ಆಸ್ತಿ ತೆರಿಗೆ  ಅಭಿವೃದ್ಧಿ ಅಧಿಕಾರಿಗಳಾದ ಸುರೇಶ ಚಲವಾದಿ ಸೂಚನೆ

ಆಸ್ತಿ ತೆರಿಗೆ ಪಾವತಿಸಿವಡ್ಡರಹಟ್ಟಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ಸುರೇಶ ಚಲವಾದಿ ಸೂಚನೆ

Property Tax Development Officer Suresh Chalwadi notice
 


ಗಂಗಾವತಿ : ತಾಲೂಕಿನ ವಡ್ಡರಹಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 2025-26ನೇಸಾಲಿನಲ್ಲಿ ಕರ ವಸೂಲಾತಿ ಆಂದೋಲನ ಆರಂಭಿಸಿದ್ದು, ಬಾಕಿ ಉಳಿಸಿಕೊಂಡಿರುವ ಎಲ್ಲಾ ಸಾರ್ವಜನಿಕ ಮಳಿಗೆಗಳು, ರೈಸ್ ಮಿಲ್ ಗಳು, ನಿವೇಶನ ಮತ್ತು ನೀರಿನ ತೆರಿಗೆ ಪಾವತಿಸುಂತೆ ವಡ್ಡರಹಟ್ಟಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ಸುರೇಶ ಚಲವಾದಿ ಅವರು ಸೂಚಿಸಿದ್ದಾರೆ.
ಈಗಾಗಲೇ ಮನೆ – ಮನೆ ಭೇಟಿ ನೀಡಿ ಗ್ರಾಮಸ್ಥರಿಗೆ ಕರ ವಸೂಲಾತಿ ಆಂದೋಲನ ಜಾಗೃತಿ ಮೂಡಿಸಲಾಗಿದೆ. ವಡ್ಡರಹಟ್ಟಿ ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸಾರ್ವಜನಿಕ ಮಳಿಗೆಗಳು, ರೈಸ್ ಮಿಲ್ ಗಳು, ಪೆಟ್ರೋಲ್ ಬಂಕ್ ಗಳು, ಖಾಸಗಿ ಶಾಲೆ-ಕಾಲೇಜುಗಳು, ವಾಣಿಜ್ಯ ಆಸ್ತಿಗಳ ತೆರಿಗೆ ಸೇರಿದಂತೆ ಇತರೆ ಎಲ್ಲಾ ಸಣ್ಣ/ದೊಡ್ಡ ವ್ಯಾಪಾರಿಗಳು ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ಸಹಕಾರ ನೀಡಿ ಪರವಾನಗಿ ನವೀಕರಿಸಿಕೊಳ್ಳಬೇಕು.


ಈಗಾಗಲೇ ತೆರಿಗೆ, ದರ, ಪೀಜುಗಳು ಮತ್ತು ಇತರೆ ಸೇವಾ ಶುಲ್ಕಗಳನ್ನು ಪಾವತಿಸಿರುವ ಸಾರ್ವಜನಿಕರಿಗೆ ತುಂಬು ಹೃದಯದ ಧನ್ಯವಾದಗಳು. ಪ್ರಸ್ತುತ 2025-26ನೇ ಸಾಲಿನ ಹಾಗೂ ಬಾಕಿ ವರ್ಷಗಳ ತೆರಿಗೆ, ದರ, ಫೀಜುಗಳುಮತ್ತು ಸೇವಾ ಶುಲ್ಕಗಳನ್ನು ಹಿಂದಿನ ವರ್ಷಗಳ ಬಾಕಿ ಉಳಿಸಿಕೊಂಡಿರುವ ಸಾರ್ವಜನಿಕರು ಇದೇ ಡಿ.17ರಂದು (ಬುಧವಾರ) ತಮ್ಮ ತೆರಿಗೆ ದರ, ಫೀಜುಗಳು ಮತ್ತು ಸೇವಾ ಶುಲ್ಕಗಳನ್ನು ಕೂಡಲೇ ಪಾವತಿಸುವಂತೆ ಕೋರಲಾಗಿದೆ. ಬಾಕಿ ವರ್ಷಗಳ ತೆರಿಗೆ, ದರ, ಫೀಜುಗಳು ಮತ್ತು ಸೇವಾ ಶುಲ್ಕಗಳನ್ನುಈ ದಿನದಂದು ಪಾವತಿಸದಿದ್ದಲ್ಲಿ ಶೇ.5% ದಂಡದೊಂದಿಗೆ (ವಾರ್ಷಿಕ) ವಸೂಲಾತಿಗೆ ಈ ಕಛೇರಿಯಿಂದ ಕ್ರಮ ಜರುಗಿಸಲಾಗುವುದು. ಗ್ರಾಮ ಪಂಚಾಯತ್ ವ್ಯಾಪ್ತಿಯ ಸೈನಿಕರು, ಮಾಜಿ ಸೈನಿಕರು, ಸೈನಿಕರ ವಿಧವಾ ಮಹಿಳೆಯರು, ವಿಶೇಷ ಚೇತನರು ಮತ್ತು ಹೆಚ್.ಐ.ವಿ. (ಏಡ್ಸ್), ಕುಷ್ಠರೋಗ ಪೀಡಿತ ಮಾಲೀಕರ ವಾಸದ ಮನೆಗಳಿಗೆ ಶೇ.50% ವಿನಾಯತಿ ನೀಡುವುದಾಗಿ ಗ್ರಾ.ಪಂ.ಆಡಳಿತ ಮಂಡಳಿ ಶೀರ್ಮಾನಿಸಿರುತ್ತದೆ ಎಂದು ಪ್ರಕಟಣೆಯಲ್ಲಿ ಗ್ರಾಪಂ ಅಧ್ಯಕ್ಷರಾದ ಮಂಜುಳಾ ಶಿವಪ್ಪ ನಾಯಕ, ಉಪಾಧ್ಯಕ್ಷರಾದ ಟಿ.ಗೌಸ್ಸಾಬ್ ಹುಸೇನಸಾಬ್, ಪಿಡಿಓ ಸುರೇಶ ಸಿ., ಗ್ರಾಪಂ ಸದಸ್ಯರು ತಿಳಿಸಿದ್ದಾರೆ. ಗ್ರಾಪಂ ವ್ಯಾಪ್ತಿಯ ಮಾಲೀಕರು ಕರ ಪಾವತಿಗೆ ಗ್ರಾಪಂ ಪಿಡಿಓ, ಕಾರ್ಯದರ್ಶಿಗಳು, ಕರವಸೂಲಿಗಾರರ ಮೊಬೈಲ್ ನಂಬರ್ 8073563216, 7353334396, 9242124789 ಸಂಖ್ಯೆಗೆ ಸಂಪರ್ಕಿಸಿ ಕರಗಳನ್ನು ಪಾವತಿಸಿ ಅಭಿವೃದ್ಧಿಗೆ ಸಹಕರಿಸಲು ಕೋರಿದೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

15 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

15 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

15 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

15 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

16 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

16 hours ago