The grand Bettalli Marammana Jatra cold drinks and chariot festival.
ಅದ್ದೂರಿಯಾಗಿ ಜರುಗಿದ ಬೆಟ್ಟಳ್ಳಿ ಮಾರಮ್ಮನ ಜಾತ್ರೆಯ ತಂಪು ಸೇವೆ ಹಾಗೂ ರಥೋತ್ಸವ.
ವರದಿ: ಬಂಗಾರಪ್ಪ .ಸಿ .
ಹನೂರು:ಭಕ್ತರ ಆರಾಧ್ಯದೇವತೆ ಹನೂರು ಪಟ್ಟಣದ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಎರಡನೇ ದಿನ ಮಂಗಳವಾರ ತಂಪು ಜ್ಯೋತಿ ಮಾಡುವ ಮೂಲಕ ದೇವಿಯ ರಥೋತ್ಸವಕ್ಕೆ ಗರುಡ ಪಕ್ಷಿಯು ಪ್ರದಕ್ಷಿಣೆ ಹಾಕುವ ಮೂಲಕ ಭಕ್ತಾದಿಗಳಿಗೆ ಆರ್ಶಿವಾದಿಸಿ ದೇವಿಯ ಜಾತ್ರೆಯು ಅದ್ದೂರಿಯಾಗಿ ನೆರವೇರಿತು.
ಹನೂರು ಪಟ್ಟಣದ
ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಕಳೆದ ಮೂರು ವರ್ಷಗಳ ಹಿಂದೆ ತೇರು ನಿರ್ಮಾಣ ಮಾಡಿ ರಥೋತ್ಸವಕ್ಕೆ ಚಾಲನೆ ನೀಡಲಾಗಿತ್ತು
ನಂತರ ಅದು ಯಶಸ್ವಿಯಾಗಿ ನಡೆದುಕೊಂಡು ಬಂದಿರುವ ತೇರು ವಿಶೇಷ ರೀತಿಯಲ್ಲಿ ನಿರ್ಮಿಸಲಾಗಿದೆ,ಇದರ ವಿನ್ಯಾಶವು ನಾಲ್ಕು ಚಕ್ರಗಳುಳ್ಳ, ತಳಭಾಗದಲ್ಲಿ ಕುದುರೆ, ಸಿಂಹ ಲಾಂಛನ ಸೇರಿ ಎಂಟು ಅಷ್ಟ ಕಂಬಗಳುಳ್ಳ 14.5 ಅಡಿಯ ಶ್ರೀ ಬೆಟ್ಟಳ್ಳಿ ಮಾರಮ್ಮನ ಪುಷ್ಪಕ ರಥವು ನೋಡುಗರ ಕಣ್ಣನ ಸೆಳೆಯಿತು.
ರಥೋತ್ಸವದ ತೇರಿಗೆ ವಿವಿಧ ಬಗೆಯ ಫಲ ಪುಷ್ಪಗಳಿಂದ ಅಲಂಕಾರ ಮಾಡಲಾಗಿತ್ತು. ದೇವಸ್ಥಾನದ ಪ್ರಧಾನ ಅರ್ಚಕರಾದ ರಾಜುರಾವ್ ವಿಶೇಷ ಪೂಜೆ ಸಲ್ಲಿಸಿದ ನಂತರ ಆಕಾಶದಲ್ಲಿ ಗರುಡ ತೇರಿನ ಸುತ್ತ ಪ್ರದಕ್ಷಿಣೆ ಹಾಕಿದ ನಂತರ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ರಥೋತ್ಸವದ ಸಂದರ್ಭದಲ್ಲಿ ಭಕ್ತಾದಿಗಳು ತಮ್ಮ ಜಮೀನುಗಳಲ್ಲಿ ಬೆಳೆದಿದ್ದ ದವಸ ಧಾನ್ಯ,ನಾಣ್ಯಗಳನ್ನು ಎಸೆದು ಹರಕೆ ಸಲ್ಲಿಸಿದರು. ರಥೋತ್ಸವದ ವೇಳೆ ಭಕ್ತಾದಿಗಳು ಜೈ ಬೆಟ್ಟಳ್ಳಿ ಮಾರಮ್ಮನಿಗೆ, ಬೆಟ್ಟಳ್ಳಿ ತಾಯಿಗೆ ಎಂದು ಘೋಷಣೆ ಕೂಗಿದರು
ಪ್ರತಿ ಮಂಗಳವಾರ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯುತ್ತಿದ್ದು ಪ್ರತಿವಾರವೂ ಬರುವಂತಹ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಮಾರಮ್ಮ ಜಾತ್ರಾ ಮಹೋತ್ಸವಕ್ಕೆ ತಮಿಳುನಾಡು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತಮ್ಮ ಇಷ್ಟಾರ್ಥ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಹರಕೆ ಕಾಣಿಕೆಗಳನ್ನು ಸಲ್ಲಿಸಿದರು.
ವಿವಿಧ ಬಗೆಯ ಫಲಪುಷ್ಪಗಳಿಂದ ಅಲಂಕಾರ: ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ ಪ್ರಯುಕ್ತ ಹನೂರು ಪಟ್ಟಣದ ಬೆನಕ ಡೆಕೋರೇಷನ್ ತಂಡದ ವತಿಯಿಂದ ಮೋಸಂಬಿ ಮುಸುಕಿನ ಜೋಳ ವಿವಿಧ ಬಗೆಯ ಫಲ ಪುಷ್ಪಗಳಿಂದ ದೇವಸ್ಥಾನದ ಒಳ ಆವರಣ ಹೊರ ಆವರಣದಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು. ದೇವಸ್ಥಾನದ ಮುಂಭಾಗದ ಗಣಪತಿ ದೇವರ ತಳ ಭಾಗದಲ್ಲಿ ದೇವಿಯ ಕಣ್ಣುಗಳ ಮಾದರಿಯಲ್ಲಿ ಮಾಡಲಾಗಿದ್ದ ಹೂವಿನ ಅಲಂಕಾರ ನೋಡುಗರ ಕಣ್ಮನ ಸೆಳೆಯುತ್ತಿತ್ತು.
ವಿಶೇಷ ವಿದ್ಯುತ್ ದೀಪಾಲಂಕಾರ : ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ ಪ್ರಯುಕ್ತ ದೇವಸ್ಥಾನದ ಹೊರ ಆವರಣ, ಮುಖ್ಯ ರಸ್ತೆ ಮೈಸೂರು ಮಾರಮ್ಮ ದೇವಸ್ಥಾನದ ರಸ್ತೆ, ಮಲೆ ಮಹದೇಶ್ವರ ಬೆಟ್ಟದ ರಸ್ತೆ ಬಂಡಳ್ಳಿ ರಸ್ತೆ ಸೇರಿದಂತೆ ಮಾಡಲಾಗಿದೆ.
ಸೋಮವಾರ ತಡರಾತ್ರಿ ನೆರವೇರಿದ ಜಾಗರ ಸಮರ್ಪಣೆ : ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಮೊದಲ ದಿನವಾದ ಸೋಮವಾರ ತಡರಾತ್ರಿ ಜಾಗರ ಸಮರ್ಪಣೆ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರಿತು . ಈ ಜಾಗರ ಸಮರ್ಪಣೆಗೆ ಜನರು ಒಂದು ವಾರದ ಮುಂಚೆ ಅವರೆ, ಜೋಳ ಸೇರಿದಂತೆ ಇನ್ನಿತರ ದವಸ ಧಾನ್ಯಗಳನ್ನು ಮೊಳಕೆ ಬರಿಸಿ ಪ್ರತಿನಿತ್ಯ ನೀರುಣಿಸಿ ಪೂಜೆ ಸಲ್ಲಿಸುವುದರ ಮೂಲಕ ಬೆಳೆಸಿದ ಧಾನ್ಯಗಳ ಪೈರುಗಳನ್ನು (ಜಾಗರ) ದೇವಾಲಯಕ್ಕೆ ಸಮರ್ಪಿಸುತ್ತಾರೆ. ಜಾಗರ ವನ್ನು ಮಕ್ಕಳು, ಮಹಿಳೆಯರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯಲ್ಲಿ ಕೊಂಡೊಯ್ದು ವಿಶೇಷ ಪೂಜೆ ಸಲ್ಲಿಸಿದ ನಂತರ ದೇವಸ್ಥಾನಕ್ಕೆ ಸಮರ್ಪಿಸಲಾಯಿತು
ಈ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದ ಎರಡು ದಿನಗಳ ನಂತರ ಪ್ರತಿನಿತ್ಯ ದೇವಸ್ಥಾನದ ಆವರಣದಲ್ಲಿ ಮಾರಿಕುಣಿತ ಕುಣಿಯುವುದು ವಾಡಿಕೆ. ಈ ಬಾರಿಯ ಜಾತ್ರಾ ಮಹೋತ್ಸವದಲ್ಲಿ ಪಟ್ಟಣದ ವಿವಿಧ ಸಮುದಾಯದ ಮಹಿಳೆಯರು , ಮಕ್ಕಳು ಪುರುಷರು ಸೇರಿದಂತೆ ಒಟ್ಟಾಗಿ ಕುಣಿಯುವುದರ ಮೂಲಕ ಸಂಭ್ರಮಿಸಿದರು.
ಬಿಗಿ ಪೊಲೀಸ್ ಬಂದೋಬಸ್ತ್: ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುವ ನಿರೀಕ್ಷೆ ಇರುವುದರಿಂದ ಇನ್ಸ್ಪೆಕ್ಟರ್ ಆನಂದಮೂರ್ತಿ ನೇತೃತ್ವದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
Legal action if domestic gas is used for commercial purposes ವಾಣಿಜ್ಯ ಉದ್ದೇಶಕ್ಕೆ ಗೃಹ ಬಳಕೆ ಅನಿಲ…
Municipal Council budget pre-meeting on March 16thPublic invited to participate by civic commissioner ಮಾ.16ರಂದು ನಗರಸಭೆ…
Let's have a plastic-free lifestyle: Nagaraj S. Guttedar ಪ್ಲಾಸ್ಟಿಕ್ ಮುಕ್ತ ಜೀವನಶೈಲಿ ನಮ್ಮದಾಗಲಿ: ನಾಗರಾಜ್ ಎಸ್ ಗುತ್ತೇದಾರ್…
Women need legal knowledge: Lawyer Nandini's advice on Women's Day ಮಹಿಳೆಗೆ ಕಾನೂನು ಅರಿವು ಅಗತ್ಯ: ಮಹಿಳಾ…
Government warns Samar International Islamic School for starting school enrollment in violation of court order…
Karnataka Provincial Farmers' Association demands justice for Kudathini land victims. ಕುಡತಿನಿ ಭೂ ಸಂತ್ರಸ್ತರಿಗೆ ನ್ಯಾಯ ಕೊಡಿಸಲು…