ಮಾನ್ಯ ಜಿಲ್ಲಾ ಸತ್ರ ನ್ಯಾಯಾಧೀಶರಾದ ಸದಾನಂದ ನಾಯ್ಕ್‌ ಹಾಗೂ ವಿವಿಧ ಗಣ್ಯರುಲಯನ್ಸ್‌ ಕಣ್ಣಿನ ಆಸ್ಪತ್ರೆಗೆ ಭೇಟಿ.

H.Mallikarjun
H.Mallikarjun - Kalyanasiri
1 Min Read
ಜಾಹೀರಾತು
Honorable District Sessions Judge Sadananda Naik and various dignitaries visited Lions Eye Hospital.

ಮಾನ್ಯ ಜಿಲ್ಲಾ ಸತ್ರ ನ್ಯಾಯಾಧೀಶರಾದ ಸದಾನಂದ ನಾಯ್ಕ್‌ ಹಾಗೂ ವಿವಿಧ ಗಣ್ಯರು
ಲಯನ್ಸ್‌ ಕಣ್ಣಿನ ಆಸ್ಪತ್ರೆಗೆ ಭೇಟಿ.

ಜಾಹೀರಾತು

ಗಂಗಾವತಿ: ಇತ್ತೀಚೆಗೆ ಗಂಗಾವತಿ ನಗರದ ಕಂಪ್ಲಿ ರಸ್ತೆಯಲ್ಲಿ ಉದ್ಘಾಟನೆಗೊಂಡ ಲಯನ್ಸ್‌ ಕಣ್ಣಿನ ಆಸ್ಪತ್ರೆಗೆ ಮಾನ್ಯ ಜಿಲ್ಲಾ ಸತ್ರ ನ್ಯಾಯಾಧೀಶರಾದ ಶ್ರೀ ಸದಾನಂದ ನಾಯ್ಕ್‌̧ ಪ್ರಧಾನ ಸಿವಿಲ್‌ ನ್ಯಾಯಾಧೀಶರಾದ ನಾಗೇಶ ಪಾಟೀಲ್‌, ಖ್ಯಾತ ಹಾಸ್ಯ ಭಾಷಣಕಾರರಾದ ಗಂಗಾವತಿ ಪ್ರಾಣೇಶ್‌ ಅವರು ಭೇಟಿ ನೀಡಿದರು.
ಈ ಲಯನ್ಸ್‌ ಕಣ್ಣಿನ ಆಸ್ಪತ್ರೆಯಲ್ಲಿ ಬಡರೋಗಿಗಳಿಗೆ ನಿತ್ಯ ಕಣ್ಣಿನ ತಪಾಸಣೆ, ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗಳು ನಡೆಯುತ್ತಿರುವ ಬಗ್ಗೆ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಹಿರಿಯ ವೈದ್ಯರಾದ ಡಾ|| ಜಿ. ಚಂದ್ರಪ್ಪ, ಡಾ|| ಸೋಮರಾಜು, ಲಯನ್ಸ್‌ ಕಣ್ಣಿನ ಆಸ್ಪತ್ರೆಯ ಚೇರಮನ್‌ರಾದ ಟಿ. ರಾಮಕೃಷ್ಣ, ವೈದ್ಯರಾದ ಡಾ|| ಸ್ನೇಹಲತಾ, ಲಯನ್ಸ್‌ ಕ್ಲಬ್‌ ಅಧ್ಯಕ್ಷರಾದ ಡಾ|| ಶಿವಕುಮಾರ ಮಾಲಿಪಾಟೀಲ್‌, ಕಾರ್ಯದರ್ಶಿಯಾದ ಜಂಬಣ್ಣ ಐಲಿ ಹಾಗೂ ಖಚಾಂಚಿಯಾದ ಶಿವಪ್ಪ ಗಾಳಿ ಹಾಗೂ ಇತರೆ ಸದಸ್ಯರು ಭೇಟಿ ನೀಡಿದ ಮಹನೀಯರನ್ನು ಆತ್ಮೀಯವಾಗಿ ಸನ್ಮಾನಿಸಿದರು.
ಖ್ಯಾತ ಹಾಸ್ಯಭಾಷಣಕಾರರಾದ ಗಂಗಾವತಿ ಪ್ರಾಣೇಶ್‌ ಅವರು ತಮ್ಮ ಕಣ್ಣುಗಳನ್ನು ಲಯನ್ಸ್‌ ಐ ಡೊನೇಷನ್‌ ಸೆಂಟರ್‌ಗೆ ದಾನ ಮಾಡುವುದಾಗಿ ವಾಗ್ಧಾನ ಮಾಡುವ ಮೂಲಕ ಈ ಮಹತ್ಕಾರ್ಯಕ್ಕೆ ಮುನ್ನುಡಿ ಬರೆದರು.

Total Views: 0
Share This Article