Breaking News

ಒಣ ಗಾಂಜಾ ಸಹಿತ ಆರೋಪಿ ಬಂಧನ

Accused arrested with dry ganja

ಜಾಹೀರಾತು
Screenshot 2024 10 27 17 06 37 69 6012fa4d4ddec268fc5c7112cbb265e7

ಕಾನ ಹೊಸಹಳ್ಳಿ: ಸಮೀಪದ ಬಣವಿಕಲ್ಲು ಗ್ರಾಮದ ಹೆದ್ದಾರಿ 50ರ ಬಳಿ ಶುಕ್ರವಾರ ಮಧ್ಯಾಹ್ನ 1 ಗಂಟೆ ಸಮಯದಲ್ಲಿ ಗಾಂಜಾ ಪತ್ತೆ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ. ಚಿತ್ರದುರ್ಗದ ರಂಗಸ್ವಾಮಿ ಎಂಬಾತ ಬಂಧಿತ ಆರೋಪಿ. ಆರೋಪಿಯ ಬಳಿಯಲ್ಲಿದ್ದ 2.10 ಕಿ. ಗ್ರಾಂ ಬೀಜ ಸಹಿತ ಒಣ ಗಾಂಜಾ ಹಾಗೂ ದ್ವಿಚಕ್ರವಾಹನ ಜಪ್ತಿ ಮಾಡಿ ಆರೋಪಿಯನ್ನು ದಸ್ತಗಿರಿ, ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಅಬಕಾರಿ ಅಪರ ಆಯುಕ್ತರು (ಅಪರಾಧ) ಕೇಂದ್ರ ಸ್ಥಾನ ಬೆಳಗಾವಿ, ಅಬಕಾರಿ ಜಂಟಿ ಆಯುಕ್ತರು ಹೊಸಪೇಟೆ ವಿಭಾಗ, ಅಬಕಾರಿ ಉಪ ಆಯುಕ್ತರು ವಿಜಯನಗರ ಜಿಲ್ಲೆ, ರವರ ಮಾರ್ಗದರ್ಶನದಲ್ಲಿ ಅಬಕಾರಿ ಉಪ ವಿಭಾಗದ ನಿರೀಕ್ಷಕರಾದ ಲೋಕೇಶ್, ಸಿಬ್ಬಂದಿಗಳಾದ ಸಂತೋಷ್, ಬಸವರಾಜು ಬಂಗಾರಿ, ಶಂಕರ್ ಗುರುವ ಹಾಗೂ ಚಾಲಕರಾದ ಪ್ರಸನ್ನಕುಮಾರ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.