ಹಿರಿಯ ಪತ್ರಕರ್ತ ಅಪ್ಪಾರಾವ್ ಬಿರಾದಾರ್ ಇನ್ನಿಲ್ಲ
Senior journalist Apparao Biradar is no more

ಕಲಬುರ್ಗಿ:ಹಿರಿಯ ಪತ್ರಕರ್ತ ಅಪ್ಪಾರಾವ್ ಬಿರಾದಾರ್ (80) ಇಂದು ಸಂಜೆ ನಿಧನೆ ಹೊಂದಿರುತ್ತಾರೆ. ಮೃತರ ಅಂತ್ಯಕ್ರಿಯೆ ಕಲಬುರ್ಗಿಯ ಕಮಲಾಪುರ ತಾಲ್ಲೂಕಿನ ಗೋಗಿ ((ಕೆ) ಗ್ರಾಮದಲ್ಲಿ ಫೆ. 10 ರಂದು ಮಧ್ಯಾಹ್ನ ನಡೆಯಲಿದೆ. ಮೃತರು ಹಿರಿಯ ಪತ್ರಕರ್ತ ಸಿದ್ದು ಬಿರಾದಾರ್ ಸೇರಿದಂತೆ ನಾಲ್ವರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ. 1980 ರ ದಶಕದಲ್ಲಿ ಕಲಬುರ್ಗಿ ಜಿಲ್ಲೆಯಲ್ಲಿ ಗ್ರಾಮವಾಣಿ ಕನ್ನಡ ದಿನ ಪತ್ರಿಕೆಯ ಸಂಪಾದಕರಾಗಿ ಸುದೀರ್ಘವಾಗಿ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದರು.
