ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರ ಪರಿಷ್ಕೃತ ಪ್ರವಾಸ ಕಾರ್ಯಕ್ರಮ

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರ ಪರಿಷ್ಕೃತ ಪ್ರವಾಸ ಕಾರ್ಯಕ್ರಮ
Revised tour program of Dr. Nagalakshmi Chaudhary, Chairperson of the State Women's Commission

ಕೊಪ್ಪಳ ಫೆಬ್ರವರಿ 03, (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಅವರು ಫೆಬ್ರವರಿ 5 ರಿಂದ 7 ರವರೆಗೆ ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಅಧ್ಯಕ್ಷರು ಫೆ.5 ರಂದು ಬೆಳಿಗ್ಗೆ 6.30 ಗಂಟೆಗೆ ಕೊಪ್ಪಳಕ್ಕೆ ಆಗಮಿಸುವರು. ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಪಿಯು ಹಾಗೂ ಪದವಿ ಕಾಲೇಜು ವಿದ್ಯಾರ್ಥಿನಿಯರ ಜೊತೆ ಸಂವಾದ ನಡೆಸುವರು. ಬೆಳಿಗ್ಗೆ 11 ಗಂಟೆಗೆ ಕೊಪ್ಪಳದಿಂದ ನಿರ್ಗಮಿಸಿ ಮಧ್ಯಾಹ್ನ 12.45 ಗಂಟೆಗೆ ಕಾರಟಗಿ ತಾಲ್ಲೂಕಿನ ಈಳಿಗನೂರು ಗ್ರಾಮಕ್ಕೆ ಭೇಟಿ ನೀಡುವರು. ಮಧ್ಯಾಹ್ನ 3 ಗಂಟೆಗೆ ಈಳಿಗನೂರಿನಿಂದ ಹೊರಟು ಮಧ್ಯಾಹ್ನ 3.30 ಗಂಟೆಗೆ ಕಾರಟಗಿ ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡುವರು. ಸಂಜೆ 4.30 ಗಂಟೆಗೆ ಕಾರಟಗಿ ಪೊಲೀಸ್ ಠಾಣೆಗೆ ಭೇಟಿ ನೀಡುವರು. ಸಂಜೆ 5.30 ಗಂಟೆಗೆ ಕಾರಟಗಿಯಿಂದ ಹೊರಟು ಸಂಜೆ 6 ಗಂಟೆಗೆ ಗಂಗಾವತಿಯ ಹಿಂದುಳಿದ ವರ್ಗಗಳ ಡಿ.ದೇವರಾಜ ಅರಸು ಪೋಸ್ಟ್ ಮೆಟ್ರಿಕ್ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡುವರು. ಸಂಜೆ 7 ಗಂಟೆಗೆ ಗಂಗಾವತಿಯಿAದ ಹೊರಟು 8 ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ ಅಂದು ರಾತ್ರಿ ಕೊಪ್ಪಳದಲ್ಲಿಯೇ ವಾಸ್ತವ್ಯ ಮಾಡುವರು.
ಫೆ.6 ರಂದು ಬೆಳಿಗ್ಗೆ 10 ಗಂಟೆಗೆ ಅಧ್ಯಕ್ಷರು ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆ ಹಾಗೂ ಕೊಪ್ಪಳ ಜಿಲ್ಲಾಸ್ಪತ್ರೆಗೆ ಭೇಟಿ ನೀಡುವರು. ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಆಯೋಜಿಸಿರುವ PಔSಊ ಅಧಿನಿಯಮ 2013ರ ತರಬೇತಿ ಹಾಗೂ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸುವರು. ಮಧ್ಯಾಹ್ನ 12 ಗಂಟೆಗೆ ಕೊಪ್ಪಳದ ವಾರ್ಡ್ ನಂ.28, ಸಿದ್ದೇಶ್ವರ ನಗರದ ಅಲೆಮಾರಿ ಕಾಲೋನಿಗೆ ಭೇಟಿ ನೀಡಿ, ಅಲೆಮಾರಿ ಸಮುದಾಯದ ಮಹಿಳೆಯರ ಸಮಸ್ಯೆಗಳನ್ನು ಆಲಿಸುವರು. ಮಧ್ಯಾಹ್ನ 3 ಗಂಟೆಗೆ ಕೊಪ್ಪಳ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಸ್ನೇಹ ಸಂಸ್ಥೆ ಕೊಪ್ಪಳ ಇವರು ಆಯೋಜಿಸಿರುವ ದೇವದಾಸಿ ಮಹಿಳೆಯರೊಂದಿಗೆ ಸಂವಾದ ನಡೆಸುವರು. ಸಂಜೆ 5 ಗಂಟೆಗೆ ಕೊಪ್ಪಳದ ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡುವರು. ಸಂಜೆ 6 ಗಂಟೆಗೆ ಕೊಪ್ಪಳದ ಸಮಾಜ ಕಲ್ಯಾಣ ಇಲಾಖೆಯ ಪೋಸ್ಟ್ ಮೆಟ್ರಿಕ್ ಬಾಲಕಿಯರ ವಸತಿನಿಲಯಕ್ಕೆ ಭೇಟಿ ನೀಡುವರು. ಅಂದು ರಾತ್ರಿ ಕೊಪ್ಪಳದಲ್ಲಿ ವಾಸ್ತವ್ಯ ಮಾಡುವರು.
ಫೆ.7 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಮಹಿಳಾ ಸ್ಪಂದನಾ ಕಾರ್ಯಕ್ರಮ ಹಾಗೂ ಮಹಿಳಾ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಮಧ್ಯಾಹ್ನ 3 ಗಂಟೆಗೆ ವಿವಿಧ ಮಾಧ್ಯಮದವರೊಂದಿಗೆ ಪತ್ರಿಕಾಗೋಷ್ಠಿ ನಡೆಸುವರು. ಸಂಜೆ 6.30 ಗಂಟೆಗೆ ಕೊಪ್ಪಳದಿಂದ ರೈಲಿನ ಮೂಲಕ ನಿರ್ಗಮಿಸಿ ಬೆಂಗಳೂರಿನ ಕಡೆ ಪ್ರಯಾಣ ಬೆಳೆಸುವರು ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫೆ.7 ರಂದು ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ

————–

ಕೊಪ್ಪಳ ಫೆಬ್ರವರಿ 03, (ಕರ್ನಾಟಕ ವಾರ್ತೆ): ಜವಾಹರ ನವೋದಯ ವಿದ್ಯಾಲಯದಲ್ಲಿ 2026-27ನೇ ಸಾಲಿನಲ್ಲಿ 9ನೇ ಮತ್ತು 11ನೇ ತರಗತಿಯ ಪ್ರವೇಶಕ್ಕಾಗಿ ಫೆಬ್ರವರಿ 7 ರಂದು ಈಗಾಗಲೇ ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದೆ.
9ನೇ ತರಗತಿ ಪ್ರವೇಶಕ್ಕಾಗಿ ರೂಲ್ ನಂಬರ್ 159219 ನಿಂದ 159732 ರವರೆಗೆ ಕುಕನೂರಿನ ಪಿ.ಎಮ್. ಶ್ರೀ ಜವಾಹರ ನವೋದಯ ವಿದ್ಯಾಲಯದಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದೆ. 11ನೇ ತರಗತಿ ಪ್ರವೇಶಕ್ಕಾಗಿ ರೂಲ್ ನಂಬರ್ 146981 ನಿಂದ 147268 ರವರೆಗೆ ಕುಕನೂರಿನ ಎಸ್.ಎಫ್.ಎಸ್. ಹೈಸ್ಕೂಲಿನಲ್ಲಿ ಹಾಗೂ ರೂಲ್ ನಂಬರ್ 147269 ನಿಂದ 147483 ರವರೆಗೆ ಕುಕನೂರಿನ ವಿದ್ಯಾನಂದ ಗುರುಕುಲ (ಹೈಸ್ಕೂಲು ಸೆಕ್ಷನ್) ದಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದೆ.
ಈಗಾಗಲೇ ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಿದ ವಿದ್ಯಾರ್ಥಿಗಳು ಹಾಲ್ ಟಿಕೆಟ್ ಡೌನ್‌ಲೋಡ್ ಮಾಡಿಕೊಂಡು ಫೆಬ್ರವರಿ 7 ರಂದು ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಬೇಕೆಂದು ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

12 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

12 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

12 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

12 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

13 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

13 hours ago