Birthday with beautiful and orphaned children at Veereshwara Punyashram.
ವೀರೇಶ್ವರ ಪುನ್ಯಾಶ್ರಮದಲ್ಲಿ ಅಂದ ಹಾಗೂ ಅನಾಥ ಮಕ್ಕಳೊಂದಿಗೆ ಹುಟ್ಟುಹಬ್ಬ.
ಗಂಗಾವತಿ: ನಗರದ ಹಿರೇಜಂತಲ್ಲಿನ ಸಂಗೀತ ಕಲಾವಿದೆ ಹಾಗೂ ಬೆಂಗಳೂರಿನ ಸ್ವರ ಸಂಗೀತ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷ ಸುನಿತಾ ತಮ್ಮ ಹುಟ್ಟು ಹಬ್ಬವನ್ನು ಗದಗಿನ ಶ್ರೀ ವೀರೇಶ್ವರ ಪುಣ್ಯಾಶ್ರಮ ಅಂದ ಅನಾಥ ಮಕ್ಕಳೊಂದಿಗೆ ಮಂಗಳವಾರದಂದು ಆಚರಿಸಿಕೊಂಡರು. ಇದಕ್ಕೂ ಪೂರ್ವದಲ್ಲಿ ಶ್ರೀ ಹಾನಗಲ್ಲ ಕುಮಾರಸ್ವಾಮಿ ಮಹಾಸ್ವಾಮಿಗಳು ಪಂಡಿತ್ ಪಂಚಾಕ್ಷರಿ ಮಹಾಸ್ವಾಮಿಗಳು ಹಾಗೂ ಡಾಕ್ಟರ್ ಪುಟ್ಟರಾಜ ಕವಿ ಗವಾಯಿಗಳವರ ಕರ್ತೋ ಗದ್ದುಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಪ್ರಸ್ತುತ ಪೀಠಾಧಿಕಾರಿಗಳಾದ ಪರಮಪೂಜ್ಯ ಶ್ರೀ ಕಲ್ಲಯ್ಯ ಅಜ್ಜ ಅವರ ಆಶೀರ್ವಾದವನ್ನು ಪಡೆದುಕೊಂಡು ಮಕ್ಕಳಿಗೆ ದಾಸೋಹ ವ್ಯವಸ್ಥೆಯನ್ನು ಕಲ್ಪಿಸಿದರು. ಈ ಸಂದರ್ಭದಲ್ಲಿ ಪೀಠಾಧಿಕಾರಿಗಳಾದ ಪರಮಪೂಜ್ಯ ಶ್ರೀ ಕಲ್ಲಯ್ಯ ಅಜ್ಜ ಆಶೀರ್ವಚನ ನೀಡಿ ಕಳೆದ ಹಲವು ವರ್ಷಗಳಿಂದ ಸಂಗೀತ ಕಲಾವಿದೆ ಸುನಿತಾ ಅವರು ಆಶ್ರಮಕ್ಕೆ ಆಗಮಿಸಿ ,
ಗುರುಗಳಿಗೆ ವಿಶೇಷ ಪೂಜಾ ಸಲ್ಲಿಸಿ ಮಕ್ಕಳೊಂದಿಗೆ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುವುದರ ಮೂಲಕ ತಮ್ಮ ಗುರು ಭಕ್ತಿಯನ್ನು ವ್ಯಕ್ತಪಡಿಸಿದ್ದಾರೆ ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ ಸುಲ್ತಾವರು ತ್ರಿಭಾಷಕವಿ ಪಂಡಿತ್ ಪುಟ್ಟರಾಜ ಕವಿ ಗವಾಯಿಗಳವರ ಪರಮ ಶಿಕ್ಷಕರಾಗಿ ಅಂದಿನಿಂದ ಇಂದಿನವರೆಗೆ ಆಶ್ರಮದೊಂದಿಗೆ ತಮ್ಮ ಧಾನ್ಯವನ್ನು ವೃದ್ಧಿಸಿಕೊಂಡಿದ್ದು ಅವರಿಗೆ ಗುರುವರ್ಯರು ಸುಖ ಶಾಂತಿ ಸಮೃದ್ಧಿ ಹಾಗೂ ಸಂಗೀತ ಕ್ಷೇತ್ರದ ಸಾಧನೆಗೆ ಅನುಗ್ರಹಿಸಲಿ ಎಂದು ಆಶೀರ್ವದಿಸಿದರು ಈ ಸಂದರ್ಭದಲ್ಲಿ ಕಾರಟಗಿಯ ಭೋಜರಾಜ್ ಹಾಗೂ ವಿಜಾಪುರದ ಸ್ನೇಹಿತೆಯರು ಪಾಲ್ಗೊಂಡಿದ್ದರು.
Legal action if domestic gas is used for commercial purposes ವಾಣಿಜ್ಯ ಉದ್ದೇಶಕ್ಕೆ ಗೃಹ ಬಳಕೆ ಅನಿಲ…
Municipal Council budget pre-meeting on March 16thPublic invited to participate by civic commissioner ಮಾ.16ರಂದು ನಗರಸಭೆ…
Let's have a plastic-free lifestyle: Nagaraj S. Guttedar ಪ್ಲಾಸ್ಟಿಕ್ ಮುಕ್ತ ಜೀವನಶೈಲಿ ನಮ್ಮದಾಗಲಿ: ನಾಗರಾಜ್ ಎಸ್ ಗುತ್ತೇದಾರ್…
Women need legal knowledge: Lawyer Nandini's advice on Women's Day ಮಹಿಳೆಗೆ ಕಾನೂನು ಅರಿವು ಅಗತ್ಯ: ಮಹಿಳಾ…
Government warns Samar International Islamic School for starting school enrollment in violation of court order…
Karnataka Provincial Farmers' Association demands justice for Kudathini land victims. ಕುಡತಿನಿ ಭೂ ಸಂತ್ರಸ್ತರಿಗೆ ನ್ಯಾಯ ಕೊಡಿಸಲು…