Honorable District Sessions Judge Sadananda Naik and various dignitaries visited Lions Eye Hospital.
ಮಾನ್ಯ ಜಿಲ್ಲಾ ಸತ್ರ ನ್ಯಾಯಾಧೀಶರಾದ ಸದಾನಂದ ನಾಯ್ಕ್ ಹಾಗೂ ವಿವಿಧ ಗಣ್ಯರು
ಲಯನ್ಸ್ ಕಣ್ಣಿನ ಆಸ್ಪತ್ರೆಗೆ ಭೇಟಿ.
ಗಂಗಾವತಿ: ಇತ್ತೀಚೆಗೆ ಗಂಗಾವತಿ ನಗರದ ಕಂಪ್ಲಿ ರಸ್ತೆಯಲ್ಲಿ ಉದ್ಘಾಟನೆಗೊಂಡ ಲಯನ್ಸ್ ಕಣ್ಣಿನ ಆಸ್ಪತ್ರೆಗೆ ಮಾನ್ಯ ಜಿಲ್ಲಾ ಸತ್ರ ನ್ಯಾಯಾಧೀಶರಾದ ಶ್ರೀ ಸದಾನಂದ ನಾಯ್ಕ್̧ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ನಾಗೇಶ ಪಾಟೀಲ್, ಖ್ಯಾತ ಹಾಸ್ಯ ಭಾಷಣಕಾರರಾದ ಗಂಗಾವತಿ ಪ್ರಾಣೇಶ್ ಅವರು ಭೇಟಿ ನೀಡಿದರು.
ಈ ಲಯನ್ಸ್ ಕಣ್ಣಿನ ಆಸ್ಪತ್ರೆಯಲ್ಲಿ ಬಡರೋಗಿಗಳಿಗೆ ನಿತ್ಯ ಕಣ್ಣಿನ ತಪಾಸಣೆ, ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗಳು ನಡೆಯುತ್ತಿರುವ ಬಗ್ಗೆ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಹಿರಿಯ ವೈದ್ಯರಾದ ಡಾ|| ಜಿ. ಚಂದ್ರಪ್ಪ, ಡಾ|| ಸೋಮರಾಜು, ಲಯನ್ಸ್ ಕಣ್ಣಿನ ಆಸ್ಪತ್ರೆಯ ಚೇರಮನ್ರಾದ ಟಿ. ರಾಮಕೃಷ್ಣ, ವೈದ್ಯರಾದ ಡಾ|| ಸ್ನೇಹಲತಾ, ಲಯನ್ಸ್ ಕ್ಲಬ್ ಅಧ್ಯಕ್ಷರಾದ ಡಾ|| ಶಿವಕುಮಾರ ಮಾಲಿಪಾಟೀಲ್, ಕಾರ್ಯದರ್ಶಿಯಾದ ಜಂಬಣ್ಣ ಐಲಿ ಹಾಗೂ ಖಚಾಂಚಿಯಾದ ಶಿವಪ್ಪ ಗಾಳಿ ಹಾಗೂ ಇತರೆ ಸದಸ್ಯರು ಭೇಟಿ ನೀಡಿದ ಮಹನೀಯರನ್ನು ಆತ್ಮೀಯವಾಗಿ ಸನ್ಮಾನಿಸಿದರು.
ಖ್ಯಾತ ಹಾಸ್ಯಭಾಷಣಕಾರರಾದ ಗಂಗಾವತಿ ಪ್ರಾಣೇಶ್ ಅವರು ತಮ್ಮ ಕಣ್ಣುಗಳನ್ನು ಲಯನ್ಸ್ ಐ ಡೊನೇಷನ್ ಸೆಂಟರ್ಗೆ ದಾನ ಮಾಡುವುದಾಗಿ ವಾಗ್ಧಾನ ಮಾಡುವ ಮೂಲಕ ಈ ಮಹತ್ಕಾರ್ಯಕ್ಕೆ ಮುನ್ನುಡಿ ಬರೆದರು.
Legal action if domestic gas is used for commercial purposes ವಾಣಿಜ್ಯ ಉದ್ದೇಶಕ್ಕೆ ಗೃಹ ಬಳಕೆ ಅನಿಲ…
Municipal Council budget pre-meeting on March 16thPublic invited to participate by civic commissioner ಮಾ.16ರಂದು ನಗರಸಭೆ…
Let's have a plastic-free lifestyle: Nagaraj S. Guttedar ಪ್ಲಾಸ್ಟಿಕ್ ಮುಕ್ತ ಜೀವನಶೈಲಿ ನಮ್ಮದಾಗಲಿ: ನಾಗರಾಜ್ ಎಸ್ ಗುತ್ತೇದಾರ್…
Women need legal knowledge: Lawyer Nandini's advice on Women's Day ಮಹಿಳೆಗೆ ಕಾನೂನು ಅರಿವು ಅಗತ್ಯ: ಮಹಿಳಾ…
Government warns Samar International Islamic School for starting school enrollment in violation of court order…
Karnataka Provincial Farmers' Association demands justice for Kudathini land victims. ಕುಡತಿನಿ ಭೂ ಸಂತ್ರಸ್ತರಿಗೆ ನ್ಯಾಯ ಕೊಡಿಸಲು…