
ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ನೆರೆವೆರಿಸಿದ ಶಾಸಕ ಎಂ ಆರ್ ಮಂಜುನಾಥ್ .
MLA MR Manjunath performed Guddalipuja for road works

ವರದಿ:ಬಂಗಾರಪ್ಪ ಸಿ.
ಹನೂರ: ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯಗಳ ಅಭಿವೃದ್ಧಿಗೆ ಸರ್ಕಾರ ಸದಾ ಬದ್ಧವಾಗಿದೆ, ರಸ್ತೆ ಕಾಮಗಾರಿಗಳನ್ನು ಉತ್ತಮ ಗುಣಮಟ್ಟದಲ್ಲಿ ನಿರ್ವಹಿಸಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಿದರು.
ನಂತರ ಮಾತನಾಡಿದ ಅವರು ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೆದ್ದನಪಾಳ್ಯ ಗ್ರಾಮದಲ್ಲಿ ಮುಖ್ಯ ರಸ್ತೆಗೆ ಸಿಸಿ ರಸ್ತೆ ನಿರ್ಮಾಣ ಕಾಮಗಾರಿ ಹಾಗೂ ಮುಖ್ಯ ರಸ್ತೆಯಿಂದ ಸಿಲ್ಲಾರಿಡೋಡ್ಡಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸಿಸಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ಆರ್ಡಿಪಿಆರ್ ಇಲಾಖೆಯಿಂದ ಪೆದ್ದನಪಾಳ್ಯ ಗ್ರಾಮದ ಮುಖ್ಯ ರಸ್ತೆಯ ಸಿಸಿ ರಸ್ತೆ ಕಾಮಗಾರಿಗೆ ರೂ. 15 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ. ಇದೇ ವೇಳೆ ಮುಖ್ಯ ರಸ್ತೆಯಿಂದ ಸಿಲ್ಲಾರಿಡೋಡ್ಡಿ ಗ್ರಾಮಕ್ಕೆ ಸಿಸಿ ರಸ್ತೆ ನಿರ್ಮಾಣಕ್ಕಾಗಿ ಮತ್ತೊಂದು ರೂ. 15 ಲಕ್ಷ ಮಂಜೂರಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಹುಚ್ಚಯ್ಯ ,ಪಿ ಡಿ ಒ ನಂಜುಂಡಸ್ವಾಮಿ , ಚಿನ್ನಣ್ಣ ಸೇರಿದಂತೆ ಇತರರು ಹಾಜರಿದ್ದರು.




