ಬಿಸಿಲಿನ ಪ್ರಖರತೆ ಹಾಗೂ ತೀವ್ರತೆಯಿಂದ ಪಾರಾಗಲು ಆರೋಗ್ಯ ಇಲಾಖೆಯಿಂದ ಸಲಹೆಗಳು
Health Department's tips to avoid the harsh and intense sun
ಕೊಪ್ಪಳ ಫೆಬ್ರವರಿ 25, (ಕರ್ನಾಟಕ ವಾರ್ತೆ): ಜಿಲ್ಲೆಯಾದ್ಯಂತ ಪ್ರಸ್ತುತ ತಿಂಗಳಿಂದ ಬಿಸಿಲಿನ ಪ್ರಖರತೆ ಮತ್ತು ತೀವ್ರತೆ ಕಂಡುಬAದ ಹಿನ್ನೆಲೆಯಲ್ಲಿ ಸಾರ್ವಜನಿಕರು, ಗರ್ಭಿಣಿಯರು, ಬಾಣಂತಿಯರು, ಮಕ್ಕಳು ಹಾಗೂ ವಯೋವೃದ್ದರು ಆರೋಗ್ಯದ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಲಿಂಗರಾಜು ಟಿ. ಇವರು ಸಲಹೆಗಳನ್ನು ನೀಡಿದ್ದಾರೆ.
ಬೇಸಿಗೆ ಸಮಯದಲ್ಲಿ ಹೆಚ್ಚು ನೀರನ್ನು ಕುಡಿಯಬೇಕು. ಮಜ್ಜಿಗೆ/ಎಳನೀರು, ಹಣ್ಣಿನ ರಸವನ್ನು ಹೆಚ್ಚಾಗಿ ಸೇವಿಸಬೇಕು. ನೀರಿನ ಅಂಶ ಹೆಚ್ಚಾಗಿರುವ ತರಕಾರಿಗಳು, ಹಣ್ಣುಗಳನ್ನು ಸೇವಿಸುವುದು ಉತ್ತಮ. ಸಡಿಲವಾದ ತೆಳು ಬಣ್ಣದ ಹತ್ತಿಯ ಬಟ್ಟೆಯನ್ನು ಧರಿಸಬೇಕು ಹಾಗೂ ಗಾಳಿಯಾಡುವ ಪಾದರಕ್ಷೆ ಧರಿಸಬೇಕು. ಹೊರಗಡೆ ತೆರಳುವ ವೇಳೆ ತಂಪು ಕನ್ನಡಕ, ಛತ್ರಿ, ಟವೆಲ್ ಅಥವಾ ಬಿಸಿಲಿನಿಂದ ಕಾಪಾಡಿಕೊಳ್ಳುವ ಸಾಮಾನ್ಯ ಕ್ರಮಗಳನ್ನು ಪಾಲಿಸಬೇಕು. ರೇಡಿಯೊ, ದೂರದರ್ಶನ ಹಾಗೂ ದಿನಪತ್ರಿಕೆಗಳಲ್ಲಿ ಬಿಸಿಯಾದ ಗಾಳಿ/ಶಾಖ ತರಂಗ(ಹೀಟ್ ವೇವ್)ದ ಬಗ್ಗೆ ನೀಡುವ ಮಾಹಿತಿ ಅನುಸಾರ ದೈನಂದಿನ ಚಟುವಟಿಕೆಗಳನ್ನು ಯೋಜಿಸಿಕೊಳ್ಳಬೇಕು.
ಬಿಸಿಲಿನಲ್ಲಿ ಹೊರಗಡೆ ಕಾರ್ಯನಿರ್ವಹಿಸುವವರು (ಜಮೀನು ಕೆಲಸ, ರಸ್ತೆ ಕಾಮಗಾರಿ ಮುಂತಾದವು) ಆದಷ್ಟು ಬೆಳಗ್ಗೆ 11 ಗಂಟೆಯ ಒಳಗೆ ಮತ್ತು ಸಂಜೆ 4 ಗಂಟೆ ನಂತರ ಕೈಗೊಳ್ಳುವುದು ಉತ್ತಮ. ಈ ಅವಧಿಯಲ್ಲಿ ಶ್ರಮದಾಯಕ ಕೆಲಸಗಳಿಂದ ವಿಶ್ರಾಂತಿ ಪಡೆಯಬೇಕು. ಬಿಸಿಲಿನಲ್ಲಿ ನಡೆಯುವಾಗ ಕಡ್ಡಾಯವಾಗಿ ಚಪ್ಪಲಿ ಧರಿಸಿ. ಟೀ/ಕಾಫಿ, ಹೆಚ್ಚು ಸಕ್ಕರೆ ಅಂಶವನ್ನು ಹೊಂದಿರುವ ಕಾರ್ಬೋನೇಟೆಡ್ ಪಾನೀಯ ಹಾಗೂ ಮದ್ಯಪಾನದಿಂದ ದೂರವಿರಿ. ವ್ಯಕ್ತಿ ತೊದಲು ಮಾತು ಅಥವಾ ಅರ್ಥ ರಹಿತವಾಗಿ ಬಡಬಡಿಸಿದಲ್ಲಿ ಕೂಡಲೇ ನೆರಳಿನ ಪ್ರದೇಶಕ್ಕೆ ಸ್ಥಳಾಂತರಿಸಿ. ಕೆಳಗೆ ಮಲಗಿಸಿ ಕಾಲುಗಳನ್ನು ಮೇಲಕ್ಕೆ ಎತ್ತಿ ವಿಶ್ರಾಂತಿ ಪಡೆಯಿರಿ. ಬಿಸಿಗಾಳಿ ಮತ್ತು ಅತಿಯಾದ ತಾಪಮಾನದಿಂದ ಆರೋಗ್ಯ ಸಮಸ್ಯೆಗಳು ಉಂಟಾದಲ್ಲಿ ಸಮೀಪದ ಆರೋಗ್ಯ ಕೇಂದ್ರವನ್ನು ಸಂಪರ್ಕಿಸಿ ಅಥವಾ 108/102 ಕ್ಕೆ ಕರೆ ಮಾಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…