SSLC exam from March 18: Prohibitory order imposed-
ಮಾ.18 ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ: ನಿಷೇಧಾಜ್ಞೆ ಜಾರಿ–
ಕೊಪ್ಪಳ ಮಾರ್ಚ್ 12, (ಕರ್ನಾಟಕ ವಾರ್ತೆ): ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ವಾರ್ಷಿಕ ಪರೀಕ್ಷೆಗಳು ಮಾರ್ಚ್ 18 ರಿಂದ ಎಪ್ರಿಲ್ 2 ರವರೆಗೆ ಕೊಪ್ಪಳ ಜಿಲ್ಲೆಯಾದ್ಯಂತ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಡಾ.ಸುರೇಶ್ ಬಿ. ಇಟ್ನಾಳ್ ಅವರು ಆದೇಶ ಹೊರಡಿಸಿದ್ದಾರೆ.
ಎಸ್.ಎಸ್.ಎಲ್.ಸಿ ಪರೀಕ್ಷೆ-1 ರ ಪರೀಕ್ಷೆಗಳು ಮಾರ್ಚ್ 18 ರಿಂದ ಎಪ್ರಿಲ್ 2 ರವರೆಗೆ ಬೆಳಿಗ್ಗೆ 10 ಗಂಟೆ ಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕೊಪ್ಪಳ ಜಿಲ್ಲೆಯ ಒಟ್ಟು 74 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, ಪರೀಕ್ಷೆಗಳನ್ನು ಸುಗಮ ಮತ್ತು ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಅಂತರದ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಕೊಪ್ಪಳ ತಾಲ್ಲೂಕಿ 21, ಗಂಗಾವತಿ ತಾಲ್ಲೂಕಿನ 14, ಕುಷ್ಟಗಿ ತಾಲ್ಲೂಕಿನ 15, ಯಲಬುರ್ಗಾ ತಾಲ್ಲೂಕಿನ 7, ಕುಕನೂರು ತಾಲ್ಲೂಕಿನ 8, ಕಾರಟಗಿ ತಾಲ್ಲೂಕಿನ 5 ಹಾಗೂ ಕನಕಗಿರಿ ತಾಲ್ಲೂಕಿನ 4 ಪರೀಕ್ಷಾ ಕೇಂದ್ರಗಳು ಸೇರಿದಂತೆ ಜಿಲ್ಲೆಯ ಒಟ್ಟು 74 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ.
ನಿಷೇಧಾಜ್ಞೆ ಆದೇಶದನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ. ಮೊಬೈಲ್, ಪೇಜರ್, ಜರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೆ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತçಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
Legal action if domestic gas is used for commercial purposes ವಾಣಿಜ್ಯ ಉದ್ದೇಶಕ್ಕೆ ಗೃಹ ಬಳಕೆ ಅನಿಲ…
Municipal Council budget pre-meeting on March 16thPublic invited to participate by civic commissioner ಮಾ.16ರಂದು ನಗರಸಭೆ…
Let's have a plastic-free lifestyle: Nagaraj S. Guttedar ಪ್ಲಾಸ್ಟಿಕ್ ಮುಕ್ತ ಜೀವನಶೈಲಿ ನಮ್ಮದಾಗಲಿ: ನಾಗರಾಜ್ ಎಸ್ ಗುತ್ತೇದಾರ್…
Women need legal knowledge: Lawyer Nandini's advice on Women's Day ಮಹಿಳೆಗೆ ಕಾನೂನು ಅರಿವು ಅಗತ್ಯ: ಮಹಿಳಾ…
Government warns Samar International Islamic School for starting school enrollment in violation of court order…
Karnataka Provincial Farmers' Association demands justice for Kudathini land victims. ಕುಡತಿನಿ ಭೂ ಸಂತ್ರಸ್ತರಿಗೆ ನ್ಯಾಯ ಕೊಡಿಸಲು…