Breaking News

ತರಬೇತಿ ಶಿಬಿರಗಳಿಗೆ ಅರ್ಜಿ ಆಹ್ವಾನ

Application Invitation for Training Camps

ಜಾಹೀರಾತು


ರಾಯಚೂರು ಜ.21,(ಕರ್ನಾಟಕ ವಾರ್ತೆ): ಇಲ್ಲಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಯುವಜನರಿಗೆ ತರಬೇತಿ ಶಿಬಿರಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
15 ದಿನಗಳ ಜಿಮ್/ ಪಿಟ್ನೆಸ್ ತರಬೇತಿ ಶಿಬಿರವು 27.01.2025 ರಿಂದ 10.02.2025ರವರೆಗೆ ನಡೆಯಲಿದ್ದು, ದ್ವಿತೀಯ ಪಿ.ಯು.ಸಿ ಪಾಸ್ ಅಥವಾ ಫೇಲ್ ಆದ ಕನಿಷ್ಟ 16 ವರ್ಷ ಗರಿಷ್ಟ 40 ವರ್ಷದ ಅಭ್ಯರ್ಥಿಗಳಿಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಶಿಬಿರ ಹಮ್ಮಿಕೊಳ್ಳಲಾಗಿದೆ. ಆಸಕ್ತರು ಭಾಗವಹಿಸಬಹುದಗಿದೆ.
08 ದಿನಗಳ ನಿರೂಪಣಾ ಮತ್ತು ವಾರ್ತಾ ವಾಚಕ ತರಬೇತಿ ಶಿಬಿರವನ್ನು 11.02.2025 ರಿಂದ 18.02.2025ರವರೆಗೆ ದ್ವಿತೀಯ ಪಿ.ಯು.ಸಿಯ ಕನಿಷ್ಟ 18 ವರ್ಷ ಗರಿಷ್ಟ 40 ವರ್ಷದ ಅಭ್ಯರ್ಥಿಗಳಿಗೆ ಬೆಂಗಳೂರಿನ ಯುವನೀಕ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಆಸಕ್ತರು ಭಾಗವಹಿಸಬಹುದಗಿದೆ.
ತರಬೇತಿ ಶಿಬಿರಗಳಿಗೆ ಹಾಜರಾಗಲು ಆಸಕ್ತಿಯುಳ್ಳ ಶಿಬಿರಾರ್ಥಿಗಳು ಸಹಾಯಕ ನಿರ್ದೇಶಕರ ಕಾರ್ಯಾಲಯ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ, ರಾಯಚೂರು ಜಿಲ್ಲಾ ಕಚೇರಿಯಲ್ಲಿ ಅರ್ಜಿ ಪಡೆದು 23-01-2025 ರೊಳಗಾಗಿ ಕಚೇರಿ ಅವಧಿಯಲ್ಲಿ ಈ ಕಚೇರಿಗೆ ಸಲ್ಲಿಸಬಹುದಾಗಿದೆ.
ಈ ಶಿಬಿರದಲ್ಲಿ ಹಾಜರಾಗುವ ಯುವಜನರಿಗೆ ಊಟೋಪಹಾರ, ಪ್ರಮಾಣ ಪತ್ರ ಹಾಗೂ ಸಾಮಾನ್ಯ ವಸತಿ ವ್ಯವಸ್ಥೆ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ, ರಾಯಚೂರು ಇಲಿಗ್ಲೆ ಕಚೇರಿ ಅವಧಿಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Mallikarjun

Check Also

ಹಿರೇಬೆಣಕಲ್ ಸೇತುವೆ ಗ್ರಾಮದ ಸಿದ್ಧಗಂಗಾಶ್ರೀ ಬೆಲ್ಲದಚಹಾಅಂಗಡಿಯ ನಾಮಫಲಕತುಮಕೂರು ಸಿದ್ಧಗಂಗಾ ಮಠದ ಶ್ರೀಗಳಿಂದ ಬಿಡುಗಡೆ.

The nameplate of Siddagangasree Jella Tea Shop in Hirebenakal Bridge Village was released by the …

Leave a Reply

Your email address will not be published. Required fields are marked *