Manjunatha Educational Institute celebrates the birthday of Ajatashatru Atal Bihari Vajpayee
ಮಂಜುನಾಥ ಶಿಕ್ಷಣ ಸಂಸ್ಥೆಯ ವತಿ ಯಿಂದ ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿಯವರಜನ್ಮದಿನಾಚರಣೆ
ಮೂಡಲಗಿ : ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿಯವರು ದೇಶಕ್ಕೆ ನೀಡಿದಂತ ಉತ್ತಮ ಆಡಳಿತ ಹಾಗೂ ಅಭಿವೃದ್ಧಿ ಕಾರ್ಯಗಳು ಅಪಾರವಾಗಿದ್ದು, ಅವರ ಜನ್ಮದಿನವನ್ನು ಉತ್ತಮ ಆಡಳಿತ ದಿನವಾಗಿ ಆಚರಿಸುತ್ತಿದ್ದೇವೆ ಎಂದು ಮಂಜುನಾಥ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಲಕ್ಷ್ಮಣ್ ಅಡಿಹುಡಿ ಹೇಳಿದರು.
ಮೂಡಲಗಿ ಪಟ್ಟಣದ ಮಂಜುನಾಥ ಸೈನಿಕ ತರಬೇತಿ ಕೇಂದ್ರದ ಸಭಾ ಭವನದಲ್ಲಿ ಭಾರತ ಸರ್ಕಾರದ ಮೈ ಭಾರತ ಕೇಂದ್ರ ಬೆಳಗಾವಿ ಹಾಗೂ ಸಂಕಲ್ಪ ಕ್ರೀಡಾ ಮತ್ತು ಸಮಾಜ ಸೇವಾ ಸಂಘ ಮೂಡಲಗಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚರಣೆ ಅಂಗವಾಗಿ ಉತ್ತಮ ಆಡಳಿತ ದಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಜಕೀಯ ಕ್ಷೇತ್ರದಲ್ಲಿ ಅಟಲ್ ಬಿಹಾರಿ ವಾಜಪೇಯಿಯವರ ಹೆಸರು ಅಜರಾಮರ ಎಂದು ಬಣ್ಣಿಸಿದರು. ಬಿಜೆಪಿ ಅರಬಾವಿ ಮಂಡಲದ ಅಧ್ಯಕ್ಷರಾದ ಮಹಾದೇವ ಶೇಕ್ಕಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅಟಲ್ ಬಿಹಾರಿ ವಾಜಪೇಯಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಬೆಳಗಾವಿ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ ಮಾತನಾಡಿ ರಾಜ್ಯಶಾಸ್ತ್ರದಲ್ಲಿ ಎಂಎ ಪದವಿ ಗಳಿಸಿದ್ದ ಅಟಲ್ ಬಿಹಾರಿ ವಾಜಪೇಯಿಯವರು, ಭಾರತೀಯ ಜನಸಂಘದ ಸಂಸ್ಥಾಪಕ ಸದಸ್ಯರಾಗಿ ಕಾರ್ಯ ನಿರ್ವಹಿಸಿ ನಂತರ ಭಾರತೀಯ ಜನತಾ ಪಕ್ಷದ ಬೆಳವಣಿಗೆಗೆ ಭದ್ರ ಬುನಾದಿ ಹಾಕಿದರು. ಅವರ ಜೀವನದ ತತ್ವ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ನಾವು ನಡೆಯುತ್ತಿರುವ ಕ್ಷೇತ್ರದ ಮೂಲಕ ಸಮಾಜ ಸೇವೆ ಸಲ್ಲಿಸಬೇಕೆಂದರು.
ಮೂಡಲಗಿ ಗವಿತೋಟ ಶಾಲೆಯ ಶಿಕ್ಷಕರಾದ ಸಂತೋಷ್ ಪಾಟೀಲ ಮಾತನಾಡಿ ಪೊಖ್ರಾನ್ ಅಣು ಪರೀಕ್ಷೆ ನಡೆಸುವುದರ ಮೂಲಕ ಭಾರತ ದೇಶವನ್ನು ಪರಮಾಣು ಶಕ್ತಿ ಹೊಂದಿದ ರಾಷ್ಟ್ರವಾನ್ನಾಗಿ ಮಾಡಿ, ಅಮೆರಿಕದಂತ ಬಲಾಢ್ಯ ರಾಷ್ಟ್ರಗಳು ಭಾರತ ದೇಶದತ್ತ ತಿರುಗಿ ನೋಡುವಂತಾಗಿ ಮಾಡಿದ ಕೀರ್ತಿ ಭಾರತ ರತ್ನ ಪುರಸ್ಕೃತ ಅಟಲ್ ಜೀಯವರಿಗೆ ಸಲ್ಲುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಆಡಳಿತ ಅಧಿಕಾರಿ ಮಹಾಂತೇಶ ಕೋಟವಾಗಿ, ಪಾಂಡುರಂಗ ಮಹೇಂದ್ರಕರ್, ಸಾಹಿತ್ಯ ರತ್ನ ಮಹಾರಾಜ್ ಸಿದ್ದು ಹಳ್ಳೂರ, ಚಂದ್ರಶೇಖರ ಪತ್ತಾರ, ಮಂಜುನಾಥ್ ರೇಳೆಕರ ಹಾಗೂ ಕಾರ್ಯಕರ್ತರು ಶಿಬಿರಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಂಕಲ್ಪ ಕ್ರೀಡಾ ಮತ್ತು ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಸುಭಾಸ ಗೊಡ್ಯಾಗೋಳ ನಿರೂಪಿಸಿ, ವಂದಿಸಿದರು.
Cancel my account and give me all the money in my account. ನನ್ನ ಅಕೌಂಟನ್ನು ಕ್ಯಾನ್ಸಲ್…
ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…
Devotee's iPhone fell into his pocket! Alas, it ended after falling into his pocket. ಹುಂಡಿಗೆ…
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…