ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಉತ್ಪನ್ನ ಖರೀದಿ ಬೆಲೆ ವ್ಯೆತ್ಯಾಸದ ಮೊತ್ತ ಡಿಬಿಟಿ ಮೂಲಕ ಪಾವತಿಸಲು ಕ್ರಮ- ವೀರಭದ್ರಯ್ಯ ಹಿರೇಮಠ

ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಉತ್ಪನ್ನ ಖರೀದಿ
ಬೆಲೆ ವ್ಯೆತ್ಯಾಸದ ಮೊತ್ತ ಡಿಬಿಟಿ ಮೂಲಕ ಪಾವತಿಸಲು ಕ್ರಮ- ವೀರಭದ್ರಯ್ಯ ಹಿರೇಮಠ
Steps to pay price difference amount through DBT - Veerabhadraiah Hiremath

ಕೊಪ್ಪಳ ಜನವರಿ 08 (ಕರ್ನಾಟಕ ವಾರ್ತೆ): ಮುಂಗಾರು ಹಂಗಾಮಿನಲ್ಲಿ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಮೆಕ್ಕೆಜೋಳ ಉತ್ಪನ್ನ ಖರೀದಿ ಕುರಿತಂತೆ ಜಿಲ್ಲೆಯ ವಿವಿಧ ಎ.ಪಿ.ಎಂ.ಸಿ ಮಾರುಕಟ್ಟೆಗಳಲ್ಲಿ ಆಗುವ ವಹಿವಾಟಿನ ಧಾರಣೆಯ ಆಧಾರದ ಮೇಲೆ ರೈತರಿಗೆ ಬೆಲೆ ವ್ಯೆತ್ಯಾಸದ ಮೊತ್ತವನ್ನು ಡಿಬಿಟಿ ಮೂಲಕ ಪಾವತಿಸಲಾಗುವುದೆಂದು ಕೊಪ್ಪಳ ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕ ವೀರಭದ್ರಯ್ಯ ಹಿರೇಮಠ ಅವರು ತಿಳಿಸಿದ್ದಾರೆ.
ಸರ್ಕಾರದ ಆದೇಶ ಸಂಖ್ಯೆ:ಸಿಒ243/ಎಂಆರ್‌ಇ 2025/ಬೆಂಗಳೂರು, ದಿನಾಂಕ: 04/01/2026ರ ಆದೇಶದಂತೆ ಕೊಪ್ಪಳ ಜಿಲ್ಲೆಯ ಎಲ್ಲಾ ರೈತ ಬಾಂಧವರಿಗೆ ಈ ಮೂಲಕ ತಿಳಿಸುವುದೇನೆಂದರೆ, 2025-26ನೇ ಸಾಲಿನ ಮುಂಗಾರು ಹಂಗಾಮಿನ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ. ಗುಣಮಟ್ಟದ ಮೆಕ್ಕೆಜೋಳವನ್ನು ಜಿಲ್ಲೆಯ ವಿವಿಧ ಎ.ಪಿ.ಎಂ.ಸಿ ಮಾರುಕಟ್ಟೆಗಳಲ್ಲಿ ಆಗುವ ವಹಿವಾಟಿನ ಧಾರಣೆಯ ಆಧಾರದ ಮೇಲೆ ರೈತರಿಗೆ ಬೆಲೆ ವ್ಯೆತ್ಯಾಸದ ಮೊತ್ತವನ್ನು ಡಿಬಿಟಿ ಮುಖಾಂತರ ಬ್ಯಾಂಕ್ ಖಾತೆಗೆ ಪಾವತಿಸಲಾಗುವುದು. ಮಾರುಕಟ್ಟೆ ಮಧ್ಯ ಪ್ರವೇಶದ ದರ ಪ್ರತಿ ಕ್ವಿಂಟಲ್‌ಗೆ ಗರಿಷ್ಠ ರೂ. 2.150 ಗಳನ್ನು ನಿಗದಿಪಡಿಸಿದೆ. ಪ್ರತಿ ಎಕರಗೆ 12 ಕ್ವಿಂಟಲ್‌ನಂತೆ ಫ್ರೂಟ್ಸ್ ತಂತ್ರಾಂಶದಲ್ಲಿ ಲಭ್ಯವಾಗುವ ರೈತರು ಹೊಂದಿರುವ ಜಮೀನಿನ ವಿಸ್ತೀರ್ಣಕ್ಕನುಗುಣವಾಗಿ ಪ್ರತಿ ರೈತರಿಗೆ ಗರಿಷ್ಠ 50 ಕ್ವಿಂಟಲ್‌ಗೆ ಮಿತಿಗೊಳಿಸಿದೆ.
ಮಾರುಕಟ್ಟೆ ಧಾರಣೆ ಪ್ರತಿ ಕ್ವಿಂಟಲ್‌ಗೆ ರೂ. 1900 ಅಥವಾ ಅದಕ್ಕಿಂತ ಕಡಿಮೆ ದರದಲ್ಲಿ ಮಾರಾಟವಾದರೆ, ಪ್ರತಿ ಕ್ವಿಂಟಲ್‌ಗೆ ಗರಿಷ್ಠ ರೂ. 250 ರಂತೆ ಪಾವತಿಸಲಾಗುವುದು. ಮಾರುಕಟ್ಟೆ ಧಾರಣೆ ಪ್ರತಿ ಕ್ವಿಂಟಲ್‌ಗೆ ರೂ. 1950 ರಂತೆ ಮಾರಾಟವಾದಲ್ಲಿ ವ್ಯತ್ಯಾಸದ ಮೊತ್ತ ರೂಪಾಯಿ ಪ್ರತಿ ಕ್ವಿಂಟಲ್‌ಗೆ ರೂ. 200 ರಂತೆ ಪಾವತಿಸಲಾಗುವುದು. ಮಾರುಕಟ್ಟೆ ಧಾರಣೆ ಪ್ರತಿ ಕ್ವಿಂಟಲ್‌ಗೆ ರೂ. 2000 ಗಳಂತೆ ಮಾರಾಟವಾದಲ್ಲಿ ವ್ಯತ್ಯಾಸದ ಮೊತ್ತ ರೂಪಾಯಿ ಪ್ರತಿ ಕ್ವಿಂಟಲ್‌ಗೆ ರೂ.150 ರಂತೆ ಪಾವತಿಸಲಾಗುವುದು. ಮಾರುಕಟ್ಟೆ ಧಾರಣೆ ಪ್ರತಿ ಕ್ವಿಂಟಲ್‌ಗೆ ರೂ. 2100 ಗಳಂತೆ ಮಾರಾಟವಾದಲ್ಲಿ ವ್ಯತ್ಯಾಸದ ಮೊತ್ತ ರೂಪಾಯಿ ಪ್ರತಿ ಕ್ವಿಂಟಲ್‌ಗೆ ರೂ. 50 ರಂತೆ ಪಾವತಿಸಲಾಗುವುದು. ಮಾರುಕಟ್ಟೆ ಧಾರಣೆಯು ಪ್ರತಿ ಕ್ವಿಂಟಲ್‌ಗೆ ರೂ. 2150 ಅಥವಾ ಅದಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟವಾದಲ್ಲಿ ಯೋಜನೆಯ ವಾಪ್ತಿಗೆ ಒಳಪಡುವುದಿಲ್ಲ.
*ಮೇಕ್ಕೆಜೋಳ ನೋಂದಣಿ ಮತ್ತು ಖರೀದಿ ಕೇಂದ್ರಗಳ ವಿವರ:* ಗಂಗಾವತಿ ತಾಲ್ಲೂಕಿನ ನೊಂದಣಿ ಮತ್ತು ಖರೀದಿ ಕೇಂದ್ರ; ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಗಂಗಾವತಿ ಕಾರ್ಯದರ್ಶಿಯವರ ಮೊ.ಸಂ: 9341978290, ಕೊಪ್ಪಳ ತಾಲ್ಲೂಕಿನ ನೊಂದಣಿ ಮತ್ತು ಖರೀದಿ ಕೇಂದ್ರ; ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕೊಪ್ಪಳ ಕಾರ್ಯದರ್ಶಿಯವರ ಮೊ.ಸಂ: 9902224089, ಕುಷ್ಟಗಿ ತಾಲ್ಲೂಕಿನ ನೊಂದಣಿ ಮತ್ತು ಖರೀದಿ ಕೇಂದ್ರಗಳು; ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕುಷ್ಟಗಿ ಕಾರ್ಯದರ್ಶಿಯವರ ಮೊ.ಸಂ: 9880886909 ಹಾಗೂ ಕುಷ್ಟಗಿ ಉಪ ಮಾರುಕಟ್ಟೆ ಸಮಿತಿ ಹನಮಸಾಗರ ಕಾರ್ಯದರ್ಶಿಯವರ ಮೊ.ಸಂ: 9880886909, ಕನಕಗಿರಿ ತಾಲ್ಲೂಕಿನ ನೊಂದಣಿ ಮತ್ತು ಖರೀದಿ ಕೇಂದ್ರ; ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕನಕಗಿರಿ ಕಾರ್ಯದರ್ಶಿಯವರ ಮೊ.ಸಂ: 9341978290, ಕುಕನೂರು ತಾಲ್ಲೂಕಿನ ನೊಂದಣಿ ಮತ್ತು ಖರೀದಿ ಕೇಂದ್ರ; ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಯಲಬುರ್ಗಾ ಕೇಂದ್ರ ಕಛೇರಿ ಕುಕನೂರು ಕಾರ್ಯದರ್ಶಿಯವರ ಮೊ.ಸಂ: 9972054874 ಮತ್ತು ಕಾರಟಗಿ ತಾಲ್ಲೂಕಿನ ಮೇಕ್ಕೆಜೋಳ ನೊಂದಣಿ ಕೇಂದ್ರ; ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರಟಗಿ ಕಾರ್ಯದರ್ಶಿಯವರ ಮೊ.ಸಂ: 9060893320 ಆಗಿರುತ್ತದೆ.
ಈಗಾಗಲೆ ರಾಜ್ಯ ಸರ್ಕಾರದ ವತಿಯಿಂದ, ಎಥೆನಾಲ್ ಉತ್ಪಾದನೆಗಾಗಿ ಕುಕ್ಕುಟ ಮತ್ತು ಪಶು ಆಹಾರ ತಯಾರಿಕಾ ಘಟಕಗಳಿಗೆ ಹಾಗೂ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಕ್ಕೆ ಅವಶ್ಯವಿರುವ ಮಕ್ಕೆಜೋಳ ಪೂರೈಕೆ ಮಾಡಿರುವ ರೈತರಿಗೆ ಸದರಿ ಯೋಜನೆಯು ಅನ್ವಯಿಸುವುದಿಲ್ಲ. ಸದರಿ ಯೋಜನೆಯ ಅನುಷ್ಠಾನ ಅವಧಿಯು ಮೆಕ್ಕೆಜೋಳ ಉತ್ಪನ್ನದ ಮೊದಲ ವಹಿವಾಟು ಯುಎಂಪಿ (UMP) ತಂತ್ರಾಂಶದಲ್ಲಿ ಆಗುವ ದಿನಾಂಕದಿಂದ ಒಂದು ತಿಂಗಳ ಅವಧಿಯವರಿಗೆ ಮಾತ್ರ ಚಾಲ್ತಿಯಲ್ಲಿರುತ್ತದೆ. ಈ ಯೋಜನೆಯ ಪ್ರಯೋಜನ ಪಡೆಯಲು ಕೊಪ್ಪಳ ಜಿಲ್ಲೆಯ ಎಲ್ಲಾ ರೈತಬಾಂಧವರು ಮೇಲಿನ ಸ್ಥಗಳಲ್ಲಿ ಆಧಾರ ಕಾರ್ಡ ಫ್ರೂಟ್ಸ್ (FRUITS) ಗುರುತಿನ ಸಂಖ್ಯೆಯೊಂದಿಗೆ ಎನ್‌ಇಎಂಎಲ್ (NeML) ತಂತ್ರಾಂಶದಲ್ಲಿ ಬಯೋಮೆಟ್ರಿಕ್ ಮೂಲಕ ನೋಂದಣಿ ಮಾಡಿಸಿಕೊಂಡು ಎಪಿಎಂಸಿ ಮಾರುಕಟ್ಟೆ ಪ್ರಾಂಗಣಗಳಲ್ಲಿ ಯುಎಂಪಿ ವೇದಿಕೆಯಲ್ಲಿ ಜಿಲ್ಲೆಯ ರೈತ ಬಾಂಧವರು ಮೆಕ್ಕೆಜೋಳ ಉತ್ಪನ್ನವನ್ನು ಮಾರಾಟ ಮಾಡುವಂತೆ ಕೊಪ್ಪಳ ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯ ಪ್ರಕಟಣೆ ತಿಳಿಸಿದೆ.
Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

14 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

14 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

14 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

14 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

14 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

14 hours ago