Municipal Council budget pre-meeting on March 16th
Public invited to participate by civic commissioner
ಮಾ.16ರಂದು ನಗರಸಭೆ ಬಜೆಟ್ ಪೂರ್ವಭಾವಿ ಸಭೆ
ಸಾರ್ವಜನಿಕರು ಭಾಗವಹಿಸಲು ಪೌರಾಯುಕ್ತರು ಕರೆ
ಗಂಗಾವತಿ:ನಗರಸಭೆಯ 2026-27ನೇ ಸಾಲಿನ ಆಯ-ವ್ಯಯದ ಬಜೆಟ್ ಮಂಡಣೆ ಕುರಿತು ಮಾ.16 ರಂದು ಸೋಮವಾರ ಸಂಜೆ 4 ಗಂಟೆಗೆ ಪೂರ್ವಭಾವಿ ಸಭೆ ನಡೆಸಲಾಗುತ್ತಿದೆ.
ಈ ಸಭೆಗೆ ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು, ನಗರಸಭೆ ಮಾಜಿ ಅಧ್ಯಕ್ಷರು, ಮಾಜಿ ಸದಸ್ಯರು, ವ್ಯಾಪಾರಸ್ಥರು, ಉದ್ಯಮಿಗಳು, ಸಾರ್ವಜನಿಕರು, ಪತ್ರಕರ್ತರು ಆಗಮಿಸಿ ಬಜೆಟ್ ಮಂಡನೆ ಕುರಿತು ತಮ್ಮ ಸಲಹೆ ನೀಡಬೇಕು ಎಂದು ಪೌರಾಯುಕ್ತ ವಿರುಪಾಕ್ಷಮೂರ್ತಿ ಕರೆ ನೀಡಿದ್ದಾರೆ.
ಈ ಕುರಿತು ಅವರು ಮಾಧ್ಯಮಗಳಿಗೆ ಪ್ರಕಟಣೆ ನೀಡಿದ್ದಾರೆ.
ಮಾ.16ರಂದು ಸಂಜೆ 4 ಗಂಟೆಗೆ ಗಂಗಾವತಿ ನಗರಸಭೆಯ ಸಭಾಂಗಣದಲ್ಲಿ ನಗರಸಭೆಯ 2026-27ನೇ ಸಾಲಿನ ಆಯ-ವ್ಯಯ ಮುಂಗಡ ಪತ್ರದ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿದೆ.
ಗಂಗಾವತಿ ನಗರದ ಅಭಿವೃದ್ಧಿ, ತೆರಿಗೆ ಸಂಗ್ರಹ, ಕುಡಿಯುವ ನೀರು ಸೌಲಭ್ಯ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಒದಗಿಸಲು ಹಾಗೂ ಸೌಂದರೀಕರಣಕ್ಕೆ 2026-27ರಲ್ಲಿ ಕೈಗೊಳ್ಳಬೇಕಾದ ಕ್ರಮ ಕುರಿತು ನಡೆಯುವ ಆಯ ವ್ಯಯದ ಕುರಿತು ಚರ್ಚಿಸಲು ಮತ್ತು ಬಜೆಟ್ ಮಂಡನೆಗೆ ತಮ್ಮಿಂದ ಸೂಕ್ತ ಲಸಹೆಗಳನ್ನು ಸ್ವೀಕರಿಸಲು ಈ ಬಜೆಟ್ ಪೂರ್ವಭಾವಿ ಸಭೆ ನಡೆಸಲಾಗುತ್ತಿದೆ.
ಸರ್ವರು ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಪೌರಾಯುಕ್ತರು ಕೊರಿದ್ದಾರೆ.
Legal action if domestic gas is used for commercial purposes ವಾಣಿಜ್ಯ ಉದ್ದೇಶಕ್ಕೆ ಗೃಹ ಬಳಕೆ ಅನಿಲ…
Let's have a plastic-free lifestyle: Nagaraj S. Guttedar ಪ್ಲಾಸ್ಟಿಕ್ ಮುಕ್ತ ಜೀವನಶೈಲಿ ನಮ್ಮದಾಗಲಿ: ನಾಗರಾಜ್ ಎಸ್ ಗುತ್ತೇದಾರ್…
Women need legal knowledge: Lawyer Nandini's advice on Women's Day ಮಹಿಳೆಗೆ ಕಾನೂನು ಅರಿವು ಅಗತ್ಯ: ಮಹಿಳಾ…
Government warns Samar International Islamic School for starting school enrollment in violation of court order…
Karnataka Provincial Farmers' Association demands justice for Kudathini land victims. ಕುಡತಿನಿ ಭೂ ಸಂತ್ರಸ್ತರಿಗೆ ನ್ಯಾಯ ಕೊಡಿಸಲು…
Construction of a money shed by adding an 11 KV electricity pole in Ward 31…