ ರಾಜಶೇಖರ, ಉದ್ಯೋಗ ಇಲಾಖೆ ಅಧಿಕಾರಿಗಳಾದ ಹನುಮೇಶ, ಆಹಾರ ನಿರೀಕ್ಷಕರಾದ ನಾಗರತ್ನ, ವಿಷಯ ನಿರ್ವಾಹಕರಾದ ರವೀಂದ್ರ ಕುಲಕರ್ಣಿ, ಗ್ಯಾರಂಟಿ ಯೋಜನೆ ತಾಲೂಕು ಅನುಷ್ಠಾನ ಸಮಿತಿ ಸದಸ್ಯರಾದ ಓಂಕಾರಪ್ಪ, ಪ್ರಜ್ವಲ್, ಮುಸ್ತಾಕ್, ಮಂಜುನಾಥ ಕಲಾಲ್, ಹಮೀದ್ ಮುಲ್ಲಾ, ಅಹ್ಮದ್ ಪಟೇಲ್, ಬಿ. ರಾಜಪ್ಪ ಸೇರಿ ಇತರರು ಇದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

13 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

14 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

14 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

14 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

14 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

14 hours ago