Deepa Sanjeevini program in Ujjani village

ಕೊಟ್ಟೂರು: ಜಿಲ್ಲಾ ಪಂಚಾಯಿತಿ ವಿಜಯನಗರ ತಾಲೂಕು ಪಂಚಾಯಿತಿ ಕೊಟ್ಟೂರು ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ 2024 ರ ಭಾರತಾಂಬೆ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದಿಂದ ಉಜ್ಜನಿ ಗ್ರಾಮದಲ್ಲಿ ದೀಪ ಸಂಜೀವಿನಿ ಕಾರ್ಯಕ್ರಮವನ್ನು ಮಾಡಲಾಯಿತು.
ಈ ಕಾರ್ಯಕ್ರಮಕ್ಕೆ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕರು ನರೇಗಾ ಹಾಗೂ ಎನ್ನಾರಲ್ ಎಮ್ ನೋಡಲ್ ಅಧಿಕಾರಿ ಹೆಚ್ ವಿಜಯ್ ಕುಮಾರ್ ಮತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನಿಂಗಮ್ಮ ಸನ್ಮಾರಪ್ಪ ಇವರು ದೀಪ ಸಂಜೀವಿನಿ ಕಾರ್ಯಕ್ರಮ ಸೋಮವಾರ ಉದ್ಘಾಟನೆಯನ್ನು ಮಾಡಿದರು
ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯಿತಿ ಗೌರವಾನ್ವಿತ ಸದಸ್ಯರು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಮತ್ತು ಒಕ್ಕೂಟದ ಪದಾಧಿಕಾರಿಗಳು ಅಧ್ಯಕ್ಷರು ಕಾರ್ಯದರ್ಶಿ ಖಜಾಂಚಿ ಮತ್ತು ಸಂಘದ ಸದಸ್ಯರುಗಳು ಹಾಗೂ ತಾಲೂಕು ಪಂಚಾಯಿತಿಯ ಮೇಲ್ವಿಚಾರಕರು ಮತ್ತು ಸಿಬ್ಬಂದಿಯಾದ ಎಂಬಿಕೆ ಎಲ್ ಸಿ ಆರ್ ಪಿ ಕೃಷಿ ಸಖಿ ಪಶು ಸಖಿ ಎಫ್ ಎಲ್ ಸಿ ಆರ್ ಪಿ ಭಾಗವಹಿಸಿದ್ದರು ಗ್ರಾಮ ಪಂಚಾಯಿತಿ ಉಜಿನಿ, ಉಪಸ್ಥಿತರಿದ್ದರು.
Kalyanasiri Kannada News Live 24×7 | News Karnataka
