Breaking News
ಸಾಮೂಹಿಕ ಮದುವೆ ದುಂದುವೆಚ್ಚ ಆಮಬರಕ್ಕೆ ಕಡಿವಾಣ ಷಣ್ಮುಖಪ್ಪ ಸಾಹುಕಾರ್ ಕರೆ
Shanmukappa Sahukar calls Kadivana Shanmukappa Sahukar for mass marriage extravagance

ಸಾಮೂಹಿಕ ಮದುವೆ ದುಂದುವೆಚ್ಚ ಆಮಬರಕ್ಕೆ ಕಡಿವಾಣ ಷಣ್ಮುಖಪ್ಪ ಸಾಹುಕಾರ್ ಕರೆ

ಜಾಹೀರಾತು
https://youtu.be/54mDmaz0YxQ?si=IlxLl6zRdn1CsS_E
ಜಾಹೀರಾತು


ಕಾರಟಗಿ,ಮಾ9: ಸಾಮೂಹಿಕ ವಿವಾಹಗಳು ಬಡವರ ಮದುವೆಗಳು ಅಲ್ಲ, ಭಾಗ್ಯವಂತರ ಮದುವೆಗಳು. ಇಂತಹ ವಿವಾಹ ಕಾರ್ಯಕ್ರಮಗಳು ಸಮಾಜಮುಖಿ ಕಾರ್ಯಗಳಾಗಿದ್ದು ದುಂದುವೆಚ್ಚ, ಆಡಂಬರಕ್ಕೆ ಕಡಿವಾಣ ಹಾಕಲು ಸಾಧ್ಯ ಸಾಮೂಹಿಕ ವಿವಾಹಗಳಿಂದ ಆರ್ಥಿಕ ಹೊರೆ ತಗ್ಗುವ ಜತೆಗೆ ಪ್ರಗತಿಗೆ ಪೂರಕವಾಗುತ್ತದೆ ಎಂದು ಗ್ರಾಮದ ಹಿರಿಯ ಮುಖಂಡರಾದ ಷಣ್ಮುಖಪ್ಪ ಸಾಹುಕಾರ್ ಹೇಳಿದರು.

ತಾಲೂಕಿನ ಸಿಂಗನಾಳ ಶ್ರೀ ಶರಣಬಸವೇಶ್ವರ ಜಾತ್ರಾ ಮಹೋತ್ಸವ ಕಳಸಾರೋಹಣ ಹಾಗೂ ಮಹಾರಥೋತ್ಸವ ಮತ್ತು ಶ್ರೀ ಶರಣಬಸವೇಶ್ವರ ಪುರಾಣ ಮಹೋತ್ಸವದ ಅಂಗವಾಗಿ ಜರುಗಿದ ಸಾಮೂಹಿಕ ವಿವಾಹಗಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸಾಮೂಹಿಕ ವಿವಾಹ ಬಡವರ ಮದುವೆ ಎಂದು ಭಾವಿಸುವುದು ತಪ್ಪು. ಸಹಸ್ರಾರು ಭಕ್ತರ, ಮಠಾಧೀಶರ ಆಶೀರ್ವಾದದೊಂದಿಗೆ ಬಂಧನಕ್ಕೊಳಗಾಗುವ ಭಾಗ್ಯ ಜೀವನದ ಸಾರ್ಥಕತೆಯ ಕ್ಷಣವಾಗಿದೆ ಎಂದು ಹೇಳಿದರು.

ಸಾಮೂಹಿಕ ವಿವಾಹ ನೆಮ್ಮದಿ ಜೀವನಕ್ಕೆ ನಾಂದಿ ಹಾಡುತ್ತವೆ. ವಧು–ವರರು ದಾಂಪತ್ಯ ಜೀವನವನ್ನು ಮಾದರಿಯಾಗಿ ನಡೆಸುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಇಂದು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಮದುವೆ ಕಬ್ಬಿಣದ ಕಡಲೆ ಇದ್ದಂತೆ. ಉಳ್ಳವರು ಸಾಮೂಹಿಕ ವಿವಾಹದಂತಹ ಸತ್ಕಾರ್ಯಕ್ಕೆ ಮುಂದಾಗಿ ಬಡವ-ಶ್ರೀಮಂತ, ಮೇಲು-ಕೀಳೇನ್ನದೆ ಒಂದೇ ಎನ್ನುವ ಭಾವನೆಯೊಂದಿಗೆ ನಡೆಸುವ ಎಲ್ಲ ಸತ್ಕಾರ್ಯ ಮಾಡಬೇಕು ಸಾಮಾಜಿಕ ಕಳಕಳಿಯೊಂದಿಗೆ ನಡೆಸುವ ಸಾಮೂಹಿಕ ವಿವಾಹ ಮಹೋತ್ಸವ ನಿಜಕ್ಕೂ ಶ್ಲಾಘನೀಯ ಎಂದು ಹೇಳಿದರು ಒಟ್ಟು ಐದು ನೂತನ ಜೋಡಿಗಳು ನವಜೀವನಕ್ಕೆ ಕಾಲಿಟ್ಟರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರಾದ ವೀರಭದ್ರಗೌಡ್ರು,ಕನಕ ರೆಡ್ಡಿ, ತಿಮ್ಮಣ್ಣ,ಶರಣಬಸವ,ಮಲ್ಲಿಕಾರ್ಜುನ, ಮಹೇಶ ಸಿಂಗನಾಳ,ಉಮೇಶ ಸಿಂಗನಾಳ, ಸೇರಿದಂತೆ ಇತರರು ಇದ್ದರು

Leave a Reply

Your email address will not be published. Required fields are marked *