I will beat you with slippers from the people'! Magadi MLA Balakrishna Garam against the Tahsildarಮಾಗಡಿ ತಾಲೂಕು ಪಂಚಾಯತಿಯಲ್ಲಿ ನಡೆದ ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ ಶಾಸಕ ಹೆಚ್.ಸಿ ಬಾಲಕೃಷ್ಣ ಅವರು ತಹಶೀಲ್ದಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ’! ತಹಶೀಲ್ದಾರ್ ವಿರುದ್ಧ ಮಾಗಡಿ ಶಾಸಕ ಬಾಲಕೃಷ್ಣ ಗರಂ
ಜಾಹೀರಾತು


ಬೆಂಗಳೂರುದಕ್ಷಿಣ:ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ (Public Grievance Meeting) ಮಾಗಡಿ ಶಾಸಕ ಹೆಚ್.ಸಿ ಬಾಲಕೃಷ್ಣ (H.C Balakrishna) ತಹಶೀಲ್ದಾರ್ (Tahsildar) ಅವರನ್ನ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಮಾಗಡಿಯ ತಾಲೂಕು ಪಂಚಾಯತಿಯಲ್ಲಿ ನಡೆದ ಸಭೆಯಲ್ಲಿ ಮಾಗಡಿ ತಹಶೀಲ್ದಾರ್ ಡಿ.ಪಿ. ಶರತ್ ಕುಮಾರ್ ವಿರುದ್ಧ ಶಾಸಕ ಹೆಚ್.ಸಿ.ಬಾಲಕೃಷ್ಣ ಗರಂ ಆಗಿದ್ದಾರೆ. ಜನರಿಂದ ಚಪ್ಪಳಿಯಲ್ಲಿ ಹೊಡೆಸುತ್ತೇನೆ ಎಂದು ತಹಶೀಲ್ದಾರ್ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ.
Total Views:
0


