Breaking News

ಕಷ್ಟಪಟ್ಟು ಆರಂಭಿಸುವ ಉದ್ಯಮವನ್ನು ಲಾಭದಾಯಕ ಉದ್ಯಮವಾಗಿಸುವುದು ಮುಖ್ಯ: ಎಡಿಸಿ ಸಿದ್ರಾಮೇಶ್ವರ

The short URL of the present article is: https://kalyanasiri.in/3vgz
It is important to make a difficult-to-start business profitable: ADC Sidrameshwar
Screenshot 2025 10 03 17 27 32 96 E307a3f9df9f380ebaf106e1dc980bb67160283312073159594

ಕೊಪ್ಪಳ ಅಕ್ಟೋಬರ್ 03 (ಕರ್ನಾಟಕ ವಾರ್ತೆ): ಕಷ್ಟಪಟ್ಟು ಆರಂಭಿಸುವ ಉದ್ಯಮವನ್ನು ಲಾಭದಾಯಕ ಉದ್ಯಮವನ್ನಾಗಿಸುವುದು ಹಾಗೂ ಅದನ್ನು ಮುನ್ನಡೆಸಿಕೊಂಡು ಹೋಗುವುದು ಬಹಳ ಮುಖ್ಯ ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಹೇಳಿದರು.
ಸೆ.30 ರಂದು ನಗರದ ಫಾರ್ಚುನ್ ಹೋಟೆಲ್‌ನಲ್ಲಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಕೊಪ್ಪಳ ಹಾಗೂ ಕೆ.ಸಿ.ಟಿ.ಯು ಟೆಕ್ಸಾಕ್, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಎಂ.ಎಸ್.ಎA.ಇ ಗಳ ಕಾರ್ಯಕ್ಷಮತೆ ಹೆಚ್ಚಿಸುವುದು ಮತ್ತು ವೇಗಗೊಳಿಸುವುದು( RAMP ) ಯೋಜನೆಯಡಿ  TReDS     ಕುರಿತು ಹಮ್ಮಿಕೊಂಡಿದ್ದ ಒಂದು ದಿನದ ಅರಿವು ಮೂಡಿಸುವ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸ್ವಂತ ಉದ್ದಿಮೆ ಸ್ಥಾಪಿಸಿ, ಸ್ವಾವಲಂಬಿಯಾಗುವುದು ಹಲವರ ಕನಸು. ಆದರೆ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉದ್ದಿಮೆಯೊಂದನ್ನು ಸ್ಥಾಪಿಸುವುದು ಹಾಗೂ ಅದನ್ನು ಬೆಳೆಸುವುದು ಅಷ್ಟು ಸುಲಭದ ಮಾತಲ್ಲ. ಬಹಳ ಶ್ರಮವಹಿಸಿ ಆರಂಭಿಸಿದ ಉದ್ಯಮವನ್ನು ಲಾಭದಾಯಕಗೊಳಿಸುವುದಷ್ಟೇ ಅಲ್ಲ, ಅದೇ ಲಾಭವನ್ನು ಕಾಯ್ದುಕೊಳ್ಳುವುದು ಮತ್ತು ಇನ್ನಷ್ಟು ಲಾಭದೆಡೆಗೆ ಕೊಂಡೊಯ್ಯುವುದು ಬಹಳ ಮುಖ್ಯ. ಅಂತಹ ಗೊಂದಲ, ಮಾರ್ಗದರ್ಶನದ ಕೊರತೆ ಇರುವವರಿಗೆ ಇಂತಹ ಕಾರ್ಯಾಗಾರಗಳು ಬಹಳ ಸಹಕಾರಿಯಾಗುತ್ತವೆ ಎಂದು ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಮನ್ಸೂರ್ ಅವರು ಮಾತನಾಡಿ, ಕೃಷಿ ಕ್ಷೇತ್ರದ ನಂತರ ಅತೀ ಹೆಚ್ಚು ಎಂ.ಎಸ್.ಎA.ಇ ಕ್ಷೇತ್ರವು ಉದ್ಯಮವನ್ನು ಸೃಷ್ಟಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯು ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ರ‍್ಯಾಂಪ್ ಯೋಜನೆಯನ್ನು ರಾಜ್ಯಾದ್ಯಂತ ಅನುಷ್ಠಾನಗೊಳಿಸುತ್ತಿದೆ. ಇದರ ಭಾಗವಾಗಿ ಈ ದಿನ ಕಾರ್ಯಾಗಾರವನ್ನು ಆಯೋಜಿಸಲಾಗುತ್ತಿದ್ದು, ಜಿಲ್ಲೆಯ ಎಂ.ಎಸ್.ಎA.ಇ. ಕೈಗಾರಿಕೋದ್ಯಮಿಗಳು ನವ ಉದ್ಯಮಗಳನ್ನು ಆರಂಭಿಸಿ ಜಿಲ್ಲೆಯಲ್ಲಿ ಹೆಚ್ಚು ಹೆಚ್ಚು ಉದ್ಯೋಗ ಸೃಷ್ಟಿ ಮಾಡಲು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಕೊಪ್ಪಳ ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷರಾದ ಶ್ರೀನಿವಾಸ ಗುಪ್ತಾ, ಬೆಂಗಳೂರಿನ ಟೆಕ್ಸಾಕ್‌ನ ಸಿಇಒ ಹಾಗೂ ಮುಖ್ಯ ಸಲಹೆಗಾರರಾದ ಸಿದ್ದರಾಜು, ರಿಫಾ ಚೇಂಬರ್ ಆಫ್ ಕಾಮರ್ಸ್ನ ಶಾಹಿದ್ ತಹಶೀಲ್ದಾರ, ಜಿಲ್ಲಾ ಎಸ್.ಬಿ.ಐ ಲೀಡ್ ಬ್ಯಾಂಕ್ ಮುಖ್ಯ ವ್ಯವಸ್ಥಾಪಕರಾದ ಮಾರುತಿ, ಕೆ.ಎಸ್.ಎಫ್.ಸಿಯ ಶಾಖಾ ವ್ಯವಸ್ಥಾಪಕರಾದ ಸೋಮೇಶ ಎಂ.ಚಿಕ್ಕಮಠ, ಸಿಡಾಕ್‌ನ ಜಂಟಿ ನಿರ್ದೇಶಕ ಜಿ.ಯು.ಹುಡೇದ ಸೇರಿದಂತೆ ಕೈಗಾರಿಕೋದ್ಯಮಿಗಳು, ನವೋದ್ಯಮಿಗಳು, ವಿವಿಧ ಕೈಗಾರಿಕಾ ಸಂಘಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಜಾಹೀರಾತು
Screenshot 2025 10 03 17 27 44 56 E307a3f9df9f380ebaf106e1dc980bb64849154789942015361
The short URL of the present article is: https://kalyanasiri.in/3vgz

About Mallikarjun

Check Also

img202510021202142.jpg

ಸ್ವಾಭಿಮಾನಿ ಕಲ್ಯಾಣ ಪರ್ವ 12ನೇ ಶತಮಾನದ ಶರಣರ ಸ್ವಾಭಿಮಾನದ ಪ್ರತೀಕ

Swabhimani Kalyana Parva is a symbol of the self-respect of the 12th century Sharanas. ಹನ್ನೆರಡನೇ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.