Breaking News

ಇಂದು ಮಂಟೇಸ್ವಾಮಿ ಕಥಾ ಪ್ರಸಂಗದ ರೂವಾರಿ ಡಾ. ಹೆಚ್. ಎಸ್. ಶಿವಪ್ರಕಾಶ್ ಅವರಿಗೆ ಅಭಿನಂದನಾ ಸಮಾರಂಭ

Dr. Ruwari of Manteswami story episode today. H. S. A felicitation ceremony for Shivprakash

ಜಾಹೀರಾತು

ಬೆಂಗಳೂರು: ಸೆ,1: ಸಿರಿವರ ಕಲ್ಟರ್ ಅಕಾಡೆಮಿ ಹಾಗೂ ಅನನ್ಯ ಕ್ರಿಯೇಷನ್ಸ್ ಅರ್ಪಿಸುವ ಹೆಸರಾಂತ ಲೇಖಕರು ಮತ್ತು ನಾಟಕಕಾರರೂ ಆದ ಡಾ. ಹೆಚ್. ಎಸ್. ಶಿವಪ್ರಕಾಶ್ ಅವರಿಗೆ ಅಭಿನಂದನಾ ಸಮಾರಂಭವನ್ನು ಇದೇ ಸೋಮವಾರ ಸಂಜೆ 5.30ಕ್ಕೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದೆಂದು ಅನನ್ಯ ಕ್ರಿಯೇಷನ್ಸ್ ನ ಕಾರ್ಯದರ್ಶಿ ರಾಜೇಶ್ ರಾಂಪುರ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಡಾ. ಹೆಚ್. ಎಸ್. ಶಿವಪ್ರಕಾಶ್ ಅವರಿಗೆ ಅಭಿನಂದನಾದಲ್ಲಿ ನಾಡಿನ ಖ್ಯಾತ ಹಿರಿಯ ಕವಿಗಳು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಪ್ರೊ. ಎಸ್.ಜಿ. ಸಿದ್ದರಾಮಯ್ಯ ಹಾಗೂ ಹೆಸರಾಂತ ಸಂಗೀತ ನಿರ್ದೇಶಕರು, ಚಿತ್ರ ಸಾಹಿತಿ ಡಾ.ಹಂಸಲೇಖ ರವರು, ರವೀಂದ್ರನಾಥ ಸಿರಿವರ ಮತ್ತಿತರರು ಭಾಗವಹಿಸುವವರು.

ನಗರದ ರವೀಂದ್ರ ಕಲಾಕ್ಷೇತ್ರ, ಜೆಸಿ ರಸ್ತೆಯ ಸೋಮವಾರ ಸಂಜೆ 5.30ಕ್ಕೆ ಮಂಟೇಸ್ವಾಮಿ ಕಥಾ ಪ್ರಸಂಗ ನಾಟಕವನ್ನು ಪ್ರಸ್ತುತಪಡಿಸಲಾಗುತ್ತದೆ. ರಚನೆ: ಡಾ.ಎಚ್.ಎಸ್.ಶಿವಪ್ರಕಾಶ್ ನಿರ್ದೇಶನ: ಮೈಮ್ ರಮೇಶ್, ಸಂಗೀತ: ದೇವಾನಂದ ವರಪ್ರಸಾದ್, ಈ ನಾಟಕವು ಉಚಿತ ಪ್ರವೇಶವಾಗಿರುತ್ತದೆ.

About Mallikarjun

Check Also

ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆಯಲ್ಲಿ ಮಹತ್ವದ ನಿರ್ಣಯ

Important decision taken at the District Level Guarantee Scheme Implementation Authority Committee meeting ಬ್ಯಾಂಕಿನ ಸಾಲಕ್ಕೆ …

Leave a Reply

Your email address will not be published. Required fields are marked *