Tree plantation and free eye check-up camp on the occasion of World Nature Conservation Day*

ವಿಶ್ವ ಪ್ರಕೃತಿ ಸಂರಕ್ಷಣಾ ದಿನದ ಅಂಗವಾಗಿ ಗಿಡ ನೆಡುವಿಕೆ ಹಾಗೂ ಉಚಿತ ಕಣ್ಣು ತಪಾಸಣಾ ಶಿಬಿರ*

ವರದಿ:ಬಂಗಾರಪ್ಪ .ಸಿ
ಸಾತನೂರು : ವಿಶ್ವ ಪ್ರಕೃತಿ ಸಂರಕ್ಷಣಾ ದಿನದ ಅಂಗವಾಗಿ ಲಯನ್ಸ್ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ 317ಎ, ಲಯನ್ಸ್ ಸಂಸ್ಥೆ ಬೆಂಗಳೂರು ವಿಜಯಮಹಲ್ ಹಾಗೂ ಲಯನ್ಸ್ ಸಂಸ್ಥೆ ಬೆಂಗಳೂರು ನಾಡಪ್ರಭು ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಮತ್ತು ಗಿಡ ನೆಡುವ ಕಾರ್ಯಕ್ರಮವನ್ನು ಶ್ರೀ ಶಾರದಾ ವಿದ್ಯಾ ಮಂದಿರ, ಸಾತನೂರಿನಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪರಿಸರ ಪ್ರೇಮಿ ಲಯನ್ ಮರಸಪ್ಪ ರವಿ ವಹಿಸಿದ್ದರು. ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 2.00 ಗಂಟೆಯವರೆಗೆ ನಡೆದ ಶಿಬಿರದಲ್ಲಿ ನೂರಾರು ಸಾರ್ವಜನಿಕರು ಉಚಿತವಾಗಿ ಕಣ್ಣಿನ ತಪಾಸಣೆ ಮಾಡಿಸಿಕೊಂಡು ತಜ್ಞ ವೈದ್ಯರಿಂದ ಸಲಹೆ ಪಡೆದರು. ಅಗತ್ಯವಿರುವ ಫಲಾನುಭವಿಗಳನ್ನು ಮುಂದಿನ ಚಿಕಿತ್ಸೆಗೆ ಗುರುತಿಸಲಾಯಿತು.
ವಿಶ್ವ ಪ್ರಕೃತಿ ಸಂರಕ್ಷಣಾ ದಿನದ ಅಂಗವಾಗಿ ಶಾಲಾ ಆವರಣದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಅಧ್ಯಕ್ಷ ಲಯನ್ ಮರಸಪ್ಪ ರವಿ, “ಪ್ರಕೃತಿಯ ಸಂರಕ್ಷಣೆ ಮತ್ತು ಜನರ ಆರೋಗ್ಯ ಎರಡೂ ಸಮಾಜದ ಸುಸ್ಥಿರ ಅಭಿವೃದ್ಧಿಗೆ ಅತ್ಯಗತ್ಯ. ಪ್ರತಿಯೊಬ್ಬರೂ ಗಿಡ ನೆಟ್ಟು ಅವುಗಳನ್ನು ಪೋಷಿಸುವ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು” ಎಂದು ಕರೆ ನೀಡಿದರು.
ಕಾರ್ಯಕ್ರಮವನ್ನು ಡಾ. ಹೆಚ್. ಶ್ರೀಕಾಂತ್, ಅಧ್ಯಕ್ಷರು ಹಾಗೂ ಆಡಳಿತ ವರ್ಗ, ಶ್ರೀ ಎಜುಕೇಷನ್ ಸೊಸೈಟಿ, ಸ್ಥಳೀಯ ಶಾಲೆಯ ಆಡಳಿತ ಮಂಡಳಿ, ಲಯನ್ಸ್ ಸದಸ್ಯರು, ಶಿಕ್ಷಕರು ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಯಶಸ್ವಿಯಾಗಿ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಲಯನ್ಸ್ ಸದಸ್ಯರು, ಗಣ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿ ಸೇವಾ ಚಟುವಟಿಕೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಾತನೂರು ಮಂಜು. ಸುಶೀಲಾ ಜಿಂಗಾಡೆ. ಎಟಿ ಲೋಕೇಶ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು
