ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

Influential people planning to encroach on government cattle ranch - villagers oppose
 

ಕೊಪ್ಪಳ: ಜಿಲ್ಲೆಯ ಬೇವಿನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಹಪುರ ಗ್ರಾಮದ ಸವುಳು ಹಳ್ಳದ ಕೆರೆ ಮತ್ತು ಗೋಮಾಳ ಪ್ರದೇಶವನ್ನು ಪ್ರಭಾವಿಗಳು ಅತಿಕ್ರಮಣ ಮಾಡುವ ಹುನ್ನಾರ ನಡೆಸಿದ್ದು, ಜಿಲ್ಲಾಧಿಕಾರಿಗಳು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಶತಮಾನಗಳಿಂದಲೂ ಶಹಪುರ ಗ್ರಾಮದ ಉತ್ತರ-ಈಶಾನ್ಯ ದಿಕ್ಕಿನಲ್ಲಿರುವ ಸವುಳು ಹಳ್ಳದ ಕೆರೆ ಮತ್ತು ಸರ್ಕಾರಿ ಗೋಮಾಳ ಈ ಗ್ರಾಮದ ದನ, ಕುರಿ, ಆಡು, ಎತ್ತು, ಎಮ್ಮೆಗಳಿಗೆ ಆಸರೆಯಾಗಿದೆ. ದನ ಮತ್ತು ಕುರಿಗಾಹಿಗಳು ಕೆರೆಯ ದಡದಲ್ಲಿನ ಗೋಮಾಳದಲ್ಲಿ ಶತಮಾನಗಳಿಂದಲೂ ಬೀಡು ಬಿಟ್ಟಿದ್ದಾರೆ. ಗ್ರಾಮಕ್ಕೆ ಇದೊಂದೇ ಜಲಮೂಲ ಮತ್ತು ಆಸರೆ ಆಗಿರುವುದರಿಂದ ಅನೇಕ ಕುಟುಂಬಗಳು ಇದನ್ನೇ ಆಶ್ರಯಿಸಿವೆ. ಕೋಳಿ ಫಾರಂ ಉದ್ಯಮ ನಡೆಸುವ ಶ್ರೀಧರ್ ಎನ್ನುವ ಪ್ರಭಾವಿ ವ್ಯಕ್ತಿ ಸವುಳು ಹಳ್ಳದ ಕೆರೆ ಪಕ್ಕದಲ್ಲಿ ಅನ್ಯರ ಜಮೀನು ಖರೀದಿಸಿದ್ದಾರೆ. ಇದರ ನೆಪದಲ್ಲಿಯೇ ಸವುಳು ಹಳ್ಳದ ಕೆರೆಯ ವ್ಯಾಪ್ತಿಯ ಸುಮಾರು ೪೦ ಎಕರೆ ಜಮೀನನನ್ನು ಅತಿಕ್ರಮಣ ಮಾಡುವ ಹುನ್ನಾರ ನಡೆಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಈ ಹಿಂದಿನ ಜಿಲ್ಲಾಧಿಕಾರಿಗಳಾಗಿದ್ದ ತುಳಸಿ ಮದ್ದಿನೇನಿ ಅವರ ಅವಧಿಯಲ್ಲಿ ಅತಿಕ್ರಮಣ ಮಾಡಲು ಮುಂದಾಗಿದ್ದ ಶ್ರೀಧರ್ ವಿರುದ್ಧ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದರು. ಈ ಕುರಿತು ಅಂದಿನ ಜಿಲ್ಲಾಧಿಕಾರಿಗಳಿಗೂ ದೂರು ನೀಡಿದ್ದರು. ಅಂದಿನಿAದ ಗಾಯಬ್ ಆಗಿದ್ದ ಶ್ರೀಧರ್ ಎನ್ನುವ ವ್ಯಕ್ತಿ ಇದೀಗ ತಮ್ಮ ಹಿಂಬಾಲಕರನ್ನು ಮುಂದೆ ಬಿಟ್ಟು ಮತ್ತೆ ಸರ್ಕಾರಿ ಗೋಮಾಳ ಅತಿಕ್ರಮಣ ಮಾಡುವ ಹುನ್ನಾರ ನಡೆಸಿದ್ದಾರೆ. ಕುರಿ ಮತ್ತು ದನಗಾಹಿಗಳು ಮೇಯಿಸಲು ಅಡವಿಗೆ ತೆರಳುವ ಸಂದರ್ಭದಲ್ಲಿ ಹೊಂಚು ಹಾಕಿ ಗೋಮಾಳ ಅತಿಕ್ರಮಣ ಮಾಡಲು ಮುಂದಾಗಿದ್ದಾರೆ. ವಿಷಯ ಗೊತ್ತಾದ ಕೂಡಲೇ `ಸವುಳು ಹಳ್ಳದ ಕೆರೆ ಅಭಿವೃದ್ಧಿ’ ಸಮಿತಿಯ ಪದಾಧಿಕಾರಿಗಳು ಮುನಿರಾಬಾದ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ತೆರಳಿ ಟ್ರಾಕ್ಟರ್ ನಿಂದ ಅತಿಕ್ರಮಣ ಮಾಡಿ, ಗೋಮಾಳ ಜಾಗೆಯಲ್ಲಿ ಮಣ್ಣು ಸಮ ಮಾಡುವ ಕೆಲಸಕ್ಕೆ ಬ್ರೇಕ್ ಹಾಕಿದ್ದಾರೆ. ಮುನಿರಾಬಾದ್ ಪೊಲೀಸ್ ಠಾಣೆಯ ಪಿಎಸ್‌ಐ ಮತ್ತು ಸಿಬ್ಬಂದಿಯವರು ಆಗಮಿಸಿ ತೆರವುಗೊಳಿಸಿದ್ದಾರೆ.

ಈ ಭಾಗದಲ್ಲಿ ಪ್ರಭಾವಿಗಳ ಮತ್ತು ಉದ್ಯಮಿಗಳಿಂದ ಗೋಮಾಳ ಮತ್ತು ಕೆರೆ ಅತಿಕ್ರಮಣ ಮಾಡುವ ಹುನ್ನಾರ ನಡೆಯುತ್ತಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಕೆರೆ ಮತ್ತತು ಸುತ್ತಲಿನ ರೈತರ ಜಮೀನುಗಳನ್ನು ಅತಿಕ್ರಮಣ ಮಾಡುವ ದಂಧೆ ನಡೆಯುತ್ತಿದೆ. ಇದಕ್ಕೆ ಕಂದಾಯ ಅಧಿಕಾರಿಗಳ ಕುಮ್ಮಕ್ಕೂ ಇದೆ. ಜಿಲ್ಲಾಧಿಕಾರಿಗಳು ಇವರ ವಿರುದ್ಧ ಕಾನೂನು ಕ್ರಮ ಜರುಗಿಸಿ, ಕುರಿ ಮತ್ತು ದನಗಾಹಿಗಳಿಗೆ ನೆರವಾಗಬೇಕು. ಸರ್ಕಾರಿ ಸ್ವಾಮ್ಯದ ಸವುಳು ಹಳ್ಳದ ಕೆರೆ ಮತ್ತು ಗೋಮಾಳ ಜಾಗೆಯನ್ನು ಯಥಾವತ್ತಾಗಿ ಕಾಪಾಡಬೇಕೆಂದು `ಸವುಳು ಹಳ್ಳದ ಕೆರೆ ಅಭಿವೃದ್ಧಿ ಸಮಿತಿ’ ಯ ಅಧ್ಯಕ್ಷರಾದ ಮಂಜುನಾಥ ರಾಟಿ, ಉಪಾಧ್ಯಕ್ಷರಾದ ಸುರೇಶ್ ಪಾಟೀಲ್, ಕಾರ್ಯದರ್ಶಿ ಅಮರೇಶ ಕಟ್ಟಿಮನಿ, ಸದಸ್ಯರಾದ ವೀರಣ್ಣ ಕೋಮಲಾಪುರ, ಗ್ರಾಮದ ಧುರೀಣರಾದ ಮಲ್ಲಿಕಾರ್ಜುನ ಕುರಿ, ನಿಂಗಜ್ಜ ಚೌಧರಿ ಮತ್ತಿತರರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Mallikarjun

Share
Published by
Mallikarjun

Recent Posts

ಗಂಗಾವತಿ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಶ್ರೀಯೋಗಿ ನಾರಾಯಣ ಯತೀಂದ್ರರ 300ನೇ ಜಯಂತಿ ಆಚರಣೆ

ಗಂಗಾವತಿ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಶ್ರೀಯೋಗಿ ನಾರಾಯಣ ಯತೀಂದ್ರರ 300ನೇ ಜಯಂತಿ ಆಚರಣೆ 300th birth anniversary of…

2 hours ago

ಸಾವಿರಾರು ಸಂಖ್ಯೆಯ ರೋಡ ಹಂಪ್ಸಗಳ ತೆರುವುಗೊಳಿಸುವ ನಿಟ್ಟಿನ್ನಲ್ಲಿ ಮುಖ್ಯಮಂತ್ರಿ ಪತ್ರ.

ಸಾವಿರಾರು ಸಂಖ್ಯೆಯ ರೋಡ ಹಂಪ್ಸಗಳ ತೆರುವುಗೊಳಿಸುವ ನಿಟ್ಟಿನ್ನಲ್ಲಿ ಮುಖ್ಯಮಂತ್ರಿ ಪತ್ರ. Chief Minister's letter in Nitin to clear…

16 hours ago

ಸಿಲಿಂಡರ್ ವಿತರಣೆ ವಿತರಣೆ ಮಾಡುವ ಹುಡಗನ ಸಂಪಾದನೆ

ಸಿಲಿಂಡರ್ ವಿತರಣೆ ವಿತರಣೆ ಮಾಡುವ ಹುಡಗನ ಸಂಪಾದನೆ Earnings of a boy who distributes cylinders (ಸಾಂದರ್ಭಿಕ ಗೂಗಲ್…

16 hours ago