Breaking News

2024ನೇ ಸಾಲಿನ ಸಂಸ್ಕೃತಿ – ಸಂಗಮ ಪ್ರಶಸ್ತಿ ಪ್ರದಾನ ಸಮಾರಂಭ

IMG 20241016 WA0380

Culture 2024 – Confluence Award Ceremony

ಜಾಹೀರಾತು


ಬೆಂಗಳೂರು, ಅ,16; 2024 ನೇ ಸಾಲಿನ ಸಂಸ್ಕೃತಿ – ಸಂಗಮ ಪ್ರಶಸ್ತಿ ಪ್ರದಾನ ಸಮಾರಂಭ ಈ ತಿಂಗಳ 20 ರಂದು ಗಾಂಧಿ ಭವನದಲ್ಲಿ ನಡೆಯಲಿದೆ ಎಂದು ನಿವೃತ್ತ ಐಎಎಸ್ ಅಧಿಕಾರಿ ಡಾ. ಸಿ. ಸೋಮಶೇಖರ್ ತಿಳಿಸಿದ್ದಾರೆ.

IMG 20241016 WA0379 1024x1024


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಚನ ಸಾಹಿತ್ಯ ಕ್ಷೇತ್ರದಲ್ಲಿನ ಜೀವಮಾನ ಸಾಧನೆಗಾಗಿ ಡಾ. ಬಸವರಾಜ ಸಬರದ, ದಾಸ ಸಾಹಿತ್ಯ ಕ್ಷೇತ್ರದಲ್ಲಿನ ಜೀವಮಾನ ಸಾಧನೆಗಾಗಿ ಡಾ. ಕೃಷ್ಣ ಕೊಲ್ಹಾರ ಕುಲಕರ್ಣಿ, ಜಾನಪದ ಸಾಹಿತ್ಯ ಕ್ಷೇತ್ರದಲ್ಲಿನ ಜೀವಮಾನ ಸಾಧನೆಗಾಗಿ ಡಾ. ಬಸವರಾಜ ನೆಲ್ಲಿಸ, ಸಂಗೀತ ಕ್ಷೇತ್ರದಲ್ಲಿನ ಜೀವಮಾನ ಸಾಧನೆಗಾಗಿ ಡಾ. ಜಯದೇವಿ ಜಂಗಮಶೆಟ್ಟಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.

IMG 20241016 WA0381 1024x1024


ನಗರದ ಗಾಂಧಿ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರತಿಷ್ಠಿತ ” ಸಂಸ್ಕೃತಿ – ಸಂಗಮ” ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಬೆಳಗಾವಿ ಜಿಲ್ಲೆಯ ನಾಗನೂರು ಶ್ರೀ ರುದ್ರಾಕ್ಷಿ ಮಠದ ಡಾ. ಅಲ್ಲಮ ಪ್ರಭು ಮಹಾ ಸ್ವಾಮೀಜಿ, ಕೇಂದ್ರದ ಜಲ ಶಕ್ತಿ ಹಾಗೂ ರೈಲ್ವೆ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣನವರು ಈ ಸಮಾರಂಭದ ಉದ್ಘಾಟನೆ ನೆರವೇರಿಸಿ ಪ್ರತಿಷ್ಠಿತ ಸಂಸ್ಕೃತಿ ಸಂಗಮ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ.
ಹಿರಿಯ ಸಾಹಿತಿ ನಾಡೋಜ ಡಾ. ಹಂ.ಪ.ನಾಗರಾಜಯ್ಯ ಭಾಗವಹಿಸಲಿರುವ ಕಾರ್ಯಕ್ರಮದಲ್ಲಿ ಪರಿಚಯಾತ್ಮಕ ಸಂಸ್ಕೃತಿ ಸಂಗಮ ವಿಶೇಷ ಸಂಚಿಕೆಯನ್ನು ಕಿರುತರೆ ನಿರ್ದೇಶಕ ಟಿ. ಎನ್. ಸೀತಾರಂಬಿಡುಗಡೆ ಮಾಡಲಿದ್ದಾರೆ. ಕಾರ್ಯಕ್ರಮಕ್ಕೂ ಮುನ್ನ ಬೆಳಗ್ಗೆ 10 ಗಂಟೆಗೆ ಪ್ರಖ್ಯಾತ ಹಿಂದುಸ್ತಾನಿ ಗಾಯಕರಾದ ಡಾ. ಜಯದೇವಿ ಜಂಗಮ ಶೆಟ್ಟಿ ಅವರಿಂದ ವಚನ ಗಾಯನ ಕಾರ್ಯಕ್ರಮ ನಡೆಯಲಿದೆ ಎಂದರು.

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.