ಹ್ಯಾಟಿ ಗ್ರಾಮದ ಸುತ್ತಲಿನ ಶಾಲೆಗಳನ್ನು ಮುಚ್ಚುವ ಹುನ್ನಾರದಿಂದ ಕೆಪಿಎಸ್ ಮಾಗ್ನೆಟ್ ಶಾಲೆಯನ್ನು ಮಾಡಲು ಮುಂದಾಗಿರುವ ಕೊಪ್ಪಳದ  ಶಾಸಕರ ನಡೆಗೆ  ಖಂಡನೆ!

ತೀವ್ರ ವಿರೋಧದ ನಡುವೆಯೂ ಕೆಪಿಎಸ್ ಮ್ಯಾಗ್ನೆಟ್ ಹೆಸರಲ್ಲಿ ಹ್ಯಾಟಿ ಗ್ರಾಮದ ಸುತ್ತಲಿನ ಶಾಲೆಗಳನ್ನು ಮುಚ್ಚುವ ಹುನ್ನಾರದಿಂದ ಕೆಪಿಎಸ್ ಮಾಗ್ನೆಟ್ ಶಾಲೆಯನ್ನು ಮಾಡಲು ಮುಂದಾಗಿರುವ ಕೊಪ್ಪಳದ ಮಾನ್ಯ ಶಾಸಕರ ನಡೆಗೆ ಎಐಡಿಎಸ್ಓ ಜಿಲ್ಲಾ ಸಂಚಾಲಕ ಗಂಗರಾಜ ಅಳ್ಳಳ್ಳಿ ಖಂಡನೆ!

 

Condemnation of the Koppal MLA's move to build a KPS magnet school with the intention of closing the schools around Hatti village!

 

ಕೊಪ್ಪಳ:ಗ್ರಾಮೀಣ ಭಾಗದ 40 ಸಾವಿರಕ್ಕೂ ಅಧಿಕ ಶಾಲೆಗಳನ್ನು ಮುಚ್ಚಿ ಪಂಚಾಯಿತಿಗೊಂದರಂತೆ ಕೇವಲ 6 ಸಾವಿರ ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ಸ್ಥಾಪಿಸಲು ಕರ್ನಾಟಕ ರಾಜ್ಯ ಸರ್ಕಾರವು ಮುಂದಾಗಿದೆ. ಮೊದಲ ಹಂತದಲ್ಲೇ 900 ಮ್ಯಾಗ್ನೆಟ್ ಶಾಲೆ ಮಾಡಲು ಆದೇಶಿಸಲಾಗಿದೆ. ಈ ಆದೇಶದಂತೆ ಕೊಪ್ಪಳದಲ್ಲಿನ 350 ಕ್ಕೂ ಹೆಚ್ಚು ಶಾಲೆಗಳು ಮುಚ್ಚುವ ಪಟ್ಟಿಯಲ್ಲಿವೆ, ಹ್ಯಾಟಿಯಲ್ಲಿ ಅಧಿಕೃತವಾಗಿ ಮಾನ್ಯ ಶಾಸಕರು ಇದಕ್ಕೆ ಚಾಲನೆ ನೀಡುತ್ತಿರುವುದು ಅವರ ಶಿಕ್ಷಣ ವಿರೋಧಿ ಬಡವರ ವಿರೋಧಿ ನಡೆಯನ್ನು ಎತ್ತಿ ತೋರಿಸುತ್ತದೆ.

ಈ ಉದ್ದೇಶಕ್ಕಾಗಿ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕ ಭಾಗದ ಜನರ ಏಳಿಗೆಗಾಗಿ ಇರುವ KKRDB ನಿಧಿಯಿಂದ 700ಕೋಟಿ ಹಣ ಪಡೆಯಲಾಗಿದೆ. ಅಲ್ಪಸಂಖ್ಯಾತರ ನಿಧಿಯಿಂದ 100ಕೋಟಿ ಪಡೆಯಲಾಗಿದೆ.
ಜನಕಲ್ಯಾಣಕ್ಕಾಗಿ ಬಳಸಬೇಕಾದ ನಿಧಿಯನ್ನು ಅದೇ ಜನರ ಮಕ್ಕಳು ಓದುವ ಗ್ರಾಮೀಣ ಶಾಲೆಗಳನ್ನು ಮುಚ್ಚಲು ಬಳಸಲಾಗುತ್ತಿದೆ. ಇದು ಈ ಜನರಿಗೆ ಮಾಡುತ್ತಿರುವ ವಿಶ್ವಾಸ ದ್ರೋಹವಾಗಿದೆ. ಮೂಲಭೂತ ಸೌಲಭ್ಯಗಳಿಲ್ಲದೇ ನರಳುತ್ತಿರುವ ಶಾಲೆಗಳ ದುರಸ್ತಿಗೆ ಯಾವುದೇ ಕಾರಣಕ್ಕೂ ಈ ಅನುದಾನ ಬಳಸಬಾರದೆಂಬ ಆಘಾತಕಾರಿ ಅಂಶವನ್ನು ಡಿ. 30ರಂದು ಹೊರಡಿಸಿರುವ ಈ ಆದೇಶದಲ್ಲಿ ತಿಳಿಸಲಾಗಿದೆ.

ಎಐಡಿಎಸ್ಓ ನೇತೃತ್ವದಲ್ಲಿ ಕೊಪ್ಪಳ ಜಿಲ್ಲೆಯಾದ್ಯಂತ ಜನ ಹೋರಾಟ ನಡೆಯುತ್ತಿದೆ. ಈಗಾಗಲೇ ಹಿರೇಕಾಸನಕಂಡಿ, ಹೆರೆಬಗನಾಳ್, ರಾಜರಾಮ್ ಪೇಟೆ ಮತ್ತು ಮಹಮ್ಮದ್ ನಗರದ ನೂರಾರು ಸಂಖ್ಯೆಯಲ್ಲಿ ಪಾಲಕರು ಹಾಗೂ ಗ್ರಾಮಸ್ಥರು ಬೀದಿಗಿಳಿದು ಊರಿನ ಶಾಲೆಗಳನ್ನು ಮುಚ್ಚುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ತೀವ್ರ ಜನವಿರೋಧದ ನಡುವೆಯೂ ಶಾಸಕರು ಹ್ಯಾಟಿಯಲ್ಲಿ ಕೆಪಿಎಸ್ ಮಾಗ್ನೆಟ್ ಶಾಲೆ ತೆರೆದು ಅದರ ಸುತ್ತಲಿನ ಶಾಲೆಗಳನ್ನು ಮುಚ್ಚುವ ನೀತಿಗೆ ಅಡಿಗಲ್ಲು ಇಡುತ್ತಿದ್ದಾರೆ. ಜನಾಭಿಪ್ರಾಯವನ್ನು ಧಿಕ್ಕರಿಸಿರುವ ಸರ್ಕಾರದ ಈ ನಿರಂಕುಶ ಮತ್ತು ಅಪ್ರಜಾತಾಂತ್ರಿಕ ನಡೆಯನ್ನು ಎಐಡಿಎಸ್‌ಓ ಅತ್ಯುಗ್ರ ಪದಗಳಲ್ಲಿ ಖಂಡಿಸುತ್ತದೆ. ಕೂಡಲೇ ಕರಾಳ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯನ್ನು ಹಿಂಪಡೆಯಬೇಕು ಮತ್ತು ಶಿಕ್ಷಕರು ಹಾಗೂ ಸೌಲಭ್ಯಗಳ ಕೊರತೆಯಿಂದ ನರಳುತ್ತಿರುವ ಜಿಲ್ಲೆಯ ಸರ್ಕಾರಿ ಶಾಲೆಗಳಿಗೆ ಸಮರ್ಪಕ ಸೌಲಭ್ಯ ನೀಡಿ ಅಭಿವೃದ್ಧಿಪಡಿಸಬೇಕೆಂದು ಜಿಲ್ಲೆಯ ವಿದ್ಯಾರ್ಥಿಗಳು ಶಿಕ್ಷಕರು ಪಾಲಕರು ಹಾಗೂ ಶಿಕ್ಷಣ ಪ್ರೇಮಿ ಜನತೆಯ ಪರವಾಗಿ ಸರ್ಕಾರವನ್ನು ಆಗ್ರಹಿಸುತ್ತದ

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

9 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

9 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

10 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

10 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

10 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

10 hours ago