ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್

It is our duty to save the environment: Revathi Kamath

ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್

ಜಾಹೀರಾತು
  • “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ
  • ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

ಬೆಂಗಳೂರು ಮಾರ್ಚ್ 08: “ಮುಂದಿನ ತಲೆಮಾರಿಗೆ ಪರಿಸರ ಉಳಿಸುವ ಮೂಲಕ ಜವಾಬ್ದಾರಿ ನಮ್ಮ ಮೇಲಿದೆ ಎಂಬುದನ್ನು ಅರಿತುಕೊಳ್ಳಬೇಕು” ಎಂದು ಪರಿಸರವಾದಿ ರೇವತಿ ಕಾಮತ್ ಹೇಳಿದರು.

ಕನಕಪುರ ರಸ್ತೆಯಲ್ಲಿರುವ “ಧೀ DHEE” ಆಸ್ಪತ್ರೆಯು ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಧೀ ಶಕ್ತಿ ಉದ್ಘಾಟಿಸಿ ಮಾತನಾಡಿದ ಅವರು, “ಜನರು ತಮ್ಮ ಅಭಿವೃದ್ಧಿ ಬಗ್ಗೆ ನೋಡುತ್ತಿದ್ದಾರೆಯೇ ಹೊರತು, ಪರಿಸರ ಅಭಿವೃದ್ಧಿ ಬಗ್ಗೆ ಕಾಳಜಿ ಇಲ್ಲದೇ ಇರುವುದು ಬೇಸರದ ಸಂಗತಿ. ಅಭಿವೃದ್ಧಿ ಹೆಸರಿನಲ್ಲಿ ಪರಿಸರ ಮಾಲಿನ್ಯ ಮಾಡುವುದನ್ನು ತಡೆಯಬೇಕು” ಎಂದರು.
“ಬಿಲ್ಡರ್ ಗಳು ಕೇವಲ ಕಾಂಕ್ರೀಟ್ ಕಟ್ಟಡಗಳನ್ನು ನಿರ್ಮಾಣ ಮಾಡುವಲ್ಲಿ ಆಲೋಚನೆ ಮಾಡುತ್ತಿದ್ದಾರೆಯೇ ಹೊರತು ಅವರಿಗೆ ಪರಿಸರ ಕಾಳಜಿ ಇಲ್ಲ. ನಾವು ಕಾಳಜಿ ಬಗ್ಗೆ ಮಾತನಾಡುತ್ತೇವೆಯೇ ಹೊರತು ಯಾರು ಅದರ ಬಗ್ಗೆ ಆಸಕ್ತಿ ವಹಿಸುವುದಿಲ್ಲ. ಮನೆಯಲ್ಲಿ ಬೆಳೆಸುವ ಸಸಿಗಳ ಬಗ್ಗೆ ನಮಗೆ ಸ್ವಲ್ಪ ಕೂಡ ತಿಳುವಳಿಕೆ ಇರುವುದಿಲ್ಲ. ಆದರೂ, ನಾವು ನಮ್ಮದಲ್ಲದ ಗಿಡಗಳನ್ನು ಬೆಳೆಸುತ್ತೇವೆ. ರೈತರು ಕೂಡ ಅನವಶ್ಯಕವಾಗಿ ಕೀಟನಾಶಕ ಬಳಕೆ ಮಾಡುತ್ತಾರೆ. ಇದು ಪರಿಸರ ವಿನಾಶವಾಗಿದೆ. ಇದರ ಬಗ್ಗೆ ಎಚ್ಚರವಹಿಸಬೇಕು” ಎಂದರು.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅನುಪಮಾ ಹೊಸಕೆರೆ ಮಾತನಾಡಿ, ” ನಾವು ಇತಿಹಾಸ ನೋಡಿದರೆ, ಮಹಿಳೆಯರ ಶಕ್ತಿ ಬಹಳಷ್ಟಿದೆ. ನಾವು ಎದುರಾಗುವ ಸಮಸ್ಯೆಗಳನ್ನು ಆತ್ಮವಿಶ್ವಾಸದಿಂದ ಎದುರಿಸಬೇಕು. ಮಹಿಳೆಯರು ಯಾವ ಕಷ್ಟ ಬಂದರೂ ಧೃತಿಗೆಡಬಾರದು. ಮಹಿಳಾ ದಿನಾಚರಣೆ ಕೇವಲ ಆಚರಣೆಗೆ ಸೀಮಿತವಾಗಬಾರದು. ನಾವು ನಮ್ಮ ಇರುವಿಕೆಯನ್ನು ತೋರಿಸಬೇಕು” ಎಂದರು.

ಇದೇ ವೇಳೆ ನಟಿ ಗಿರಿಜಾ ಲೋಕೇಶ್, ಹೇಮಾ ಶಾನಭೋಗ್, ಪತ್ರಕರ್ತೆ ಮಿನಿ ಥಾಮಸ್ ಇತರೆ ಮಹಿಳಾ ಸಾಧಕರಿಗೆ ಅಭಿನಂದನೆ ಸಲ್ಲಿಸಲಾಯಿತು. ಡಾ. ಸುಪ್ರಜಾ ಚಂದ್ರಶೇಖರ್ ಇತರರು ಇದ್ದರು.

ಕೋಟ್…
ಮಹಿಳೆಯರಿಗೆ ಅರ್ಥಿಕ ಸ್ವಾತಂತ್ರ್ಯ ಬಹಳ ಮುಖ್ಯ. ಮಹಿಳೆಯರು ಮದುವೆ ನಂತರ ಗೃಹಿಣಿಯಾಗಿ ಉಳಿಯುವುದೇ ಹೆಚ್ಚು. ನೀವು ಈ ರೀತಿ ಆಗಬೇಡಿ. ನೀವು ಆರ್ಥಿಕವಾಗಿ ಸಬಲರಾಗಬೇಕು.
ನಿರುಪಮಾ ಶಂಕರ್, ಜಂಟಿ ವ್ಯವಸ್ಥಾಪಕ ನಿರ್ದೇಶಕಿ, ಬ್ರಿಗೇಡ್ ಗ್ರೂಪ್

ಸುರಕ್ಷತೆ ಮತ್ತು ಭದ್ರತೆ ನಾವು ಬೇರೆಯವರು ಮಾಡಿಕೊಡುವುದಿಲ್ಲ. ನಾವು ಮಾಡಿಕೊಳ್ಳುವುದಾಗಿದೆ. ಸಮಸ್ಯೆಗಳಿಗೆ ನಾವೇ ಪರಿಹಾರ ಕಂಡುಕೊಳ್ಳಬೇಕು. ಮಹಿಳೆಯರು ಆತ್ಮವಿಶ್ವಾಸ ಇಟ್ಟುಕೊಂಡು ಎಲ್ಲಾ ಕ್ಷೇತ್ರದಲ್ಲೂ ಮುನ್ನಡೆಯಬೇಕು.
ಡಾ.ವಿ. ಬಿ.ಆರತಿ, ಸಂಸ್ಥಾಪಕರು, ವಿಬು ಅಕಾಡೆಮಿ

ನಮ್ಮ ಆಸ್ಪತ್ರೆಯಲ್ಲಿ ದಾನಿಗಳಿಂದ ಸಹಾಯ ಪಡೆದು ಬಹುತೇಕ ರೋಗಿಗಳಿಗೆ ಚಿಕಿತ್ಸೆ ಕಲ್ಪಿಸಿಕೊಟ್ಟಿದ್ದೇವೆ. ಇದರಿಂದ ಬಹುತೇಕರು ಇಂದು ಕ್ರೀಡಾ ಪಟುಗಳಾಗಿ ಉಳಿದುಕೊಂಡಿದ್ದಾರೆ. ನಾವು ಗುಣಮಟ್ಟ ಚಿಕಿತ್ಸೆಯನ್ನು ನೀಡುತ್ತೇವೆ.

  • ಡಾ. ಚಂದ್ರಶೇಖರ್, ನರ ರೋಗ ತಜ್ಞ, ಧೀ ಶಕ್ತಿ ಆಸ್ಪತ್ರೆ
Mallikarjun

Share
Published by
Mallikarjun

Recent Posts

ವಾಣಿಜ್ಯ ಉದ್ದೇಶಕ್ಕೆ ಗೃಹ ಬಳಕೆ ಅನಿಲ ಬಳಸಿದರೆ ಕಾನೂನು ಕ್ರಮ

Legal action if domestic gas is used for commercial purposes ವಾಣಿಜ್ಯ ಉದ್ದೇಶಕ್ಕೆ ಗೃಹ ಬಳಕೆ ಅನಿಲ…

6 hours ago

ಪ್ಲಾಸ್ಟಿಕ್ ಮುಕ್ತ ಜೀವನಶೈಲಿ ನಮ್ಮದಾಗಲಿ: ನಾಗರಾಜ್ ಎಸ್ ಗುತ್ತೇದಾರ್

Let's have a plastic-free lifestyle: Nagaraj S. Guttedar ಪ್ಲಾಸ್ಟಿಕ್ ಮುಕ್ತ ಜೀವನಶೈಲಿ ನಮ್ಮದಾಗಲಿ: ನಾಗರಾಜ್ ಎಸ್ ಗುತ್ತೇದಾರ್…

8 hours ago

ಮಹಿಳೆಗೆ ಕಾನೂನು ಅರಿವು ಅಗತ್ಯ: ಮಹಿಳಾ ದಿನಾಚರಣೆ ನ್ಯಾಯವಾದಿ ನಂದಿನಿ ಸಲಹೆ

Women need legal knowledge: Lawyer Nandini's advice on Women's Day ಮಹಿಳೆಗೆ ಕಾನೂನು ಅರಿವು ಅಗತ್ಯ: ಮಹಿಳಾ…

8 hours ago

ಕುಡತಿನಿ ಭೂ ಸಂತ್ರಸ್ತರಿಗೆ ನ್ಯಾಯ ಕೊಡಿಸಲು ಕರ್ನಾಟಕ ಪ್ರಾಂತ ರೈತ ಸಂಘ ಒತ್ತಾಯ.

Karnataka Provincial Farmers' Association demands justice for Kudathini land victims. ಕುಡತಿನಿ ಭೂ ಸಂತ್ರಸ್ತರಿಗೆ ನ್ಯಾಯ ಕೊಡಿಸಲು…

9 hours ago