Breaking News

ವಿಜೃಂಭಣೆಯಿಂದ ಜರುಗಿದ ಮಾದಪ್ಪನ ದೊಡ್ಡ ರಥೋತ್ಸವ

Madappa’s big chariot festival was celebrated with great pomp.

ಜಾಹೀರಾತು
IMG 20250301 WA0154


ವರದಿ : ಬಂಗಾರಪ್ಪ .ಸಿ.
ಹನೂರು :ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವವು ಬಹಳ ಅಚ್ಚುಕಟ್ಟಾಗಿ ಪ್ರಾಧಿಕಾರದ ವತಿಯಿಂದ ಹಾಗೂ ಜಿಲ್ಲಾಡಳಿತದಿಂದ ಸಕಲ ಸೌಲಭ್ಯಗಳೊಂದಿಗೆ ನೆರೆವೆರಿತು ಎಂದು ಶಾಸಕರಾದ ಎಮ್ ಆರ್ ಮಂಜುನಾಥ್ ತಿಳಿಸಿದರು .

ಹನೂರು ತಾಲ್ಲೂಕು ವ್ಯಾಪ್ತಿಯಲ್ಲಿನ ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಮಹಾಶಿವರಾತ್ರಿ ಅಂಗವಾಗಿ ಶ್ರೀ ಸಾಲೂರು ಬೃಹನ್ಮಠದ ಪೀಠಾಧಿಪತಿಗಳಾದ ಪೂಜ್ಯ ಡಾ. ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಜೀಯವರ ನೇತೃತ್ವದಲ್ಲಿ ಮಹಾರಥೋತ್ಸವು ವಿಜೃಂಭಣೆಯಿಂದ ಜರುಗಿತು .

ಮಹಾರಥವನ್ನು ವಿವಿಧ ಪುಷ್ಪಗಳಿಂದ ಸಿಂಗಾರ ಮಾಡಲಾಗಿತ್ತು, ದೇಗುಲವನ್ನು ತಳಿರು ತೋರಣದಿಂದ ಸಿಂಗಾರ ಮಾಡಲಾಗಿತ್ತು. ಬೆಳಗಿನ ಜಾವತಿ ಗಂಟೆಯಿಂದ 6.30ರವರೆಗೆ ಸ್ವಾಮಿಗೆ ಪ್ರಥಮ ಹಾಗೂ ದ್ವಿತೀಯ ವಿಶೇಷ ಪೂಜೆ ನೆರವೇರಿನ ಲಾಯಿತು. ಸ್ವಾಮೀಜಿಗಳ ಸಮ್ಮುಖದಲ್ಲಿ ಬೆಳಗಿನ ಜಾವ ಪ್ರಥಮ ಹಾಗೂ ದ್ವಿತೀಯ ವಿಶೇಷ ಪೂಜೆ ನೆರವೇರಿಸಿ ನಂತರ ಉಪವಾಸವಿದ್ದ ಬೇಡಗಂಪಣ ಸರದಿ ಅರ್ಚಕರು ಉಪಸ್ಥಿತಿಯಲ್ಲಿ ಛತ್ರಿ, ಚಾಮರ, ವಾದ್ಯ ಮೇಳದೊಂದಿಗೆ ದೇಗುಲ ಪ್ರದಕ್ಷಿಣೆ ಹಾಕಿ ವಿಶೇಷ ಪೂಜೆಯನ್ನು ಸಲ್ಲಿಸಿ ಮೆರವಣಿಗೆಯ ಮೂಲಕ ಉತ್ಸವ ಮೂರ್ತಿಯನ್ನು ಮಹಾರಥೋತ್ಸವವಕ್ಕೆ ತರಲಾಯಿತು . ಶ್ರೀ ಸ್ವಾಮಿಗೆ ಸಂಕಲ್ಪಮಾಡಿ, ಅಷ್ಟೋತ್ತರ. ಬಿಲ್ವಾರ್ಚನೆ, ದೋಪ ದೀಪ ನೈವೇದ್ಯ ಮಹಾಮಂಗಳಾರತಿ ನೆರವೇರಿಸಿದರು. ಈ ವೇಳೆ ಭಕ್ತರು ಉಘೇ ಉಘೇ ಮಹಂತ ಮಲ್ಲಯ್ಯಾ, ಉಘೇ ಮಾದಪ್ಪ ಉಘೇ, ಸಾಲೂರುಮಠದೊಡೆನಿಗೆ ಉಘೇ ಉಘೇ ಎಂಬಿತ್ಯಾದಿ ಘೋಷಣೆಗಳನ್ನು ಕೂಗಿದರು. ಭಕ್ತಿ ಭಾವದ ಸಂಗಮದಲ್ಲಿ ಭಕ್ತರು ಮುಳುಗಿದರು.
ಮಹಾರಥೋತ್ಸವದ
ಶ್ರೀ ಸ್ವಾಮಿಯ ಉತ್ಸವ ಮೂರ್ತಿಯ ಜೋತೆ ಸಾಲೂರು ಶ್ರೀಗಳ ಗುರು ಬ್ರಹ್ಮೋತ್ಸವವು ಜರುಗಿತು. ಇದೇ ಸಂದರ್ಭದಲ್ಲಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಎ ಇ ರಘು . ಸೇರಿದಂತೆ ಇನ್ನಿತರ ಅಧಿಕಾರಿಗಳು ಹಾಗೂ ಭಕ್ತರು ಹಾಜರಿದ್ದರು.

About Mallikarjun

Check Also

screenshot 2025 10 09 11 39 08 53 6012fa4d4ddec268fc5c7112cbb265e7.jpg

ಸರಕಾರಿ ಶಾಲೆಗಳ ರಜೆ ವಿಸ್ತರಣೆಗೆ ಮ್ಯಾಗಳಮನಿ ಖಂಡನೆ.

Magalamani condemns extension of government school holidays. ಗಂಗಾವತಿ :09-ಹಿಂದುಳಿದ ಆಯೋಗವು ನಡೆಸುತ್ತಿರುವ ಗಣತಿ ಆಧಾರದ ಮೇಲೆ ಸರಕಾರಿ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.