Breaking News

ಗುಡೇಕೋಟೆ ಮೃತ ರೈತ ಕುಟುಂಬಕ್ಕೆ ಶಾಸಕ ಡಾ||.ಎನ್.ಟಿ.ಶ್ರೀನಿವಾಸ್ ಸಾಂತ್ವನ.

Condolences to the Gudekote deceased farmer’s family MLA Dr. NT Srinivas.

ಜಾಹೀರಾತು
IMG 20241021 WA0226




ಗುಡೇಕೋಟೆ:- ಕೂಡ್ಲಿಗಿ ತಾಲೂಕು ಗುಡೇಕೋಟೆ ಗ್ರಾಮದ ರೈತ ಎಂ.ಚಂದ್ರಪ್ಪ ಎಂಬುವವರು ಕಳೆದ ಗುರುವಾರ ಸಂಜೆ 4 ಗಂಟೆ ಸಮಯದಲ್ಲಿ ಹೊಲದಲ್ಲಿ ಧನಗಳಿಗೆ ಹುಲ್ಲು ಕೊಯ್ಯುವಾಗ ವಿಷಜಂತು ಹಾವೊಂದು ಕಚ್ಚಿ ಸಾವಿಗೀಡಾಗಿದ್ದರು. ಮೃತ ಬಡರೈತ ಕುಟುಂಬಕ್ಕೆ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ||.ಎನ್.ಟಿ.ಶ್ರೀನಿವಾಸ್ ರವರು ತಮ್ಮ ನಿವಾಸದಲ್ಲಿ ಕುಟುಂಬದವರಿಗೆ ಸಾಂತ್ವನ ಹೇಳಿ ಆರ್ಥಿಕ ಸಹಾಯ ಮಾಡಿದರು.

ಶಾಸಕ ಡಾ||ಎನ್ ಟಿ ಶ್ರೀನಿವಾಸ್ ಮಾತನಾಡಿ, ಈ ಘಟನೆ ನಮಗೆ ಜೀರ್ಣಿಸಲು ಆಗುವುದಿಲ್ಲ. ಭಗವಂತ ಮೃತರ ಕುಟುಂಬಗಳಿಗೆ ದುಃಖ ತಡೆದುಕೊಳ್ಳುವ ಶಕ್ತಿ ನೀಡಲಿ ಎಂದು ಕುಟುಂಬದ ಉಳಿದ ಸದಸ್ಯರಿಗೆ ದೈರ್ಯ ತುಂಬಿದ್ದಾರೆ. ಇಂತಹ ಸಂದರ್ಭದಲ್ಲಿ ಎಲ್ಲರೂ ಸಹಾಯ ಮಾಡಬಹುದು. ಆದರೆ ಸಮಾಧಾನ ಮಾಡುವುದು ಕಷ್ಟ. ಈ ದುರ್ಘಟನೆಯ ನೆನಪು ಸದಾ ಕಾಡುತ್ತಿರುತ್ತದೆ. ಅದನ್ನು ಗೆಲ್ಲುವ ಶಕ್ತಿ ದೇವರು ಕುಟುಂಬಕ್ಕೆ ಕೊಡಲಿ. ಘಟನೆ ಸುದ್ದಿ ಕೇಳಿ ನನಗೆ ಬಹಳ ದುಃಖವಾಯಿತು. ಕುಟುಂಬದ ಮಕ್ಕಳಿಗೆ ಮುಂದಿನ ದಿನಗಳಲ್ಲಿ ಅವರ ವಿದ್ಯಾಭ್ಯಾಸಕ್ಕೆ ನೆರವು ನೀಡುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಗುಡೇಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್ ಕೃಷ್ಣ, ಮೃತ ಸಹೋದರ ಪಾಲಯ್ಯ, ಕಾಂಗ್ರೆಸ್ ಮುಖಂಡ ಪೇಂಟ್ ತಿಪ್ಪೇಸ್ವಾಮಿ, ವಾಟಾಳ್ ನಾಗರಾಜ್,ಮೊಟುಪಾಲಯ್ಯನವರ್ ರಾಜಣ್ಣ, ಶ್ರೀನಿವಾಸ್, ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

About Mallikarjun

Check Also

ಉಪ ಲೋಕಾಯುಕ್ತರಿಂದ ಅ.30, 31 ರಂದು ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ

Public inquiry reception program by the Deputy Lokayukta on October 30th and 31st ಕೊಪ್ಪಳ ಅಕ್ಟೋಬರ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.