Breaking News

ವಿವಿಧ ಸೌಲಭ್ಯಗಳನ್ನು ಒದಗಿಸುವಂತೆ AIPWA ಸಂಘಟನೆಯಿಂದ ಪ್ರತಿಭಟನೆ


ಗಂಗಾವತಿ ನಗರದ ವಾರ್ಡ್ ನಂಬರ್ 27 ಹಾರಿಜನವಾರ್ಡ್ ಏರಿಯಾದಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘಟನೆಯ ನೇತೃತ್ವದಲ್ಲಿ ಇಂದು ಗಂಗಾವತಿ ನಗರಸಭೆ ಮುಂದೆ ಪ್ರತಿಭಟನೆ ಮಾಡಿ ಒತ್ತಾಯದ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘದ ರಾಜ್ಯ ಅಧ್ಯಕ್ಷರಾದ ಕಾ//ನಿರ್ಮಲ ರವರು ನಮ್ಮ ಸಂಘಟನೆಯ

ಜಾಹೀರಾತು

ತಾಲ್ಲೂಕು ಸಮಿತಿಯು 27ನೇ ವಾರ್ಡ್ ನ ಸಮಸ್ಯೆಗಳ ಕುರಿತು ಈಗಾಗಲೇ ಸುಮಾರು ಪತ್ರಗಳನ್ನು ಸಲ್ಲಿಸಿದ್ದರು ಕೂಡ ಇದುವರೆಗೆ ಯಾವುದೇ ಕ್ರಮ ತೆಗೆದು ಕೊಳ್ಳದೆ ಇರುವುದು ನಾಚಿಕೆ ಗೇಡಿನ ಸಂಗತಿಯಾಗಿದೆ ಈಗಲಾದರೂ ಹೆಚ್ಚೆತ್ತುಕೊಂಡು ಕೂಡಲೇ ವಾರ್ಡ್ ನ ಸಮಸ್ಯೆ ಬಗೆಹರಿಸಬೇಕು ಇಲ್ಲದಿದ್ದರೆ ಮುಂದೆ ದೊಡ್ಡ ಮಟ್ಟದ ಹೋರಾಟ ನಡೆಸಬೇಕಾಗುತ್ತದೆ ಎಂದು ಹೆಚ್ಚರಿಸಿದರು.
ಮನವಿ ಪತ್ರ ಸ್ವಿಕರಿಸಿದ AEE ಶಂಕರ್ ಗೌಡ ರವರು ಇಂದೆ ವಾರ್ಡಿನಲ್ಲಿ ಇರುವ ಸಮಸ್ಯೆಗಳಾದ ಶೌಚಾಲಯ ಕ್ಲೀನಿಂಗ್,ಶೌಚಾಲಯಕ್ಕೆ ರಸ್ತೆ,ಶೌಚಾಲಯಕ್ಕೆ ಸರಿಯಾದ ನೀರಿನ ವ್ಯವಸ್ಥೆ ಹಾಗೂ ವಾರ್ಡ್ ನಲ್ಲಿ ಫಾಗಿಂಗ್ ಮಾಡಿಸುವುದು,ವಾರ್ಡ್ ನಲ್ಲಿ ಬ್ಲೀಚಿಂಗ್ ಪೌಡರ್ ಇತರೆ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುತ್ತೆವೆ ಎಂದು ಒಪ್ಪಿಕೊಂಡರು.
ಈ ಸಂಧರ್ಭದಲ್ಲಿ ಹಿರಿಯ ಹೋರಾಟಗಾರರಾದ ಕಾ//ಭಾರದ್ವಾಜ್,ಕಾ//ರತ್ನಮ್ಮ ಬೆಂಗಳೂರ,ಕಾ//ವಿಜಯ ದೊರೆರಾಜು,ಕಾ//ಸಣ್ಣ ಹನುಮಂತಪ್ಪ ಹುಲಿಹೈದರ,ಕಾ//ಹುಲಿಗಮ್ಮ,ಕಾ//ರಾಘಮ್ಮ,ಕಾ//ಶೃತಿ,ಕಾ//ನೇತ್ರಾ,ಕಾ//ರೇಣುಕಮ್ಮ ಇತರರು ಇದ್ದರೂ.

About Mallikarjun

Check Also

ಕಲ್ಯಾಣ ಕರ್ನಾಟಕ ಉತ್ಸವ ದಿನ: ನಿವೇಶನ ಹಕ್ಕು ಪತ್ರ ವಿತರಣೆ

Kalyan Karnataka Festival Day: Land Title Deed Distribution ಕೊಪ್ಪಳ ಸೆಪ್ಟೆಂಬರ್ 18 (ಕರ್ನಾಟಕ ವಾರ್ತೆ): ಜಿಲ್ಲಾಡಳಿತದಿಂದ ಸೆ.17ರಂದು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.