Breaking News

ರಾಜ್ಯ ಸರ್ಕಾರ ಒಳಮೀಸಲಾತಿ ನೀಡಲಿಸಂಸದ ಗೋವಿಂದ ಕಾರಜೋಳ

Govinda Karajola of Parliament should give internal reservation to the state government

ಜಾಹೀರಾತು
IMG 20240924 WA0199

ಕಾನ ಹೊಸಹಳ್ಳಿ: ಹೊಸಹಳ್ಳಿ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 50ರ ಬಳಿ ಇರುವಗಾಣಿಗರ ಸಮುದಾಯ ಭವನದ ಮುಂಭಾಗದಲ್ಲಿ ಚಿತ್ರದುರ್ಗದ ಲೋಕಸಭಾ ಸದಸ್ಯರಾದ ಗೋವಿಂದ ಕಾರಜೋಳ ಇವರು ಚಿತ್ರದುರ್ಗ ಮಾರ್ಗದಿಂದ ಸಂಚರಿಸುವ ಮಾರ್ಗದ ಮಧ್ಯ ಕಾನ ಹೊಸಹಳ್ಳಿ ಹೋಬಳಿ ವ್ಯಾಪ್ತಿಯ ದಲಿತ ಮುಖಂಡರು ಭೇಟಿಯಾಗಿ ಒಳ ಮೀಸಲಾತಿ ಬಗ್ಗೆ ಚರ್ಚೆ ನಡೆಸಿದರು. ನಂತರ ಮಾತನಾಡಿದ ಅವರು ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಅಗತ್ಯ ಇದೆ. ಈ ಸಂಬಂಧ ಬೊಮ್ಮಾಯಿ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿತ್ತು. ಸುಪ್ರೀಂ ಕೋರ್ಟ್‌ ತೀರ್ಪಿನಿಂದ ಅಡೆತಡೆಗಳೆಲ್ಲ ನಿವಾರಣೆಯಾಗಿವೆ. ಈಗಿನ ಸರ್ಕಾರ ಮುತುವರ್ಜಿ ವಹಿಸಿ ಒಳಮೀಸಲಾತಿ ನೀಡಬೇಕು‌. ದಲಿತ ಸಮುದಾಯದವರು ಸಾವಿರ ಸಂಖ್ಯೆಯಲ್ಲಿ ಒಳ ಮೀಸಲಿನ ಅನುಷ್ಠಾನಕ್ಕೆ ಶೀಘ್ರದಲ್ಲೇ ಸಮಾವೇಶ ನಡೆಸೋಣ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಎನ್ ರವಿಕುಮಾರ್ ವಿಧಾನಪರಿಷತ್ ಸದಸ್ಯರು, ಚಿತ್ರದುರ್ಗ ದಲಿತ ಮುಖಂಡ ಮುರಾರ್ಜಿ ಡಿ ಓ, ಡಿಎಸ್ಎಸ್ ತಾಲೂಕ ಅಧ್ಯಕ್ಷ ಟಿ ಗಂಗಾಧರ್, ಗ್ರಾ.ಪಂ ಸದಸ್ಯ ಹೊನ್ನೂರ ಸ್ವಾಮಿ, ಕಾನಾಮಡುಗು ಎಚ್ ದುರುಗಪ್ಪ, ಡಿಎಸ್ಎಸ್ ಜಿಲ್ಲಾ ಕಾರ್ಯಕಾರಣಿ ಸಮಿತಿ ಸದಸ್ಯ ಕಾನಮಡುಗು ದುರುಗಪ್ಪ, ಸಂಘಟನಾ ಸಂಚಾಲಕ ಎನ್. ಪಕೀರಪ್ಪ ಕಾನಮಡಗು, ನಡವಲುಮನೆ ತಿಪ್ಪೇಸ್ವಾಮಿ, ತಿಪ್ಪೇಸ್ವಾಮಿ, ಹೇಮಣ್ಣ, ನೀರಗುಂಟೆ ತಿಪ್ಪೇಶ್, ಮಾದಿಗ ದಂಡೋರ ಸಂಘದ ಹೋಬಳಿ ಅಧ್ಯಕ್ಷ ಎಂ ಬಸವರಾಜ್, ಸಣ್ಣ ನಾಗರಾಜ, ಮಂಜುನಾಥ, ದುರುಗೇಶ್, ಯಂಬಳಿ ಸಿದ್ದಪ್ಪ, ಕರಿಬಸಪ್ಪ ಸೇರಿದಂತೆ ದಲಿತ ಸಮುದಾಯದ ಮುಖಂಡರು, ಗ್ರಾ.ಪಂ ಸದಸ್ಯರು, ಯುವಕರು ಇತರರು ಇದ್ದರು.

About Mallikarjun

Check Also

screenshot 2025 10 25 17 53 12 59 6012fa4d4ddec268fc5c7112cbb265e7.jpg

ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಶತೋತ್ತರ ದಶಮಾನೋತ್ಸವದ ಪೂರ್ವಭಾವಿ ಸಭೆ

Preparatory meeting for the centenary celebrations of Shivaratri Rajendra Mahaswamy. ವರದಿ: ಬಂಗಾರಪ್ಪ .ಸಿ .ಹನೂರು : …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.