ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ, ಜಾಮೀನು ನೀಡಿರುವದು (AIMSS) ತೀವ್ರ ಕಳವಳ ವ್ಯಕ್ತಪಡಿಸಿದೆ.(AIMSS) ತೀವ್ರ ಕಳವಳ ವ್ಯಕ್ತಪಡಿಸಿದೆ.

ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ, ಜಾಮೀನು ನೀಡಿರುವುದು (AIMSS) ತೀವ್ರ ಕಳವಳ ವ್ಯಕ್ತಪಡಿಸಿದೆ.

(AIMSS) has expressed deep concern over the suspension of the life sentence of the main accused in the Unnao rape case and granting bail. (AIMSS) has expressed deep concern.
 

ಕೋಲ್ಕತ್ತಾ/ನವದೆಹಲಿ:

2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ, ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗರ್‌ನ ಜೀವಾವಧಿ ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಅಮಾನತುಗೊಳಿಸಿ ಆತನಿಗೆ ಜಾಮೀನು ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ, ಸಂತ್ರಸ್ತೆ ಮತ್ತು ಆಕೆಯ ಕುಟುಂಬದ ಸುರಕ್ಷತೆಯ ಬಗ್ಗೆ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (AIMSS) ತೀವ್ರ ಕಳವಳ ವ್ಯಕ್ತಪಡಿಸಿದೆ.
ನ್ಯಾಯಾಲಯದ ಈ ತೀರ್ಪಿನ ನಂತರ, ಸಹಜವಾಗಿಯೇ ತಮ್ಮ ಪ್ರಾಣಕ್ಕೆ ಅಪಾಯವಿರಬಹುದೆಂದು ಆತಂಕಗೊಂಡ ಸಂತ್ರಸ್ತೆ ಮತ್ತು ಆಕೆಯ ತಾಯಿ ನವದೆಹಲಿಯ ಇಂಡಿಯಾ ಗೇಟ್ ಬಳಿ ಪ್ರತಿಭಟನೆ ನಡೆಸಿದರು.

2

ಪರಿಣಾಮ ಅವರನ್ನು ರಸ್ತೆಯಲ್ಲಿ ಅಮಾನವೀಯವಾಗಿ ಎಳೆದಾಡಿರುವುದನ್ನು AIMSS ಅಖಿಲ ಭಾರತ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಛಬ್ಬಿ ಮೊಹಂತಿ ಅವರು ಖಂಡಿಸಿದ್ದಾರೆ. ಸಂತ್ರಸ್ತರು ವ್ಯಕ್ತಪಡಿಸಿರುವ ಈ ಆತಂಕದ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.

ನ್ಯಾಯಕ್ಕಾಗಿ ಹೋರಾಡುವವರು, ಆರೋಪಿಗಳು ಬಿಡುಗಡೆಯಾದಾಗ ಇನ್ನಷ್ಟು ಅಸುರಕ್ಷಿತರಾಗುವ ಭಯಾನಕ ಸ್ಥಿತಿಯನ್ನು ಈ ಪ್ರತಿಭಟನೆಯು ಎತ್ತಿ ತೋರಿಸುತ್ತಿದೆ.


ನಮ್ಮ ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಸಂತ್ರಸ್ತರಿಗೆ ನ್ಯಾಯ ಮತ್ತು ಸುರಕ್ಷತೆ ನಿರಾಕರಿಸುವುದು ಮತ್ತು ಆರೋಪಿಗಳು ಶಿಕ್ಷೆಯಿಂದ ಮುಕ್ತರಾಗಿ ಹೊರಬರುವುದು ಸಾಮಾನ್ಯವಾಗುತ್ತಿದೆ.

ಅಷ್ಟೇ ಅಲ್ಲದೆ, ಪ್ರಭಾವಿಯಾದ ಅವರು ಸಾರ್ವಜನಿಕ ಜೀವನಕ್ಕೆ ಮರಳಿದಾಗ ಅವರಿಗೆ ಹೂಮಾಲೆ ಹಾಕಿ ಸ್ವಾಗತಿಸುವಂತಹ ಘಟನೆಗಳೂ ನಡೆಯುತ್ತಿವೆ. ಆರೋಪಿಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವಾಗ ಕೆಲವು ಷರತ್ತುಗಳನ್ನು ವಿಧಿಸಲಾಗಿದ್ದರೂ, ಸರ್ಕಾರ ಮತ್ತು ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಂಪೂರ್ಣ ರಕ್ಷಣೆ ಮತ್ತು ಭದ್ರತೆಯನ್ನು ಖಾತರಿಪಡಿಸಬೇಕೆಂದು ನಾವು ಬಲವಾಗಿ ಒತ್ತಾಯಿಸುತ್ತೇವೆ.

ಜಾಮೀನು ಷರತ್ತುಗಳ ಯಾವುದೇ ಉಲ್ಲಂಘನೆ ಅಥವಾ ಬೆದರಿಕೆ ತಂತ್ರಗಳನ್ನು ಕಟ್ಟುನಿಟ್ಟಾಗಿ ಮತ್ತು ತಕ್ಷಣವೇ ಹತ್ತಿಕ್ಕಬೇಕು.


ದೇಶದ ಎಲ್ಲಾ ಪ್ರಜ್ಞಾವಂತ ನಾಗರಿಕರು, ವಿಶೇಷವಾಗಿ ಮಹಿಳೆಯರು, ನ್ಯಾಯದ ತತ್ವಗಳನ್ನು ರಕ್ಷಿಸಲು ಮತ್ತು ಎತ್ತಿಹಿಡಿಯಲು ಜಾಗರೂಕರಾಗಿರಬೇಕು.

ನ್ಯಾಯಕ್ಕಾಗಿ ಜನಸಾಮಾನ್ಯರು ನಡೆಸುವ ಹೋರಾಟ ಹಾಗೂ ಮಹಿಳಾ ದೌರ್ಜನ್ಯ ವಿರೋಧಿ ಆಂದೋಲನಗಳು ಹೆಚ್ಚಾಗಬೇಕು.

ಸಂತ್ರಸ್ತರ ಸುರಕ್ಷತೆ ಹಾಗೂ ಅಪರಾಧಿಯ ಹಕ್ಕುಗಳ ನಿರ್ಣಾಯಕ ಪರಮರ್ಶೆಯಾಗುವಲ್ಲಿ ದೇಶದ ಜನತೆಯು ಒಗ್ಗಟ್ಟಿನಿಂದ ಇರಬೇಕು ಎಂದು AIMSS ಕರೆ ನೀಡುತ್ತದೆ.ಎಂದು  AIMSS, ಕೊಪ್ಪಳ ಜಿಲ್ಲಾ ಸಂಘಟನಾ ಸಮಿತಿ  ಜಿಲ್ಲಾ ಕಾರ್ಯದರ್ಶಿ ಶಾರದಾ ಗಡ್ಡಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Mallikarjun

Share
Published by
Mallikarjun

Recent Posts

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…

1 hour ago

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

21 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

21 hours ago