
ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದ ಜಿಲ್ಲಾಮಟ್ಟದ ಜಾಗೃತ ಸಮಿತಿ ಸಭೆ
ಯಾವುದೇ ಮಗು ಜಂತುನಿವಾರಕ ಮಾತ್ರೆಯಿಂದ ವಂಚಿತರಾಗದಿರಲಿ- ಸಿಇಒ ವರ್ಣಿತ್ ನೇಗಿ
No child should be deprived of disinfectant pills - CEO Varnit Negi
ಜಾಹೀರಾತು

ಕೊಪ್ಪಳ ಫೆಬ್ರುವರಿ 03 (ಕರ್ನಾಟಕ ವಾರ್ತೆ): ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದಡಿ ಯಾವುದೇ ಮಗು ಜಂತುನಿವಾರಕ ಮಾತ್ರೆಯಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಹೇಳಿದರು.
ಅವರು ಇತ್ತೀಚೆಗೆ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಕೊಠಡಿಯಲ್ಲಿ ರಾಷ್ಟ್ರೀಯಜಂತುಹುಳು ನಿವಾರಣಾ ಕಾರ್ಯಕ್ರಮದ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಫೆಬ್ರುವರಿ 10 ರಂದು ನಡೆಯುವ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮವನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲು ಸಂಬಂಧಿಸಿದ ವಿವಿಧ ಇಲಾಖೆಗಳ ಅಧಿಕಾರಿಗಳು ಸಮನ್ವಯ ಸಾಧಿಸಿ ಅಗತ್ಯ ಕ್ರಮಕೈಗೊಳ್ಳಬೇಕು. ಜಂತುನಿವಾರಕ ಮಾತ್ರೆಯಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮ ವಹಿಸುವುದರ ಜೊತೆಗೆ ಅರ್ಹರಿರುವ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಈ ಮಾತ್ರೆ ನೀಡುವಂತಾಗಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಂತು ರಹಿತ ಮಗು ದೇಶದ ಸಂಪತ್ತು, ಮಕ್ಕಳ ಆರೋಗ್ಯ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಹಾಗಾಗಿ ಈ ಕಾರ್ಯðಕ್ರಮದ ಬಗ್ಗೆ ಹೆಚ್ಚು ಪ್ರಚಾರ ನಡೆಸಿ, ಆರೋಗ್ಯವಂತ ಸಮಾಜ ನಿರ್ಮಾಣ ಮಾಡಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಟಿ.ಲಿಂಗರಾಜು ಅವರು ಮಾತನಾಡಿ, ಈ ಕಾರ್ಯಕ್ರಮದ ಉದ್ದೇಶ ಮಕ್ಕಳಲ್ಲಿ ಮತ್ತು ಹದಿ-ಹರೆಯದವರಲ್ಲಿ ಕಂಡಬರುವ ಜಂತುಬಾದೆ, ಅಪೌಷ್ಠಿಕತೆ ಮತ್ತು ರಕ್ತಹೀನತೆ ತಡೆಗಟ್ಟುವುದು ಹಾಗೂ ಮಾನಸಿಕ ಮತ್ತು ದೈಹಿಕವಾಗಿ ಸದೃಢವಾಗಿ ಬೆಳವಣಿಗೆ ಹೊಂದಲು ಪ್ರತಿ 6 ತಿಂಗಳಿಗೊಮ್ಮೆ ಈ ಜಂತುನಿವಾರಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದರು.
ಜಿಲ್ಲಾ ಆರ್.ಸಿ.ಹೆಚ್ ಹಾಗೂ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಪ್ರಕಾಶ ವಿ. ಅವರು ಮಾತನಾಡಿ, ಜಿಲ್ಲೆಯಲ್ಲಿ ಫೆಬ್ರವರಿ 10 ರಂದು “ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದ”ವನ್ನು ಆಯೋಜಿಸಲಾಗಿದ್ದು, 1 ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಜಂತುನಿವಾರಕ ಅಲ್ಬೆಂಡಾಜೋಲ್ ಮಾತ್ರೆಯನ್ನು ಅಂಗನವಾಡಿ ಕೇಂದ್ರದ ಮಕ್ಕಳಿಗೆ, ಶಾಲೆ, ಕಾಲೇಜು (ಸರಕಾರಿ, ಖಾಸಗಿ)ಗಳ ವಿದ್ಯಾರ್ಥಿಗಳಿಗೆ ಮಾತ್ರೆಯನ್ನು ನೀಡಲಾಗುತ್ತಿದೆ. ಈ ದಿನಾಂಕದಂದು ಗೈರು ಹಾಜರಾದ ಮಕ್ಕಳಿಗೆ ಫೆ. 16ರಂದು ಮಾತ್ರೆಗಳನ್ನು ನೀಡಲಾಗುತ್ತದೆ. ಶಾಲೆಯಿಂದ ಹೊರಗುಳಿದ ಮಕ್ಕಳಿಗೂ ಸಹ ಈ ಮಾತ್ರೆಯನ್ನು ಅಂಗನವಾಡಿ ಕೇಂದ್ರಗಳಲ್ಲಿ ನೀಡಲಾಗುತ್ತದೆ. 1 ರಿಂದ 2 ವರ್ಷದ ಮಕ್ಕಳಿಗೆ ಅರ್ಧಮಾತ್ರೆ (200ಎಂಜಿ) 2 ಎರಡು ವರ್ಷ ಮೇಲ್ಪಟ್ಟ ಮಕ್ಕಳಿಗೆ ಪೂರ್ತಿಮಾತ್ರೆ (400ಎಂಜಿ) ನೀಡಬೇಕಿರುತ್ತದೆ. ಸಣ್ಣ ಮಕ್ಕಳಿಗೆ ಮಾತ್ರೆಯನ್ನು ನೀರಿನಲ್ಲಿ ಕರಗಿಸಿ ನಿದಾನವಾಗಿ ಕುಡಿಸಬೇಕು. ಈ ಕಾರ್ಯಕ್ರಮ ಕುರಿತು, ವಿವಿಧ ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಆರೋಗ್ಯ ಕಾರ್ಯಕರ್ತೆಯರಿಗೆ, ಆಶಾ ಕಾರ್ಯಕರ್ತೆಯರಿಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಶಾಲಾ ಶಿಕ್ಷಕರಿಗೆ ಆರೋಗ್ಯ ಕೇಂದ್ರದ ಹಂತದಲ್ಲಿ ತರಬೇತಿ ನೀಡಲಾಗುತ್ತದೆ ಎಂದು ಸಭೆಯಲ್ಲಿ ವಿವರಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಟಿ.ಲಿಂಗರಾಜು ಅವರು ಮಾತನಾಡಿ, ಈ ಕಾರ್ಯಕ್ರಮದ ಉದ್ದೇಶ ಮಕ್ಕಳಲ್ಲಿ ಮತ್ತು ಹದಿ-ಹರೆಯದವರಲ್ಲಿ ಕಂಡಬರುವ ಜಂತುಬಾದೆ, ಅಪೌಷ್ಠಿಕತೆ ಮತ್ತು ರಕ್ತಹೀನತೆ ತಡೆಗಟ್ಟುವುದು ಹಾಗೂ ಮಾನಸಿಕ ಮತ್ತು ದೈಹಿಕವಾಗಿ ಸದೃಢವಾಗಿ ಬೆಳವಣಿಗೆ ಹೊಂದಲು ಪ್ರತಿ 6 ತಿಂಗಳಿಗೊಮ್ಮೆ ಈ ಜಂತುನಿವಾರಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದರು.
ಜಿಲ್ಲಾ ಆರ್.ಸಿ.ಹೆಚ್ ಹಾಗೂ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಪ್ರಕಾಶ ವಿ. ಅವರು ಮಾತನಾಡಿ, ಜಿಲ್ಲೆಯಲ್ಲಿ ಫೆಬ್ರವರಿ 10 ರಂದು “ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದ”ವನ್ನು ಆಯೋಜಿಸಲಾಗಿದ್ದು, 1 ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಜಂತುನಿವಾರಕ ಅಲ್ಬೆಂಡಾಜೋಲ್ ಮಾತ್ರೆಯನ್ನು ಅಂಗನವಾಡಿ ಕೇಂದ್ರದ ಮಕ್ಕಳಿಗೆ, ಶಾಲೆ, ಕಾಲೇಜು (ಸರಕಾರಿ, ಖಾಸಗಿ)ಗಳ ವಿದ್ಯಾರ್ಥಿಗಳಿಗೆ ಮಾತ್ರೆಯನ್ನು ನೀಡಲಾಗುತ್ತಿದೆ. ಈ ದಿನಾಂಕದಂದು ಗೈರು ಹಾಜರಾದ ಮಕ್ಕಳಿಗೆ ಫೆ. 16ರಂದು ಮಾತ್ರೆಗಳನ್ನು ನೀಡಲಾಗುತ್ತದೆ. ಶಾಲೆಯಿಂದ ಹೊರಗುಳಿದ ಮಕ್ಕಳಿಗೂ ಸಹ ಈ ಮಾತ್ರೆಯನ್ನು ಅಂಗನವಾಡಿ ಕೇಂದ್ರಗಳಲ್ಲಿ ನೀಡಲಾಗುತ್ತದೆ. 1 ರಿಂದ 2 ವರ್ಷದ ಮಕ್ಕಳಿಗೆ ಅರ್ಧಮಾತ್ರೆ (200ಎಂಜಿ) 2 ಎರಡು ವರ್ಷ ಮೇಲ್ಪಟ್ಟ ಮಕ್ಕಳಿಗೆ ಪೂರ್ತಿಮಾತ್ರೆ (400ಎಂಜಿ) ನೀಡಬೇಕಿರುತ್ತದೆ. ಸಣ್ಣ ಮಕ್ಕಳಿಗೆ ಮಾತ್ರೆಯನ್ನು ನೀರಿನಲ್ಲಿ ಕರಗಿಸಿ ನಿದಾನವಾಗಿ ಕುಡಿಸಬೇಕು. ಈ ಕಾರ್ಯಕ್ರಮ ಕುರಿತು, ವಿವಿಧ ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಆರೋಗ್ಯ ಕಾರ್ಯಕರ್ತೆಯರಿಗೆ, ಆಶಾ ಕಾರ್ಯಕರ್ತೆಯರಿಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಶಾಲಾ ಶಿಕ್ಷಕರಿಗೆ ಆರೋಗ್ಯ ಕೇಂದ್ರದ ಹಂತದಲ್ಲಿ ತರಬೇತಿ ನೀಡಲಾಗುತ್ತದೆ ಎಂದು ಸಭೆಯಲ್ಲಿ ವಿವರಿಸಿದರು.
ಸಭೆಯಲ್ಲಿ ಆರೋಗ್ಯ ಜಿಲ್ಲಾ ಅನುಷ್ಠಾನಾಧಿಕಾರಿ ಡಾ. ರವೀಂದ್ರನಾಥ್ ಎಂ.ಹೆಚ್., ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ನಂದಕುಮಾರ, ಜಿಲ್ಲಾ ಕ್ಷಯರೋಗ ಹಾಗೂ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಶಶಿಧರ, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿಯಂತ್ರಣಾಧಿಕಾರಿ ಡಾ. ಪ್ರಕಾಶ ಹೆಚ್., ಜಿಲ್ಲಾ ಯೋಜನಾ ಅಭಿವೃದ್ಧಿ ಅಧಿಕಾರಿ ಡಾ. ಕುಮಾರಸ್ವಾಮಿ ಗೋನಾಳ ಸೇರಿದಂತೆ ಎಲ್ಲಾ ತಾಲೂಕಾ ಆರೋಗ್ಯಾಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ವೈದ್ಯಾಧಿಕಾರಿಗಳು, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿಗಳು, ಆರೋಗ್ಯ ಶಿಕ್ಷಣಾಧಿಕಾರಿಗಳು ಹಾಗೂ ಇತರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.




