Breaking News

ಅರಿವು ಕೇಂದ್ರದ ಮೇಲ್ವಿಚಾರಕರಿಗೆ ನಾಯಕತ್ವ ಮತ್ತು ಕೌಶಲ್ಯ ಅಭಿವೃದ್ಧಿ ತರಬೇತಿ

Leadership and skill development training for awareness center supervisors

ಜಾಹೀರಾತು
IMG 20240926 WA0307 1024x461

ವಿಜಯನಗರ:ದಿನಾಂಕ 25/09/2024 ಬುಧುವಾರ ಶಿಕ್ಷಣ ಫೌಂಡೇಶನ್ ಸಂಸ್ಥೆಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಹಯೋಗದಲ್ಲಿ ವಿಜಯನಗರ ಜಿಲ್ಲೆಯ 6 ತಾಲೂಕಿನ 40 ಗ್ರಾಮ ಪಂಚಾಯತ್ ಅರಿವು ಕೇಂದ್ರದ ಮೇಲ್ವಿಚಾರಕರಿಗೆ ನಾಯಕತ್ವ ಹಾಗೂ ಕೌಶಲ್ಯ ಅಭಿವೃದ್ಧಿ

IMG 20240926 WA0309 Scaled

ತರಬೇತಿಯನ್ನು ಹೊಸಪೇಟೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಹೊಸಪೇಟೆ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಶ್ರೀಯುತ ಕಾಂತರಾಜು D ಮತ್ತು ಶಿಕ್ಷಣ ಫೌಂಡೇಶನ್ ಸಂಸ್ಥೆಯ ಉತ್ತರ ಕರ್ನಾಟಕ ವಿಭಾಗದ ಸಂಯೋಜರಾದ ಶ್ರೀಯುತ ಶರಣಪ್ಪ ಕಟ್ಟಿಮನಿ ಹಾಗೂ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಯಾದ ಶ್ರೀಮತಿ ರಂಜನಿ ಬೆಂಗಳೂರು , ಇವರು ಉದ್ಘಾಟನೆ ಮಾಡಿದರು.
ಶಿಬಿರಾರ್ಥಿಗಳಿಗೆ ಮೇಲ್ವಿಚಾರಕರಿಗೆ ಡಿಜಿಟಲ್ ಸಾಕ್ಷರತೆ ಕಾರ್ಯಕ್ರಮವನ್ನು ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ತರಬೇತಿ ಕುರಿತು ಹಾಗೂ ಲೈಬ್ರರಿಯನ್ ಪೋರ್ಟಲ್ ನಲ್ಲಿ ಸ್ವಸಹಾಯ ಸಂಘದ ಸದಸ್ಯರನ್ನು ನೊಂದಣಿ ಮಾಡುವ ಕುರಿತು ಮಾಹಿತಿ ನೀಡಲಾಯಿತು. ಮತ್ತು ತರಬೇತಿಯಲ್ಲಿ ವಿನೂತನ ಚಟುವಟಿಕೆಗಳಲ್ಲಿ ಶಿಬಿರಾರ್ಥಿಗಳು ಆಸಕ್ತಿಯಿಂದ ಭಾಗವಹಿಸುವುದರ ಮೂಲಕ ತರಬೇತಿಯೂ ಸಂಪೂರ್ಣ ಹಾಜರಾತಿಯೊಂದಿಗೆ ಯಶಸ್ವಿಯಾಗಿ ನಡೆಯಿತು.
ತರಬೇತಿಯಲ್ಲಿ ಜಿಲ್ಲಾ ಸಂಯೋಜಕರಾದ ಎಸ್.ಬಿ ಶ್ರೀಧರ್ ಹಾಗೂ ಬಸವರಾಜು ಬಿ. ಎ ಉಪಸ್ಥಿತರಿದ್ದರು

About Mallikarjun

Check Also

20251015 201304 collage.jpg

ರೈತರು ಕೃಷಿ ಸಂಸ್ಕರಣಾ ಘಟಕ ತರಬೇತಿಯಸದುಪಯೋಗ ಪಡೆದುಕೊಳ್ಳಬೇಕು- ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Farmers should take advantage of agro-processing unit training - Union Minister Nirmala Sitharaman ಕೊಪ್ಪಳ ಅಕ್ಟೋಬರ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.