Breaking News

ಗಂಗಾವತಿ:ಕೃಷಿ ಸಖಿಯರ ಪ್ರಗತಿ ಪರಿಶೀಲನಾ ಸಭೆ

Gangavati: Progress review meeting of agricultural sakhiyas

ಜಾಹೀರಾತು


ಗಂಗಾವತಿ: ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಲ್ಲಿ ಅಖಂಡ ಗಂಗಾವತಿ ತಾಲೂಕಿನ ಕೃಷಿ ಸಖಿಯರಿಗೆ ತ್ರೈಮಾಸಿಕ ಸಭೆ ಆಯೋಜಿಸಲಾಯಿತು. ಈ ಸಭೆಯಲ್ಲಿ ಇದುವರೆಗೂ 97% ಗಂಗಾವತಿ ತಾಲೂಕು, 90% ಕಾರಟಗಿ, 88% ಕನಕಗಿರಿ ತಾಲೂಕಿನ ರೈತರ ಈಕೆವೈಸಿ ಮುಗಿದಿವೆ, ಇನ್ನು ಬಾಕಿ ಉಳಿದ ಪಿಜಿಕಲ್ ವೆರಿಪಿಕೆಶನ್, ಈಕೆ ವೈಸಿ ಪೂರ್ಣಗೊಳಿಸಲು ಕೃಷಿ ಸಖಿಯರಿಗೆ ಸಹಾಯಕ ಕೃಷಿ ನಿರ್ದೇಶಕರಾದ ಶ್ರೀ ಸಂತೋಷ್ ಪಟ್ಟದ್ಕಲ್ಲ್ ಸೂಚನೆ ನೀಡಿದ್ದಾರೆ. ಕೃಷಿ ಇಲಾಖೆಯ ಹಲವಾರು ಯೋಜನೆಗಳನ್ನು ಗ್ರಾಮೀಣ ಭಾಗದ ರೈತರ ಮನೆ ಬಾಗಿಲಿಗೆ ತಲುಪಿಸುವ ಜವಾಬ್ದಾರಿ ಕೃಷಿ ಸಖಿಯರದ್ದು. ಎಲ್ಲಾ ರೈತರು ಈಕೆವೈಸಿ ಮಾಡಿಸಿ ಕೇಂದ್ರ ಸರ್ಕಾರದ ಯೋಜನೆಗಳನ್ನು ಪಡೆದುಕೊಳ್ಳಿ ಎಂದು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಸಹಾಯಕ ಕೃಷಿ ನಿರ್ದೇಶಕರಾದ ಶ್ರೀ ಸಂತೋಷ್ ಪಟ್ಟದ್ಕಲ್ಲ್, ಕೃಷಿ ಇಲಾಖೆಯ ಅಧಿಕಾರಿಗಳು, ಆತ್ಮ ಸಿಬ್ಬಂದಿಗಳು ಮತ್ತು ಮೂರು ತಾಲೂಕಿನ ಕೃಷಿ ಸಖಿಯರು ಉಪಸ್ಥಿತರಿದ್ದರು.

About Mallikarjun

Check Also

ಕೃಷ್ಣಾಪೂರ ಡಗ್ಗಿ ಅಂಗನವಾಡಿಕೇಂದ್ರದಲ್ಲಿಪೋಷಣಾಭಿಯಾನ,ಉಡಿತುಂಬುವ ಕಾರ್ಯಕ್ಕೆ ಚಾಲನೆ

Krishnapura Daggi Anganwadi Center launched nutrition drive ಪೋಷಣಾಭಿಯಾನದ ಪರಿಣಾಮ ಅಪೌಷ್ಠಿಕತೆ ದೂರವಾಗುತ್ತಿದೆ:ಇಒ ಲಕ್ಷ್ಮಿದೇವಿ*ಕೃಷ್ಣಾಪೂರ ಡಗ್ಗಿ ಅಂಗನವಾಡಿ ಕೇಂದ್ರದಲ್ಲಿ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.