Breaking News

ಆಸ್ತಿ ತೆರಿಗೆ  ಅಭಿವೃದ್ಧಿ ಅಧಿಕಾರಿಗಳಾದ ಸುರೇಶ ಚಲವಾದಿ ಸೂಚನೆ

ಆಸ್ತಿ ತೆರಿಗೆ ಪಾವತಿಸಿವಡ್ಡರಹಟ್ಟಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ಸುರೇಶ ಚಲವಾದಿ ಸೂಚನೆ

Property Tax Development Officer Suresh Chalwadi notice
Screenshot 2025 12 16 17 30 33 69 6012fa4d4ddec268fc5c7112cbb265e71391666232807738564 754x1024


ಗಂಗಾವತಿ : ತಾಲೂಕಿನ ವಡ್ಡರಹಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 2025-26ನೇಸಾಲಿನಲ್ಲಿ ಕರ ವಸೂಲಾತಿ ಆಂದೋಲನ ಆರಂಭಿಸಿದ್ದು, ಬಾಕಿ ಉಳಿಸಿಕೊಂಡಿರುವ ಎಲ್ಲಾ ಸಾರ್ವಜನಿಕ ಮಳಿಗೆಗಳು, ರೈಸ್ ಮಿಲ್ ಗಳು, ನಿವೇಶನ ಮತ್ತು ನೀರಿನ ತೆರಿಗೆ ಪಾವತಿಸುಂತೆ ವಡ್ಡರಹಟ್ಟಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ಸುರೇಶ ಚಲವಾದಿ ಅವರು ಸೂಚಿಸಿದ್ದಾರೆ.
ಈಗಾಗಲೇ ಮನೆ – ಮನೆ ಭೇಟಿ ನೀಡಿ ಗ್ರಾಮಸ್ಥರಿಗೆ ಕರ ವಸೂಲಾತಿ ಆಂದೋಲನ ಜಾಗೃತಿ ಮೂಡಿಸಲಾಗಿದೆ. ವಡ್ಡರಹಟ್ಟಿ ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸಾರ್ವಜನಿಕ ಮಳಿಗೆಗಳು, ರೈಸ್ ಮಿಲ್ ಗಳು, ಪೆಟ್ರೋಲ್ ಬಂಕ್ ಗಳು, ಖಾಸಗಿ ಶಾಲೆ-ಕಾಲೇಜುಗಳು, ವಾಣಿಜ್ಯ ಆಸ್ತಿಗಳ ತೆರಿಗೆ ಸೇರಿದಂತೆ ಇತರೆ ಎಲ್ಲಾ ಸಣ್ಣ/ದೊಡ್ಡ ವ್ಯಾಪಾರಿಗಳು ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ಸಹಕಾರ ನೀಡಿ ಪರವಾನಗಿ ನವೀಕರಿಸಿಕೊಳ್ಳಬೇಕು.

Screenshot 2025 12 16 17 38 19 68 965bbf4d18d205f782c6b8409c5773a46122225885678813711 650x1024


ಈಗಾಗಲೇ ತೆರಿಗೆ, ದರ, ಪೀಜುಗಳು ಮತ್ತು ಇತರೆ ಸೇವಾ ಶುಲ್ಕಗಳನ್ನು ಪಾವತಿಸಿರುವ ಸಾರ್ವಜನಿಕರಿಗೆ ತುಂಬು ಹೃದಯದ ಧನ್ಯವಾದಗಳು. ಪ್ರಸ್ತುತ 2025-26ನೇ ಸಾಲಿನ ಹಾಗೂ ಬಾಕಿ ವರ್ಷಗಳ ತೆರಿಗೆ, ದರ, ಫೀಜುಗಳುಮತ್ತು ಸೇವಾ ಶುಲ್ಕಗಳನ್ನು ಹಿಂದಿನ ವರ್ಷಗಳ ಬಾಕಿ ಉಳಿಸಿಕೊಂಡಿರುವ ಸಾರ್ವಜನಿಕರು ಇದೇ ಡಿ.17ರಂದು (ಬುಧವಾರ) ತಮ್ಮ ತೆರಿಗೆ ದರ, ಫೀಜುಗಳು ಮತ್ತು ಸೇವಾ ಶುಲ್ಕಗಳನ್ನು ಕೂಡಲೇ ಪಾವತಿಸುವಂತೆ ಕೋರಲಾಗಿದೆ. ಬಾಕಿ ವರ್ಷಗಳ ತೆರಿಗೆ, ದರ, ಫೀಜುಗಳು ಮತ್ತು ಸೇವಾ ಶುಲ್ಕಗಳನ್ನುಈ ದಿನದಂದು ಪಾವತಿಸದಿದ್ದಲ್ಲಿ ಶೇ.5% ದಂಡದೊಂದಿಗೆ (ವಾರ್ಷಿಕ) ವಸೂಲಾತಿಗೆ ಈ ಕಛೇರಿಯಿಂದ ಕ್ರಮ ಜರುಗಿಸಲಾಗುವುದು. ಗ್ರಾಮ ಪಂಚಾಯತ್ ವ್ಯಾಪ್ತಿಯ ಸೈನಿಕರು, ಮಾಜಿ ಸೈನಿಕರು, ಸೈನಿಕರ ವಿಧವಾ ಮಹಿಳೆಯರು, ವಿಶೇಷ ಚೇತನರು ಮತ್ತು ಹೆಚ್.ಐ.ವಿ. (ಏಡ್ಸ್), ಕುಷ್ಠರೋಗ ಪೀಡಿತ ಮಾಲೀಕರ ವಾಸದ ಮನೆಗಳಿಗೆ ಶೇ.50% ವಿನಾಯತಿ ನೀಡುವುದಾಗಿ ಗ್ರಾ.ಪಂ.ಆಡಳಿತ ಮಂಡಳಿ ಶೀರ್ಮಾನಿಸಿರುತ್ತದೆ ಎಂದು ಪ್ರಕಟಣೆಯಲ್ಲಿ ಗ್ರಾಪಂ ಅಧ್ಯಕ್ಷರಾದ ಮಂಜುಳಾ ಶಿವಪ್ಪ ನಾಯಕ, ಉಪಾಧ್ಯಕ್ಷರಾದ ಟಿ.ಗೌಸ್ಸಾಬ್ ಹುಸೇನಸಾಬ್, ಪಿಡಿಓ ಸುರೇಶ ಸಿ., ಗ್ರಾಪಂ ಸದಸ್ಯರು ತಿಳಿಸಿದ್ದಾರೆ. ಗ್ರಾಪಂ ವ್ಯಾಪ್ತಿಯ ಮಾಲೀಕರು ಕರ ಪಾವತಿಗೆ ಗ್ರಾಪಂ ಪಿಡಿಓ, ಕಾರ್ಯದರ್ಶಿಗಳು, ಕರವಸೂಲಿಗಾರರ ಮೊಬೈಲ್ ನಂಬರ್ 8073563216, 7353334396, 9242124789 ಸಂಖ್ಯೆಗೆ ಸಂಪರ್ಕಿಸಿ ಕರಗಳನ್ನು ಪಾವತಿಸಿ ಅಭಿವೃದ್ಧಿಗೆ ಸಹಕರಿಸಲು ಕೋರಿದೆ.

About Mallikarjun

Check Also

screenshot 2025 12 16 18 04 04 09 e307a3f9df9f380ebaf106e1dc980bb6.jpg

ರಾಜ್ಯಮಟ್ಟದ ಪದವಿಪೂರ್ವ ಕಾಲೇಜುಗಳ ಜಂಪ್‌ರೋಪ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು  ರಾಷ್ಟ್ರ ಮಟ್ಟಕ್ಕೆ  ಕುಮಾರ ಮಂಜುನಾಥ ಆಯ್ಕೆ.

ರಾಜ್ಯಮಟ್ಟದ ಪದವಿಪೂರ್ವ ಕಾಲೇಜುಗಳ ಜಂಪ್‌ರೋಪ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು  ರಾಷ್ಟ್ರ ಮಟ್ಟಕ್ಕೆ  ಕುಮಾರ ಮಂಜುನಾಥ ಆಯ್ಕೆ. Kumar Manjunath, who …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.